ಸಾಂದರ್ಭಿಕ ಚಿತ್ರ 
ದೇಶ

ಉತ್ತರಪ್ರದೇಶದಲ್ಲಿ ಕೋಮು ಘರ್ಷಣೆ; ಓರ್ವ ವ್ಯಕ್ತಿ ಮೃತ

ಉತ್ತರಪ್ರದೇಶದ ಮುಜಫರ್ ನಗರದಲ್ಲಿ ಸಣ್ಣ ಘಟನೆಯೊಂದು ಕೋಮು ಘರ್ಷಣೆಯ ಸ್ವರೂಪ ಪಡೆದು, ಒಬ್ಬನ ಸಾವಿಗೆ ಕಾರಣವಾಗಿದ್ದು, ಮತ್ತೊಬ್ಬ ವ್ಯಕ್ತಿಗೆ ಗಂಭೀರ ಗಾಯಗಳಾಗಿವೆ ಎಂದು ಪೊಲೀಸರು

ಲಖನೌ: ಉತ್ತರಪ್ರದೇಶದ ಮುಜಫರ್ ನಗರದಲ್ಲಿ ಸಣ್ಣ ಘಟನೆಯೊಂದು ಕೋಮು ಘರ್ಷಣೆಯ ಸ್ವರೂಪ ಪಡೆದು, ಒಬ್ಬನ ಸಾವಿಗೆ ಕಾರಣವಾಗಿದ್ದು, ಮತ್ತೊಬ್ಬ ವ್ಯಕ್ತಿಗೆ ಗಂಭೀರ ಗಾಯಗಳಾಗಿವೆ ಎಂದು ಪೊಲೀಸರು ಮಂಗಳವಾರ ಹೇಳಿದ್ದಾರೆ. 
ನಸೀಮ್ ಪುರ ಗ್ರಾಮದಲ್ಲಿ ಒಬ್ಬ ವ್ಯಕ್ತಿ ಪ್ರಾರ್ಥನೆಗೆ ತೆರಳುವಾಗ ಅವನ ಮೇಲೆ ಮತ್ತೊಬ್ಬ ವ್ಯಕ್ತಿ ನೀರು ಎರಚಿದ ಘಟನೆ ಸೋಮವಾರ ಮಧ್ಯಾಹ್ನ ಉದ್ವಿಘ್ನತೆಗೆ ಎಡೆಮಾಡಿಕೊಟ್ಟಿತ್ತು. ಇದು ಸೋಮವಾರ ರಾತ್ರಿ ಘರ್ಷಣೆಯನ್ನು ಉಲ್ಬಣಗೊಳಿಸಿತ್ತು. 
ನಂತರ ತಡರಾತ್ರಿ ಎರಡು ಗುಂಪುಗಳು ಮುಖಾಮುಖಿಯಾಗಿ ಒಬ್ಬರ ಮೇಲೊಬ್ಬರು ಗುಂಡು ಹಾರಿಸಿದ್ದರು. ಇದರಿಂದ ತಂದೆ ಪುತ್ರನಿಗೆ ಗುಂಡು ತಗುಲಿತ್ತು. 
ಪುತ್ರ ಅಶೋಕ್ ಅವರಿಗೆ ಗಂಭೀರ ಗಾಯಗಳಾಗಿದ್ದರಿಂದ ಅವರನ್ನು ಅದೇ ಸ್ಥಿತಿಯಲ್ಲಿ ಮೀರತ್ ನಲ್ಲಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಮೃತಪಟ್ಟಿದ್ದಾರೆ. ಮತ್ತೊಬ್ಬ ವ್ಯಕ್ತಿ ಬ್ರಜ್ ಲಾಲ್ ಎಂಬುವವರಿಗೆ ತೀವ್ರ ಗಾಯಗಳಾಗಿದ್ದು ಅವರು ಕೂಡ ಗಂಭೀರ ಸ್ಥಿತಿಯಲ್ಲಿದ್ದಾರೆ ಎಂದು ತಿಳಿದುಬಂದಿದೆ. 
ಈ ಘಟನೆಗೂ ಮುಂಚಿತವಾಗಿ ಗ್ರಾಮ ಪಂಚಾಯಿತಿ ಈ ಪ್ರಕರಣವನ್ನು ಇತ್ಯರ್ಥಗೊಳಿಸಿತ್ತಾದರೂ, ರಾತ್ರಿಯ ಹೊತ್ತಿಗೆ ಘರ್ಷಣೆಯ ಕಿಡಿ ಮತ್ತೆ ಹೊತ್ತಿಕೊಂಡಿತ್ತು. ನಂತರ ಈ ಘಟನೆ ಕೆಟ್ಟ ತಿರುವು ಪಡೆದು ಕೋಮು ಘರ್ಷಣೆಯ ರೂಪ ತಳೆಯಿತು ಎಂದು ಪೊಲೀಸರು ಹೇಳಿದ್ದಾರೆ. 
ಹಿಂಸೆ ವ್ಯಾಕವಾಗದಂತೆ ತಡೆಯಲು ಎಚ್ಚರವಹಿಸಿ ಹೆಚ್ಚಿನ ಪೊಲೀಸರನ್ನು ಸ್ಥಳದಲ್ಲಿ ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT