ಸಂಗ್ರಹ ಚಿತ್ರ 
ದೇಶ

ಉತ್ತರಪ್ರದೇಶ: ಇಫ್ತಾರ್ ಕೂಡದಲ್ಲಿ ಕಲುಷಿತ ಆಹಾರ ಸೇವಿಸಿ 175 ಮಂದಿ ಅಸ್ವಸ್ಥ

ರಂಜಾನ್ ಪ್ರಯುಕ್ತವಾಗಿ ಆಯೋಜಿಸಿದ್ದ ಇಫ್ತಾರ್ ಕೂಡದಲ್ಲಿ ಕಲುಷಿತ ಆಹಾರ ಸೇವಿಸಿ 175 ಜನರು ಅಸ್ವಸ್ಥರಾಗಿರುವ ಘಟನೆಯೊಂದು ಉತ್ತರಪ್ರದೇಶ ಬಹರೇಚ್ ನಲ್ಲಿ ಮಂಗಳವಾರ ನಡೆದಿದೆ...

ಬಹರೇಚ್: ರಂಜಾನ್ ಪ್ರಯುಕ್ತವಾಗಿ ಆಯೋಜಿಸಿದ್ದ ಇಫ್ತಾರ್ ಕೂಡದಲ್ಲಿ ಕಲುಷಿತ ಆಹಾರ ಸೇವಿಸಿ 175 ಜನರು ಅಸ್ವಸ್ಥರಾಗಿರುವ ಘಟನೆಯೊಂದು ಉತ್ತರಪ್ರದೇಶ ಬಹರೇಚ್ ನಲ್ಲಿ ಮಂಗಳವಾರ ನಡೆದಿದೆ. 
ಹುಜುರ್ಪುರ ಪ್ರದೇಶದಲ್ಲಿರುವ ಮದರಸಾದಲ್ಲಿ ಸೋಮವಾರ ಸಂಜೆ ಆಯೋಜಿಸಿದ್ದ ಇಫ್ತಾರ್ ಕೂಟದಲ್ಲಿ ನೂರಾರು ಸಂಖ್ಯೆಯಲ್ಲಿ ಮುಸ್ಲಿಮರು ಭಾಗಿಯಾಗಿದ್ದರು. ಆಹಾರ ಸೇವಿಸಿದ ಕೆಲವೇ ನಿಮಿಷದಲ್ಲಿ ಹಲವು ಜನರಲ್ಲಿ ವಾಂತಿ-ಭೇದಿ ಹಾಗೂ ಹೊಟ್ಟೆ ನೋವು ಕಾಣಿಸಿಕೊಂಡಿದೆ. ಕೂಡಲೇ ಅವರವನ್ನು ಹತ್ತಿರದ ಆಸ್ಪತ್ರೆಗಳಿಗೆ ದಾಖಲಿಸಿಲಾಗಿದೆ. 
ಈವರೆಗೂ ಸುಮಾರು 175ಕ್ಕೂ ಹೆಚ್ಚು ಜನರು ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಆಸ್ಪತ್ರೆಯ ವೈದ್ಯಾಧಿಕಾರಿ ಮಾಹಿತಿ ನೀಡಿದ್ದಾರೆ. 
ವಿಷಾಹಾರ ಸೇವನೆಯಿಂದಾಗಿ ಜನರು ಅಸ್ವಸ್ತಗೊಂಡಿರಬಹುದು ಎಂದು ಹೇಳಲಾಗುತ್ತಿದ್ದು, ಪ್ರಸ್ತುತ ಆಹಾರದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಿದ್ದು, ತನಿಖೆ ನಡೆಸುತ್ತಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT