ಆರ್ ಡಿ ಪ್ರಜಾಪತಿ 
ದೇಶ

ಮೈನಿಂಗ್ ಮಾಫಿಯಾದಿಂದ ನನಗೆ ಜೀವ ಬೆದರಿಕೆ ಇದೆ: ಮಧ್ಯಪ್ರದೇಶ ಬಿಜೆಪಿ ಶಾಸಕ

ಉತ್ತರ ಪ್ರದೇಶ ಗಡಿ ಭಾಗದ ಛತ್ತರ್ ಪುರ್ ಜಿಲ್ಲೆಯ ಮರಳು ಮತ್ತು ಗ್ರಾನೈಟ್ ಮಾಫಿಯಾದಿಂದ ನನಗೆ ಜೀವ ಬೆದರಿಕೆ....

ಭೋಪಾಲ್: ಉತ್ತರ ಪ್ರದೇಶ ಗಡಿ ಭಾಗದ ಛತ್ತರ್ ಪುರ್ ಜಿಲ್ಲೆಯ ಮರಳು ಮತ್ತು ಗ್ರಾನೈಟ್ ಮಾಫಿಯಾದಿಂದ ನನಗೆ ಜೀವ ಬೆದರಿಕೆ ಇದೆ ಎಂದು ಮಧ್ಯಪ್ರದೇಶ ಬಿಜೆಪಿ ಶಾಸಕರೊಬ್ಬರು ಸೋಮವಾರ ಹೇಳಿದ್ದಾರೆ.
ಈ ಸಂಬಂಧ ಮಧ್ಯಪ್ರದೇಶ ಗೃಹ ಸಚಿವರಿಗೆ ಹಾಗೂ ಛತ್ತರ್ ಪುರ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಪತ್ರ ಬರೆದಿರುವ ಚಂಡ್ಲಾ ಬಿಜೆಪಿ ಶಾಸಕ ಆರ್ ಡಿ ಪ್ರಜಾಪತಿ ಅವರು, ಜುಲೈ 29ರಂದು ದುಷ್ಕರ್ಮಿಯೊಬ್ಬ ತನ್ನ ಮೊಬೈಲ್ ಗೆ ಕರೆ ಮಾಡಿ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿರುವುದಾಗಿ ತಿಳಿಸಿದ್ದಾರೆ.
ತಮಗೆ ಕರೆ ಮಾಡಿದ ವ್ಯಕ್ತಿ ಮರಳು ಮತ್ತು ಗ್ರಾನೈಟ್ ಮಾಫಿಯಾಗೆ ಸೇರಿದ ವ್ಯಕ್ತಿಯಾಗಿರುವ ಸಾಧ್ಯತೆ ಇದೆ ಎಂದು ಪ್ರಜಾಪತಿ ಅವರು ಪತ್ರದಲ್ಲಿ ಆರೋಪಿಸಿದ್ದಾರೆ.
ಶಾಸಕರ ಪತ್ರವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ಅಪರಿಚಿತ ದುಷ್ಕರ್ಮಿಗಳ ವಿರುದ್ಧ ಕೇಸ್ ದಾಖಲಿಸಿಕೊಂಡಿರುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿನಿತ್ ಖನ್ನಾ ಅವರು ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದ್ದಾರೆ.
ಕಳೆದ ಜೂನ್ ನಲ್ಲಿ ಛತ್ತರ್ ಪುರ್ ಜಿಲ್ಲೆಯ ರಾಂಪಂತ್ ಮರಳು ಮಾಫಿಯಾದಿಂದ ಐಎಎಸ್ ಅಧಿಕಾರಿ ಸೋನಿಯಾ ಮೀನಾ ಅವರಿಗೆ ಬೆದರಿಕೆ ಕರೆಗಳು ಬಂದಿದ್ದರಿಂದ ದೊಡ್ಡ ಸುದ್ದಿಯಾಗಿತ್ತು. ಬಳಿಕ ಅವರನ್ನು ಉಮರಿಯಾ ಜಿಲ್ಲೆಗೆ ವರ್ಗಾವಣೆ ಮಾಡಲಾಗಿತ್ತು. ಈ ಬೆಳವಣಿಗೆ ನಂತರ ಐಎಎಸ್ ಅಧಿಕಾರಿಗೆ ಭಾರಿ ಭದ್ರತೆ ಒದಗಿಸಲಾಗಿತ್ತು.
ಛತ್ತರ್ ಪುರ್ ಮೈನಿಂಗ್ ಮಾಫಿಯಾಗೆ ಸಂಬಂಧಿಸಿದಂತೆ ಆರ್ ಡಿ ಪ್ರಜಾಪತಿ ಅವರು 2016ರಲ್ಲಿ ತಮ್ಮ ಪಕ್ಷದ ಸರ್ಕಾರದ ವಿರುದ್ಧವೇ ತಿರುಗಿ ಬಿದ್ದಿದ್ದರು. ಅವರಿಗೆ ಪ್ರತಿಪಕ್ಷ ಕಾಂಗ್ರೆಸ್ ಸಹ ಬೆಂಬಲ ಸೂಚಿಸಿತ್ತು. ಇದರಿಂದ ಬಿಜೆಪಿ ಸರ್ಕಾರ ತೀವ್ರ ಮುಜುಗರಕ್ಕಿಡಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

SCROLL FOR NEXT