ಸಾಂದರ್ಭಿಕ ಚಿತ್ರ 
ದೇಶ

ಛತ್ತೀಸ್ ಗಢದಲ್ಲಿ ಮೂವರು ನಕ್ಸಲರ ಬಂಧನ

ಛತ್ತೀಸ್ ಗಢದ ನಾರಾಯಣಪುರ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಶನಿವಾರ ನಡೆಸಿದ ಎರಡು ಪ್ರತ್ಯೇಕ ಶೋಧ...

ರಾಯಪುರ: ಛತ್ತೀಸ್ ಗಢದ ನಾರಾಯಣಪುರ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಶನಿವಾರ ನಡೆಸಿದ ಎರಡು ಪ್ರತ್ಯೇಕ ಶೋಧ ಕಾರ್ಯಾಚರಣೆಯಲ್ಲಿ ಕೆಳ ಹಂತದ ಮೂವರು ನಕ್ಸಲರನ್ನು ಬಂಧಿಸಲಾಗಿದೆ.
ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್(ಐಟಿಬಿಪಿ) ಹಾಗೂ ಜಿಲ್ಲಾ ಮೀಸಲು ಪೊಲೀಸ್ ಮತ್ತು ವಿಶೇಷ ಕಾರ್ಯಪಡೆ(ಎಸ್ ಟಿಎಫ್) ನಿನ್ನೆ ಜಂಟಿ ಶೋಧ ಕಾರ್ಯಚಾರಣೆ ನಡೆಸಿ ಸರ್ಗಿಪಾಲ್ ಗ್ರಾಮದಲ್ಲಿ ಮೂವರು ನಕ್ಸಲರನ್ನು ಬಂಧಿಸಲಾಗಿದೆ ಎಂದು ನಾರಾಯಣಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಂತೋಷ್ ಸಿಂಗ್ ಅವರು ಇಂದು ಪಿಟಿಐಗೆ ತಿಳಿಸಿದ್ದಾರೆ.
ಬಂಧಿತ ನಕ್ಸಲರನ್ನು ಸೋನು ನೆತಾಮ್(40), ಸುರೇಶ್ ಮರ್ಕಾಮ್ ಹಾಗೂ ಶಂಕರ್ ಹೆಮ್ಲಾ(20) ಎಂದು ಗುರುತಿಸಲಾಗಿದೆ. ಬಂಧಿತರಿಂದ ಒಂದು ಗನ್ ವಶಕ್ಕೆ ಪಡೆಯಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಆರೋಪಿ ಮರ್ಕಾಮ್ ಪೊಲೀಸ್ ಸಿಬ್ಬಂದಿ ಮೇಲೆ ದಾಳಿ ಸೇರಿದಂತೆ ಹಲವು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೆ ಎಂದು ಸಂತೋಷ್ ಸಿಂಗ್ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 5 ಕೋಟಿ ರೂ. ಮೌಲ್ಯದ ವಸ್ತುಗಳು ವಶಕ್ಕೆ!

ಪಸಿಂದು ಗೋಲ್ಡನ್ ಡಕೌಟ್: ಆಡಿದ 2ನೇ ಪಂದ್ಯದಲ್ಲೇ ಕುಂಬ್ಳೆ ದಾಖಲೆ ಸರಿಗಟ್ಟಿದ Team India ಯುವ ಸ್ಪಿನ್ನರ್ ಮಾನವ್ ಸುತಾರ್!

ದೇವೇಗೌಡರ ಕೂಸನ್ನು ಹಾದಿ ತಪ್ಪಿಸಿ ಯಾರಪ್ಪನಿಗೆ ಕೊಡಲು ಹೊರಟಿದ್ದೀರಿ ಮಿಸ್ಟರ್ ಡಿ.ಕೆ. ಶಿವಕುಮಾರ್? ತಾಕತ್ ಇದ್ರೆ ಚರ್ಚೆಗೆ ಬನ್ನಿ, ಕುಮಾರಸ್ವಾಮಿ ಸವಾಲು!