ಮುಖ್ಯ ಚುನಾವಣಾ ಆಯುಕ್ತ ನಸೀಂ ಜೈದಿ 
ದೇಶ

ಜುಲೈ 17ಕ್ಕೆ ರಾಷ್ಟ್ರಪತಿ ಚುನಾವಣೆ, ಜುಲೈ 20ಕ್ಕೆ ಮತ ಎಣಿಕೆ

ಕೇಂದ್ರ ಚುನಾವಣಾ ಆಯೋಗ ಬಹುನಿರೀಕ್ಷಿತ ರಾಷ್ಟ್ರಪತಿ ಚುನಾವಣೆಯ ದಿನಾಂಕವನ್ನು ಬುಧವಾರ ಪ್ರಕಟಿಸಿದ್ದು,....

ನವದೆಹಲಿ: ಕೇಂದ್ರ ಚುನಾವಣಾ ಆಯೋಗ ಬಹುನಿರೀಕ್ಷಿತ ರಾಷ್ಟ್ರಪತಿ ಚುನಾವಣೆಯ ದಿನಾಂಕವನ್ನು ಬುಧವಾರ ಪ್ರಕಟಿಸಿದ್ದು, ಜುಲೈ 17ಕ್ಕೆ ಮುಂದಿನ ರಾಷ್ಟ್ರಪತಿ ಸ್ಥಾನಕ್ಕೆ ಚುನಾವಣೆ ನಡೆಯಲಿದೆ.
ಇಂದು ದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ರಾಷ್ಟ್ರಪತಿ ಚುನಾವಣೆಯ ದಿನಾಂಕ ಪ್ರಟಿಸಿದ ಮುಖ್ಯ ಚುನಾವಣಾ ಆಯುಕ್ತ ನಸೀಂ ಜೈದಿ ಅವರು, ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಅವಧಿ ಜುಲೈ 24ಕ್ಕೆ ಅಂತ್ಯವಾಗಲಿದೆ. ಈ ಹಿನ್ನಲೆಯಲ್ಲಿ ಜುಲೈ 17ರಂದು ಚುನಾವಣೆ ನಡೆಯಲಿದೆ. ಜುಲೈ 20ರಂದು ಮತ ಎಣಿಕೆ  ಕಾರ್ಯ ನಡೆಯಲಿದೆ ಎಂದು ತಿಳಿಸಿದರು.
ರಾಷ್ಟ್ರಪತಿ ಚುನಾವಣೆಗೆ ನಾಮಪತ್ರ ಸಲ್ಲಿಸಲು ಜೂನ್ 28 ಕೊನೆಯ ದಿನವಾಗಿದ್ದು, ಜುಲೈ 1 ನಾಮಪತ್ರ ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿದೆ.
ಈ ಮಧ್ಯ ರಾಷ್ಟ್ರಪತಿ ಚುನಾವಣೆಗೆ ಆಡಳಿತ ಮತ್ತು ಪ್ರತಿಪಕ್ಷಗಳ ಅಭ್ಯರ್ಥಿಗಳು ಇನ್ನೂ ಅಂತಿಮವಾಗಿಲ್ಲ. ಬಿಜೆಪಿಯಿಂದ ದ್ರೌಪದಿ ಮುರ್ಮು, ಸುಷ್ಮಾ ಸ್ವರಾಜ್, ಸುಮಿತ್ರಾ ಮಹಾಜನ್ ಹೆಸರು ಕೇಳಿ ಬರುತ್ತಿವೆ. ಇನ್ನು ಪ್ರತಿಪಕ್ಷಗಳಿಂದ ಮಹಾತ್ಮಾ ಗಾಂಧೀಜಿ ಅವರ ಮೊಮ್ಮಗ ಗೋಪಾಲ ಕೃಷ್ಣ ಗಾಂಧಿ, ಮೀರಾ ಕುಮಾರ್ ಹೆಸರು ಕೇಳಿ ಬರುತ್ತಿದೆ.
ಒಬ್ಬರಿಗಿಂತ ಹೆಚ್ಚು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದರೆ ಮಾತ್ರ ಚುನಾವಣೆ ನಡೆಸಬೇಕಾಗುತ್ತದೆ. ಒಬ್ಬರೇ ನಾಮಪತ್ರ ಸಲ್ಲಿಸಿದರೆ ಅವರೇ ಅವಿರೋಧವಾಗಿ ರಾಷ್ಟ್ರಪತಿ ಸ್ಥಾನಕ್ಕೆ ಆಯ್ಕೆಯಾಗುತ್ತಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

2030 Commonwealth Games: ಭಾರತದ ಬಿಡ್‌ಗೆ ಕ್ಯಾಬಿನೆಟ್ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

SCROLL FOR NEXT