ರಾಹುಲ್ ಗಾಂಧಿ 
ದೇಶ

ಅಧಿಕಾರಕ್ಕಾಗಿ ಬಿಜೆಪಿಯಿಂದ ಜನರಿಗೆ 'ಸುಳ್ಳು' ಮಾರಾಟ : ರಾಹುಲ್ ಗಾಂಧಿ

ಅಧಿಕಾರದ ದುರಾಸೆಯಿಂದ ಬಿಜೆಪಿ ಸುಳ್ಳಿನ ಸರಮಾಲೆಯನ್ನೇ ಸೃಷ್ಟಿಸುತ್ತಿದೆ ಎಂದು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ...

ರಾಯ್ ಪುರ:  ಅಧಿಕಾರದ ದುರಾಸೆಯಿಂದ ಬಿಜೆಪಿ ಸುಳ್ಳಿನ ಸರಮಾಲೆಯನ್ನೇ ಸೃಷ್ಟಿಸುತ್ತಿದೆ ಎಂದು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಟೀಕಿಸಿದ್ದಾರೆ.
ಛತ್ತೀಸ್ ಗಡದಲ್ಲಿ ನಡೆದ ಪಕ್ಷದ 138ನೇ ಕೇಡರ್ ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ ನಿಮಗೆ ಆ ಸಾಮರ್ಥ್ಯವಿದೆ ಮತ್ತು ನೀವು ಅದನ್ನು ಮಾಡುತ್ತೀರಿ, ಬಿಜೆಪಿ ಅಧಿಕಾರಕ್ಕಾರಿ ಜನರಿಗೆ ಸುಳ್ಳನ್ನು ಮಾರಾಟ ಮಾಡುತ್ತಿದೆ. ಎಲ್ಲೆಡೆ ಅಧಿಕಾರ ಸ್ಥಾಪಿಸುವ ಉದ್ದೇಶದಿಂದ ಈ ರೀತಿ ಮಾಡುತ್ತಿದೆ. ಆದರೆ ಕೊನೆಗೆ ಸತ್ಯವೊಂದೆ ಉಳಿಯುವುದು ಹಾಗೂ ಗೆಲ್ಲುವುದು  ಎಂದು ರಾಹುಲ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಸಾಮಾಜಿಕ ಮಾಧ್ಯಮವನ್ನು ಬಳಸಿಕೊಂಡು ಬಿಜೆಪಿ ಮತ್ತು ಆರ್ ಎಸ್ ಎಸ್ ಸಮಾಜವನ್ನು ಒಡೆಯುವ ಕೆಲಸ ಮಾಡುತ್ತಿದೆ. ಈ ವಿಷಯವನ್ನು ಕಾಂಗ್ರೆಸ್ ನವರು ಫೋಕಸ್ ಮಾಡಿ ಜನರ ಅರಿವಿಗೆ ತರಬೇಕು ಎಂದು ಕರೆ ನೀಡಿದ್ದಾರೆ.
ರಾಹುಲ್ ಗಾಂಧಿ ಬಸ್ತಾರ್ಗೆ ಎರಡು ದಿನಗಳ ಭೇಟಿ ನೀಡಿದ್ದಾರೆ. ಶನಿವಾರ ಇಲ್ಲಿನ ಆದಿವಾಸಿ ಜನಾಂಗವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಆದಿವಾಸಿ ಜನಾಂಗದ ವಿದ್ಯಾರ್ಥಿಗಳೊಂದಿಗೂ ರಾಹುಲ್ ಚರ್ಚಿಸಲಿದ್ದಾರೆ. ಛತ್ತೀಸ್ ಗಡ ವಿಧಾನ ಸಭೆಯ 90 ಸೀಟುಗಳಲ್ಲಿ ಬಸ್ತಾರ್ 12 ಸೀಟುಗಳನ್ನು ಹೊಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬೆಳಗಾವಿ: ಬೀದಿ ನಾಯಿಗಳ ಅಟ್ಟಹಾಸ, 2 ವರ್ಷದ ಬಾಲಕಿ ಮೇಲೆ ಭೀಕರ ದಾಳಿ

SCROLL FOR NEXT