ಕೇಂದ್ರ ಸಚಿವ ವೆಂಕಯ್ಯ ನಾಯ್ಡು 
ದೇಶ

ಆಹಾರ ಅವರವರ ಆಯ್ಕೆಯ ವಿಚಾರ, ನಾನೂ ಕೂಡ ಮಾಂಸಾಹಾರಿ: ವೆಂಕಯ್ಯ ನಾಯ್ಡು

ಆಹಾರ ಅವರವರ ಆಯ್ಕೆಯ ವಿಚಾರಕ್ಕೆ ಸಂಬಂಧಪಟ್ಟಿದ್ದು, ನಾನೂ ಕೂಡ ಒಬ್ಬ ಮಾಂಸಾಹಾರಿ ಎಂದು ಕೇಂದ್ರ ಸಚಿವ ವೆಂಕಯ್ಯ ನಾಯ್ಡು ಅವರು ಮಂಗಳವಾರ ಹೇಳಿದ್ದಾರೆ...

ಮುಂಬೈ: ಆಹಾರ ಅವರವರ ಆಯ್ಕೆಯ ವಿಚಾರಕ್ಕೆ ಸಂಬಂಧಪಟ್ಟಿದ್ದು, ನಾನೂ ಕೂಡ ಒಬ್ಬ ಮಾಂಸಾಹಾರಿ ಎಂದು ಕೇಂದ್ರ ಸಚಿವ ವೆಂಕಯ್ಯ ನಾಯ್ಡು ಅವರು ಮಂಗಳವಾರ ಹೇಳಿದ್ದಾರೆ. 
ದೇಶದಲ್ಲಿರುವ ಪ್ರತೀಯೊಬ್ಬ ನಾಗರಿಕರನನ್ನು ಸಸ್ಯಾಹಾರಿಯಾಗಿ ಮಾಡಲು ಬಿಜೆಪಿ ಹೊರಟಿದೆ ಎಂಬ ಆರೋಪದ ಸಂಬಂಧ ಮುಂಬೈನಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಕಿಡಿಕಾರಿದ ಅವರು, ತಲೆಕೆಟ್ಟ ಕೆಲ ಜನರು ಈ ರೀತಿಯ ವಿಚಾರಗಳನ್ನು ಮಾತನಾಡುತ್ತಿದ್ದಾರೆ. ಏನನ್ನು ತಿನ್ನಬೇಕು, ಏನನ್ನು ತಿನ್ನಬಾರದು ಎಂಬುದು ಜನರ ಆಯ್ಕೆಗೆ ಬಿಟ್ಟದ್ದು ಎಂದು ಹೇಳಿದ್ದಾರೆ. 
ಕೇಂದ್ರದ ಆದೇಶ ಕುರಿತಂತೆ ರಾಜಕೀಯ ಆಟವನ್ನು ಆಡಲಾಗುತ್ತಿದೆ. ಕೆಲವರು ದೇಶದ ಪ್ರತಿ ಪ್ರಜೆಗಳನ್ನು ಸಸ್ಯಹಾರಿಯಾಗಿ ಮಾಡಲು ಬಿಜೆಪಿ ಯತ್ನಿಸುತ್ತಿದೆ ಎಂದು ಆರೋಪ ಮಾಡುತ್ತಿದ್ದಾರೆ. ಈ ಬಗ್ಗೆ ಕೆಲ ಮಾಧ್ಯಮಗಳು ಚರ್ಚೆಗಳನ್ನು ಕೂಡ ನಡೆಸಿವೆ. ಹೈದರಾಬಾದ್ ನಲ್ಲಿ ನಾನು ಬಿಜೆಪಿ ಮುಖ್ಯಸ್ಥನಾಗಿದ್ದೇನೆ. ನಾನು ಕೂಡ ಮಾಂಸಾಹಾರಿ. ಆದರೂ ನಾನು ಪಕ್ಷದ ಮುಖ್ಯಸ್ಥನಾಗಿದ್ದೇನೆಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT