ಸಾಂದರ್ಭಿಕ ಚಿತ್ರ 
ದೇಶ

12 ರಾಷ್ಟ್ರೀಯ ಹೆದ್ದಾರಿಗಳು ತುರ್ತು ಭೂಸ್ಪರ್ಶ ವಾಯುನೆಲೆಯಾಗಿ ಬಳಕೆ

ವಿಮಾನಗಳು ತುರ್ತು ಭೂ ಸ್ಪರ್ಶ ಮಾಡಲು 12 ರಾಷ್ಟ್ರೀಯ ಹೆದ್ದಾರಿಗಳನ್ನು ತುರ್ತು ಭೂಸ್ಪರ್ಶ ವಾಯುನೆಲೆ ಎಂದು...

ನವದೆಹಲಿ: ವಿಮಾನಗಳು ತುರ್ತು ಭೂ ಸ್ಪರ್ಶ ಮಾಡಲು 12 ರಾಷ್ಟ್ರೀಯ ಹೆದ್ದಾರಿಗಳನ್ನು ತುರ್ತು ಭೂಸ್ಪರ್ಶ ವಾಯುನೆಲೆ ಎಂದು  ಭಾರತೀಯ ವಾಯುಪಡೆ ಅನುಮೋದಿಸಿದೆ.
ಆರಂಭದಲ್ಲಿ ದೇಶದಲ್ಲಿ 21 ರಾಷ್ಟ್ರೀಯ ಹೆದ್ದಾರಿಗಳನ್ನು ವಾಯುನೆಲೆಯಾಗಿ ಅಭಿವೃದ್ಧಿಪಡಿಸಲು ಪ್ರಸ್ತಾವನೆ ಸಲ್ಲಿಸಲಾಗಿತ್ತು.  ಅವುಗಳಲ್ಲಿ ಸದ್ಯ 12 ರಾಷ್ಟ್ರೀಯ ಹೆದ್ದಾರಿಗಳಿಗೆ ಅನುಮೋದನೆ ನೀಡಲಾಗಿದೆ. ಮೂರು ಹೆದ್ದಾರಿಗಳು ಮಾವೋವಾದಿ ಪೀಡಿತ ಪ್ರದೇಶಗಳಾದ ಒಡಿಶಾ, ಜಾರ್ಖಂಡ್ ಮತ್ತು ಛತ್ತೀಸ್ ಗಢವನ್ನು ಸಂಪರ್ಕಿಸುತ್ತದೆ. ಈ ಪ್ರದೇಶಗಳು ನೆರೆ, ಪ್ರವಾಹಗಳಿಗೂ ಆಗಾಗ ಸಿಲುಕುತ್ತಿರುತ್ತವೆ. 
21 ಹೆದ್ದಾರಿಗಳಲ್ಲಿ ಸದ್ಯ 12 ತುರ್ತು ಭೂ ಸ್ಪರ್ಶ ವಿಮಾನ ನಿಲುಗಡೆಗೆ ಕೇಂದ್ರ ಹೆದ್ದಾರಿ ಪ್ರಾಧಿಕಾರ ಒಪ್ಪಿಗೆ ನೀಡಿದೆ. ಉಳಿದ ಹೆದ್ದಾರಿಗಳ ಬಗ್ಗೆ ಮಾತುಕತೆ, ಪರೀಕ್ಷೆ ನಡೆಯುತ್ತಿದ್ದು ಸದ್ಯದಲ್ಲಿಯೇ ಅವುಗಳಿಗೆ ಕೂಡ ಒಪ್ಪಿಗೆ ನೀಡಲಾಗುವುದು  ಎಂದು ಐಎಎನ್ಎಸ್ ಸುದ್ದಿಸಂಸ್ಥೆ ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT