ಸಂಗ್ರಹ ಚಿತ್ರ 
ದೇಶ

ಇಸ್ರೋ ಐತಿಹಾಸಿಕ ಸಾಧನೆ: ಪ್ರಧಾನಿ ಮೋದಿ, ರಾಷ್ಟ್ರಪತಿ ಫ್ರಣಬ್ ಮುಖರ್ಜಿ ಶುಭಾಶಯ!

ಜಿಎಸ್ ಎಲ್ ವಿ ಮಾರ್ಕ್ 3 ಬೃಹತ್ ಉಡಾವಣಾ ನೌಕೆಯ ಮೂಲಕ ಜಿಸ್ಯಾಟ್ 19 ಬೃಹತ್ ಉಪಗ್ರಹವನ್ನು ಯಶಸ್ವಿಯಾಗಿ ಕಕ್ಷೆಗೆ ಸೇರಿಸಿದ ಭಾರತೀಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ವಿಜ್ಞಾನಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಶುಭಾಶಯ ತಿಳಿಸಿದ್ದಾರೆ.

ನವದೆಹಲಿ: ಜಿಎಸ್ ಎಲ್ ವಿ ಮಾರ್ಕ್ 3 ಬೃಹತ್ ಉಡಾವಣಾ ನೌಕೆಯ ಮೂಲಕ ಜಿಸ್ಯಾಟ್ 19 ಬೃಹತ್ ಉಪಗ್ರಹವನ್ನು ಯಶಸ್ವಿಯಾಗಿ ಕಕ್ಷೆಗೆ ಸೇರಿಸಿದ ಭಾರತೀಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ವಿಜ್ಞಾನಿಗಳಿಗೆ ಪ್ರಧಾನಿ  ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಶುಭಾಶಯ ತಿಳಿಸಿದ್ದಾರೆ.

ಟ್ವಿಟರ್ ಇಸ್ರೋ ವಿಜ್ಞಾನಿಗಳ ಸಾಧನೆಯನ್ನು ಕೊಂಡಾರಿರುವ ಪ್ರಧಾನಿ ನರೇಂದ್ರ ಮೋದಿ, ಇಸ್ರೋ ವಿಜ್ಞಾನಿಗಳ ಸಾಧನೆಯಿಂದಾಗಿ ಇಡೀ ದೇಶವೇ ಹೆಮ್ಮೆ ಪಡುವಂತಾಗಿದೆ. ಜಿಎಸ್ ಎಲ್ ವಿ ಮಾರ್ಕ್ 3 ಯಶಸ್ವಿ ಉಡಾವಣೆ  ಮೂಲಕ ಮುಂದಿನ ಹಂತದ ಉಪಗ್ರಹ ಉಡಾವಣೆಗೆ ಭಾರತ ತನ್ನನ್ನು ತಾನು ತೊಡಗಿಸಿಕೊಳ್ಳುವಂತಾಗಿದೆ. ಇಸ್ರೋ ವಿಜ್ಞಾನಿಗಳ ಸಾಧನೆ ವಿಶ್ವ ಸಮುದಾಯದ ಎದುರು ಭಾರತ ಹೆಮ್ಮೆ ಪಡುವಂತಾಗಿದೆ ಎಂದು ಟ್ವೀಟ್  ಮಾಡಿದ್ದಾರೆ.

ಅಂತೆಯೇ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಕೂ ಇಸ್ರೋ ವಿಜ್ಞಾನಿಗಳ ಸಾಧನೆಯನ್ನು ಮೆಚ್ಚಿ ಟ್ವೀಟ್ ಮಾಡಿದ್ದು, ಇಸ್ರೋ ವಿಜ್ಞಾನಿಗಳ ಸಾಧನೆಗೆ ಹೃದಯ ಪೂರ್ವಕ ಶುಭಾಶಯ ತಿಳಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

ಭಾರತೀಯ ಬಾಹ್ಯಾಕಾಶ ಇತಿಹಾಸದಲ್ಲೇ ಇಂದು ಮಹತ್ವದ ದಿನವಾಗಿದ್ದು, ಬೃಹತ್ ಪ್ರಮಾಣದ ಸ್ಯಾಟೆಲೈಟ್ ಗಳನ್ನು ಉಡಾವಣೆ ಮಾಡಬಲ್ಲ ಮತ್ತು ಮಾನವಸಹಿತ ಬಾಹ್ಯಾಕಾಶ ಯಾನಕ್ಕೆ ನೆರವಾಗಬಲ್ಲ ಬೃಹತ್ ರಾಕೆಟ್  ಜಿಎಸ್ ಎಲ್ ವಿ ಮಾರ್ಕ್ 3 ಡಿ1 ನೌಕೆಯನ್ನು ಇಸ್ರೋ ಯಶಸ್ವಿಯಾಗಿ ಉಡಾವಣೆ ಮಾಡಿದೆ. ಇಂದು ನಭಕ್ಕೆ ಚಿಮ್ಮಿದ ಜಿಎಸ್ ಎಲ್ ವಿ ಮಾರ್ಕ್ 3 ನೌಕೆ ತನ್ನೊಂದಿಗೆ ಬೃಹತ್ ಜಿಸ್ಯಾಟ್ 19 ಉಪಗ್ರಹವನ್ನು ಹೊತ್ತೊಯ್ದು ನಿಗದಿತ  ಸಮಯದಲ್ಲಿ ನಿಗದಿತ ಕಕ್ಷೆಯನ್ನು ಸೇರಿಸಿದೆ. ಜಿಸ್ಯಾಟ್ 19 ಭಾರತದ ಅತೀ ದೊಡ್ಡ ಉಪಗ್ರಹವಾಗಿದ್ದು, ಈ ಹಿಂದೆ ಸಂಪರ್ವ ಸಂವಹನಕ್ಕಾಗಿ ಉಡಾವಣೆ ಮಾಡಲಾಗಿದ್ದ ಜಿಸ್ಯಾಟ್ ಸರಣಿಯ ಅತೀ ದೊಡ್ಡ ಉಪಗ್ರಹವಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT