ಪಟಾಕಿ ಕಾರ್ಖಾನೆ 
ದೇಶ

ಮಧ್ಯಪ್ರದೇಶ ಪಟಾಕಿ ಕಾರ್ಖಾನೆಯಲ್ಲಿ ಅಗ್ನಿ ಅವಘಡ: 21 ಮಂದಿ ಸಜೀವ ದಹನ

ಮಧ್ಯಪ್ರದೇಶದ ಬಲಘಾಟ್ ಜಿಲ್ಲೆಯಲ್ಲಿರುವ ಪಟಾಕಿ ಕಾರ್ಖಾನೆಯೊಂದರಲ್ಲಿ ಬುಧವಾರ ಭಾರಿ ಅಗ್ನಿ ಅವಘಡ ಸಂಭವಿಸಿದ್ದು,...

ಬಲಘಾಟ್: ಮಧ್ಯಪ್ರದೇಶದ ಬಲಘಾಟ್ ಜಿಲ್ಲೆಯಲ್ಲಿರುವ ಪಟಾಕಿ ಕಾರ್ಖಾನೆಯೊಂದರಲ್ಲಿ ಬುಧವಾರ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ 21 ಮಂದಿ ಕಾರ್ಮಿಕರು ಸಜೀವ ದಹನವಾಗಿದ್ದಾರೆ ಮತ್ತು 14ಕ್ಕು ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಇಂದು ಮಧ್ಯಾಹ್ನ 3 ಗಂಟೆಯ ಸುಮಾರಿಗೆ ಜಿಲ್ಲಾ ಕೇಂದ್ರದಿಂದ ಸುಮಾರು 10 ಕಿ.ಮೀ.ದೂರದಲ್ಲಿರುವ ಕೋಟ್ವಲಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಗ್ನಿ ದುರಂತ ಸಂಭವಿಸಿದ್ದು, ಘಟನೆಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಆದರೆ, ಪಟಾಕಿಗಳ ದಾಸ್ತಾನು ಇರಿಸಿದ್ದ ಸ್ಥಳದಲ್ಲಿ ಯಾರೋ ಬೀಡಿ ಸೇದಿ ಎಸೆದು ಹೋಗಿದು ಅಗ್ನಿ ದುರಂತಕ್ಕೆ ಕಾರಣ ಎಂಬುದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗಂಭೀರವಾಗಿ ಗಾಯಗೊಂಡವರಲ್ಲಿ ಕೆಲವರು ಕಾರ್ಖಾನೆ ಅಧಿಕಾರಿಗಳು ಸಹ ಸೇರಿದ್ದಾರೆ. ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಇದುವರೆ 8 ಮೃತದೇಹಗಳನ್ನು ಹೊರ ತೆಗೆಯಲಾಗಿದೆ ಎಂದು ಜಿಲ್ಲಾಧಿಕಾರಿ ಭರತ್ ಯಾದವ್ ಅವರು ಪಿಟಿಐಗೆ ತಿಳಿಸಿದ್ದಾರೆ. ಅಲ್ಲದೆ ಇನ್ನು ಹಲವರು ಕಾರ್ಖಾನೆ ಒಳಗೆ ಸಿಲುಕಿರುವ ಸಾಧ್ಯತೆ ಇದೆ ಎಂದಿದ್ದಾರೆ.
ಈ ಪಟಾಕಿ ಕಾರ್ಖಾನೆ ವಾರಿಶ್ ಅಹ್ಮದ್ ಎಂಬುವವರಿಗೆ ಸೇರಿದ್ದು ಎಂದು ಯಾದವ್ ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT