ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ 
ದೇಶ

ನೀವೇ ನಮ್ಮ ಪ್ರಧಾನಿಯಾಗಿದ್ದರೆ ನಮ್ಮ ದೇಶ ಬದಲಾಗುತ್ತಿತ್ತು: ಸುಷ್ಮಾರನ್ನು ಕೊಂಡಾಡಿದ ಪಾಕ್ ಪ್ರಜೆ

ಭಾರತದಲ್ಲಿ ವೈದ್ಯಕೀಯ ಚಿಕಿತ್ಸೆ ಪಡೆಯಲು ಬಯಸುತ್ತಿರುವ ಪಾಕಿಸ್ತಾನ ಪ್ರಜೆಗೆ ವೀಸಾ ನೀಡುವಂತೆ ಇಸ್ಲಾಮಾಬಾದ್ ನಲ್ಲಿರುವ ಭಾರತೀಯ ರಾಯಭಾರಿ ಅಧಿಕಾರಿಗಳಿಗೆ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಶುಕ್ರವಾರ ಹೇಳಿದ್ದಾರೆ...

ನವದೆಹಲಿ: ಭಾರತದಲ್ಲಿ ವೈದ್ಯಕೀಯ ಚಿಕಿತ್ಸೆ ಪಡೆಯಲು ಬಯಸುತ್ತಿರುವ ಪಾಕಿಸ್ತಾನ ಪ್ರಜೆಗೆ ವೀಸಾ ನೀಡುವಂತೆ ಇಸ್ಲಾಮಾಬಾದ್ ನಲ್ಲಿರುವ ಭಾರತೀಯ ರಾಯಭಾರಿ ಅಧಿಕಾರಿಗಳಿಗೆ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಶುಕ್ರವಾರ ಹೇಳಿದ್ದಾರೆ. 
ಪಾಕಿಸ್ತಾನದಲ್ಲಿರುವ ಪ್ರಜೆಯೊಬ್ಬರು ಗಂಭೀರವಾದ ರೋಗದಿಂದ ಬಳಲುತ್ತಿದ್ದು, ಶೀಘ್ರಗತಿಯಲ್ಲಿ ಭಾರತದಲ್ಲಿ ಚಿಕಿತ್ಸೆ ಕೊಡಿಸುವ ಅಗತ್ಯವಿದೆ. ವೀಸಾ ಕುರಿತಂತೆ ಪಾಕಿಸ್ತಾನದಲ್ಲಿರುವ ಭಾರತದ ರಾಯಭಾರಿ ಅಧಿಕಾರಿಗಳನ್ನು ಸಂಪರ್ಕಿಸಿದರೆ ನಿಮ್ಮ ಅನುಮತಿ ಬೇಕೆಂದು ಹೇಳುತ್ತಿದ್ದಾರೆಂದು ಹಿಜಾಬ್ ಆಸಿಫ್ ಎಂಬುವವರು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡುವ ಮೂಲಕ ಸುಷ್ಮಾ ಅವರ ಬಳಿ ತಮ್ಮ ಅಳಲು ತೋಡಿಕೊಂಡಿದ್ದರು. 
ಟ್ವೀಟ್ ಮಾಡಿದ ಕೆಲವೇ ನಿಮಿಷಗಳಲ್ಲಿ ಪ್ರತಿಕ್ರಿಯೆ ನೀಡಿದ ಸುಷ್ಮಾ ಸ್ವರಾಜ್ ಅವರು, ಪಾಕಿಸ್ತಾನ ರೋಗಿಗೆ ಕೂಡಲೇ ವೀಸಾ ನೀಡುವಂತೆ ಪಾಕಿಸ್ತಾನದಲ್ಲಿರುವ ಭಾರತೀಯ ರಾಯಭಾರಿ ಗೌತಮ್ ಬಮ್ಬಾವಾಲೆಯವರಿಗೆ ಸೂಚನೆ ನೀಡಿದ್ದಾರೆ. 
ಇದೇ ವೇಳೆ ಪಾಕಿಸ್ತಾನದ ನಾಗರಿಕರಿಗೆ ವೈದ್ಯಕೀಯ ವೀಸಾ ಸಿಗಬೇಕಾದರೆ ಸರ್ತಾಜ್ ಅಜೀಜ್ ಅವರ ಶಿಫಾರಸ್ಸು ಅಗತ್ಯ ಎಂಬ ನಿಯಮದ ಕುರಿತಂತೆ ಪರೋಕ್ಷವಾಗಿ ತಿರುಗೇಟು ನೀಡಿರುವ ಸುಷ್ಮಾ ಅವರು, ಇಂತಹ ಗಂಭೀರ ಪ್ರಕಣಗಳಿಗೂ ಸರ್ತಾಜ್ ಅಜೀಜ್ ಸಾಹೇಬರು ವೀಸಾ ಶಿಫಾರಸ್ಸು ಮಾಡಲು ನಿರಾಕರಿಸಿದ್ದಾರೆಯೇ ಎಂದು ಪ್ರಶ್ನೆ ಮಾಡಿದ್ದಾರೆ. 

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಹಿಜಾಬ್ ಅಸೀಫ್ ಅವರು, ನಮ್ಮಲ್ಲೊಬ್ಬರು ಸರ್ತಾಜ್ ಅಜೀಜ್ ಅಂತ ವಿದೇಶಾಂಗ ಸಚಿವರಿದ್ದಾರೆ. ಅವರು ಬದುಕಿದ್ದಾರೋ ಅಥವಾ ಇಲ್ಲವೋ ಎಂಬುದು ಯಾರಿಗೂ ತಿಳಿದಿಲ್ಲ ಎಂದು ಟೀಕೆ ಮಾಡಿದ್ದಾರೆ. 

ನಂತರ ಸುಷ್ಮಾ ಸ್ವರಾಜ್ ಅವರನ್ನು ಕೊಂಡಾಡಿರುವ ಆಸಿಫ್, ನಿಮ್ಮನ್ನು ಏನೆಂದು ಕರೆಯಬೇಕು? ಅತ್ಯುನ್ನತ ಮಹಿಳೆ ಎಂದು ಕರೆಯಬೇಕೋ ಅಥವಾ ದೇವರು ಎಂದು ಕರೆಯಬೇಕೋ? ನಿಮ್ಮ ಔದಾರ್ಯತೆಯನ್ನು ವಿವರಿಸಲು ಯಾವ ಪದಗಳೂ ಇಲ್ಲ. ನಿಮ್ಮನ್ನು ಹೊಗಳುವುದನ್ನು ನಿಲ್ಲಿಸಲು ಆಗುತ್ತಿಲ್ಲ. ನನ್ನ ಹೃದಯ ನಿಮಗೆ ಸೇರಿದ್ದು, ನಿಮಗಾಗಿ ಬಡಿಯುತ್ತಿದೆ. ಪಾಕಿಸ್ತಾನ ಯಾವ ಅರ್ಹತೆಯನ್ನೂ ಹೊಂದಿಲ್ಲ. ನಿಮ್ಮ ಮೇಲಿನ ಪ್ರೀತಿ ಹಾಗೂ ಗೌರವ ಹೆಚ್ಚಿದೆ. ನಮ್ಮ ದೇಶದಲ್ಲಿ ನೀವು ಪ್ರಧಾನಮಂತ್ರಿಗಳಾಗಿದ್ದರೆ, ನಮ್ಮ ದೇಶ ಎಷ್ಟೋ ಬದಲಾಗುತ್ತಿತ್ತು ಎಂದು ಆಸಿಫ್ ಟ್ವಿಟರ್ ನಲ್ಲಿ ಹೇಳಿಕೊಂಡಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಟಿ20 ವಿಶ್ವಕಪ್: 'ಅಲ್ಲಿ ಬೇಡ ಅಂದ್ರೆ ಇಲ್ಲಿ ಆಡಿ..': ಬಾಂಗ್ಲಾದೇಶಕ್ಕೆ ಹೊಸ ಮೈದಾನಗಳ ಸೂಚಿಸಿದ ICC

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

SCROLL FOR NEXT