ನವದೆಹಲಿ: ಸ್ವಾತಂತ್ರ್ಯ ದಿನಾಚರಣೆಯಂದು ದೇಶವನ್ನುದ್ದೇಶಿಸಿ ಮಾತನಾಡುವ ವಿಷಯಗಳಿಗೆ ಪ್ರಧಾನಿ ನರೇಂದ್ರ ಮೋದಿ ಸಾರ್ವಜನಿಕರಿಂದಲೇ ಸಲಹೆ ಕೇಳಿದ್ದಾರೆ.
ನರೇಂದ್ರ ಮೋದಿ ಆಪ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆಯ ದಿನದಂದು ಪ್ರಧಾನಿ ನರೇಂದ್ರ ಮೋದಿ ಮಾತನಾಡಬೇಕಿರುವ ಅಂಶಗಳ ಬಗ್ಗೆ ಸಲಹೆ ನೀಡಲು ಸಾರ್ವಜನಿಕರಿಗೆ ಅವಕಾಶ ನೀಡಲಾಗಿದೆ ಎಂದು ಪ್ರಧಾನಿ ಕಾರ್ಯಾಲಯ ತಿಳಿಸಿದೆ.
ಆ.15 ರಂದು ಪ್ರಧಾನಿ ನರೇಂದ್ರ ಮೋದಿ ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ. "ಕೆಂಪು ಕೋಟೆಯಿಂದ ನಾನು ಮಾತನಾಡುವುದು 125 ಕೋಟಿ ಭಾರತೀಯರ ಧ್ವನಿಯಾಗಿರಲಿದೆ, ಭಾಷಣದಲ್ಲಿ ಪ್ರಸ್ತಾಪಿಸಬೇಕಾದ ಅಂಶಗಳಿಗೆ NM App. http://nm4.in/dnldapp ನಲ್ಲಿ ಸಲಹೆ ನೀಡಿ ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ.
ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಕಲ್ಪ ಪರ್ವವನ್ನಗಿ ಆಚರಣೆ ಮಾಡಿ, ಶುಚಿತ್ವ ಕಾಪಾಡಲು, ಬಡತನ, ಭಯೋತ್ಪಾದನೆ, ಜಾತಿಇಯತೆ, ಕೋಮುವಾದವನ್ನು ಭಾರತದೊಂದ ಹೋಗಲಾಡಿಸಲು ಸಂಕಲ್ಪ ಮಾಡಬೇಕು ಎಂದು ಪ್ರಧಾನಿ ಭಾರತೀಯರಿಗೆ ಕರೆ ನೀಡಿದ್ದಾರೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos