ಸಂಗ್ರಹ ಚಿತ್ರ 
ದೇಶ

ಇಸ್ರೋ ಐತಿಹಾಸಿಕ ಸಾಧನೆ: ಪ್ರಧಾನಿ ಮೋದಿ, ರಾಷ್ಟ್ರಪತಿ ಫ್ರಣಬ್ ಮುಖರ್ಜಿ ಶುಭಾಶಯ!

ಜಿಎಸ್ ಎಲ್ ವಿ ಮಾರ್ಕ್ 3 ಬೃಹತ್ ಉಡಾವಣಾ ನೌಕೆಯ ಮೂಲಕ ಜಿಸ್ಯಾಟ್ 19 ಬೃಹತ್ ಉಪಗ್ರಹವನ್ನು ಯಶಸ್ವಿಯಾಗಿ ಕಕ್ಷೆಗೆ ಸೇರಿಸಿದ ಭಾರತೀಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ವಿಜ್ಞಾನಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಶುಭಾಶಯ ತಿಳಿಸಿದ್ದಾರೆ.

ನವದೆಹಲಿ: ಜಿಎಸ್ ಎಲ್ ವಿ ಮಾರ್ಕ್ 3 ಬೃಹತ್ ಉಡಾವಣಾ ನೌಕೆಯ ಮೂಲಕ ಜಿಸ್ಯಾಟ್ 19 ಬೃಹತ್ ಉಪಗ್ರಹವನ್ನು ಯಶಸ್ವಿಯಾಗಿ ಕಕ್ಷೆಗೆ ಸೇರಿಸಿದ ಭಾರತೀಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ವಿಜ್ಞಾನಿಗಳಿಗೆ ಪ್ರಧಾನಿ  ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಶುಭಾಶಯ ತಿಳಿಸಿದ್ದಾರೆ.

ಟ್ವಿಟರ್ ಇಸ್ರೋ ವಿಜ್ಞಾನಿಗಳ ಸಾಧನೆಯನ್ನು ಕೊಂಡಾರಿರುವ ಪ್ರಧಾನಿ ನರೇಂದ್ರ ಮೋದಿ, ಇಸ್ರೋ ವಿಜ್ಞಾನಿಗಳ ಸಾಧನೆಯಿಂದಾಗಿ ಇಡೀ ದೇಶವೇ ಹೆಮ್ಮೆ ಪಡುವಂತಾಗಿದೆ. ಜಿಎಸ್ ಎಲ್ ವಿ ಮಾರ್ಕ್ 3 ಯಶಸ್ವಿ ಉಡಾವಣೆ  ಮೂಲಕ ಮುಂದಿನ ಹಂತದ ಉಪಗ್ರಹ ಉಡಾವಣೆಗೆ ಭಾರತ ತನ್ನನ್ನು ತಾನು ತೊಡಗಿಸಿಕೊಳ್ಳುವಂತಾಗಿದೆ. ಇಸ್ರೋ ವಿಜ್ಞಾನಿಗಳ ಸಾಧನೆ ವಿಶ್ವ ಸಮುದಾಯದ ಎದುರು ಭಾರತ ಹೆಮ್ಮೆ ಪಡುವಂತಾಗಿದೆ ಎಂದು ಟ್ವೀಟ್  ಮಾಡಿದ್ದಾರೆ.

ಅಂತೆಯೇ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಕೂ ಇಸ್ರೋ ವಿಜ್ಞಾನಿಗಳ ಸಾಧನೆಯನ್ನು ಮೆಚ್ಚಿ ಟ್ವೀಟ್ ಮಾಡಿದ್ದು, ಇಸ್ರೋ ವಿಜ್ಞಾನಿಗಳ ಸಾಧನೆಗೆ ಹೃದಯ ಪೂರ್ವಕ ಶುಭಾಶಯ ತಿಳಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

ಭಾರತೀಯ ಬಾಹ್ಯಾಕಾಶ ಇತಿಹಾಸದಲ್ಲೇ ಇಂದು ಮಹತ್ವದ ದಿನವಾಗಿದ್ದು, ಬೃಹತ್ ಪ್ರಮಾಣದ ಸ್ಯಾಟೆಲೈಟ್ ಗಳನ್ನು ಉಡಾವಣೆ ಮಾಡಬಲ್ಲ ಮತ್ತು ಮಾನವಸಹಿತ ಬಾಹ್ಯಾಕಾಶ ಯಾನಕ್ಕೆ ನೆರವಾಗಬಲ್ಲ ಬೃಹತ್ ರಾಕೆಟ್  ಜಿಎಸ್ ಎಲ್ ವಿ ಮಾರ್ಕ್ 3 ಡಿ1 ನೌಕೆಯನ್ನು ಇಸ್ರೋ ಯಶಸ್ವಿಯಾಗಿ ಉಡಾವಣೆ ಮಾಡಿದೆ. ಇಂದು ನಭಕ್ಕೆ ಚಿಮ್ಮಿದ ಜಿಎಸ್ ಎಲ್ ವಿ ಮಾರ್ಕ್ 3 ನೌಕೆ ತನ್ನೊಂದಿಗೆ ಬೃಹತ್ ಜಿಸ್ಯಾಟ್ 19 ಉಪಗ್ರಹವನ್ನು ಹೊತ್ತೊಯ್ದು ನಿಗದಿತ  ಸಮಯದಲ್ಲಿ ನಿಗದಿತ ಕಕ್ಷೆಯನ್ನು ಸೇರಿಸಿದೆ. ಜಿಸ್ಯಾಟ್ 19 ಭಾರತದ ಅತೀ ದೊಡ್ಡ ಉಪಗ್ರಹವಾಗಿದ್ದು, ಈ ಹಿಂದೆ ಸಂಪರ್ವ ಸಂವಹನಕ್ಕಾಗಿ ಉಡಾವಣೆ ಮಾಡಲಾಗಿದ್ದ ಜಿಸ್ಯಾಟ್ ಸರಣಿಯ ಅತೀ ದೊಡ್ಡ ಉಪಗ್ರಹವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT