ಮಮತಾ ಬ್ಯಾನರ್ಜಿ 
ದೇಶ

ಸಬ್ಸಿಡಿ ಒದಗಿಸುವುದು ಸರ್ಕಾರದ ಸಾಮಾಜಿಕ ಬಾಧ್ಯತೆ: ಮಮತಾ

ಅಡುಗೆ ಅನಿಲದ ಮೇಲಿನ ಎಲ್ಲಾ ಸಬ್ಸಿಡಿಯನ್ನು ತೆಗೆದು ಹಾಕಲು ಮುಂದಾಗಿರುವ ಕೇಂದ್ರ ಸರ್ಕಾರ ನಿರ್ಧಾರವನ್ನು ಪಶ್ಚಿಮ....

ಛೋಪ್ರಾ: ಅಡುಗೆ ಅನಿಲದ ಮೇಲಿನ ಎಲ್ಲಾ ಸಬ್ಸಿಡಿಯನ್ನು ತೆಗೆದು ಹಾಕಲು ಮುಂದಾಗಿರುವ ಕೇಂದ್ರ ಸರ್ಕಾರ ನಿರ್ಧಾರವನ್ನು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕಟುವಾಗಿ ಟೀಕಿಸಿದ್ದು, ಜನತೆಗೆ ಹಣಕಾಸಿನ ನೆರವು ಒದಗಿಸುವುದು ಸರ್ಕಾರದ ಸಾಮಾಜಿಕ ಬಾಧ್ಯತೆಯಾಗಿದೆ ಎಂದು ಮಂಗಳವಾರ ಹೇಳಿದ್ದಾರೆ.
ಇಂದು ಛೋಪ್ರಾದಲ್ಲಿ ಸಾರ್ವಜನಿಕ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಪಶ್ಚಿಮ ಬಂಗಾಳ ಸಿಎಂ, ಕೇಂದ್ರ ಸರ್ಕಾರದ ಈ ಕ್ರಮದಿಂದಾಗಿ ಬಡವರ ಮೇಲೆ ಕೆಟ್ಟ ಪರಿಣಾಮ ಬೀರಲಿದೆ. ಸಬ್ಸಿಡಿ ನಿಲ್ಲಿಸುವ ನಿರ್ಧಾರದಿಂದಾಗಿ ಸಾಮಾನ್ಯ ಜನರಿಗೆ ತೊಂದರೆಯಾಗಲಿದೆ ಎಂದಿದ್ದಾರೆ.
ಸಬ್ಸಿಡಿ ಒದಗಿಸುವುದು ಸರ್ಕಾರದ ಸಾಮಾಜಿಕ ಬಾಧ್ಯತೆ ಮತ್ತು ಮಾನವೀಯ ಕರ್ತವ್ಯವಾಗಿದೆ. ಸಬ್ಸಿಡಿಯನ್ನು ಯಾರೋ ಒಬ್ಬರು ತಮ್ಮ ವೈಯಕ್ತಿಕ ಫಂಡ್ ನಿಂದ ಕೊಡುವುದಿಲ್ಲ. ಅದು ಜನರ ಪಾಕೇಟ್ ನಿಂದ ಬಂದ ಹಣ ಎಂದು ಮಮತಾ ಹೇಳಿದ್ದಾರೆ.
ನಿನ್ನೆಯಷ್ಟೆ ಕೇಂದ್ರ ಸರ್ಕಾರ ಮುಂದಿನ ವರ್ಷ ಮಾರ್ಚ್ ನಂತರ ಎಲ್ ಪಿಜಿ ಸಬ್ಸಿಡಿ ತೆಗೆದು ಹಾಕುವುದಕ್ಕಾಗಿ ಸಬ್ಸಿಡಿ ಸಹಿತ ಎಲ್ ಪಿಜಿ ಸಿಲಿಂಡರ್ ದರವನ್ನು ಪ್ರತಿ ತಿಂಗಳು 4 ರುಪಾಯಿ ಹೆಚ್ಚಳ ಮಾಡುವಂತೆ ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳಿಗೆ ಆದೇಶಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Eiffel Tower ಇನ್ನು ನೆನಪು ಮಾತ್ರ?: ಪ್ರಸಿದ್ಧ ಸ್ಮಾರಕ ಕೆಡವುತ್ತಿರುವ ಬಗ್ಗೆ ಟ್ಯಾಪಿಯೋಕಾ ಟೈಮ್ಸ್ ಹೇಳಿದ್ದೇನು?

SCROLL FOR NEXT