ಸಾಂದರ್ಭಿಕ ಚಿತ್ರ 
ದೇಶ

ಇತಿಹಾಸ ಪುಟಕ್ಕೆ ಯುಜಿಸಿ, ಎಐಸಿಟಿಇ: ಹೀರಾ ರಚನೆಗೆ ಕೇಂದ್ರ ಸರ್ಕಾರ ಮುಂದು

ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಸಿ) ಮತ್ತು ತಾಂತ್ರಿಕ ಶಿಕ್ಷಣ ಅಖಿಲ ಭಾರತ ಮಂಡಳಿ...

ನವದೆಹಲಿ: ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಸಿ) ಮತ್ತು ತಾಂತ್ರಿಕ ಶಿಕ್ಷಣ ಅಖಿಲ ಭಾರತ ಮಂಡಳಿ (ಎಐಸಿಟಿಇ) ಇತಿಹಾಸ ಪುಟ ಸೇರಲಿದೆ. ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಅವುಗಳನ್ನು ಬದಲಿಸಿ ಏಕ ಉನ್ನತ ಶಿಕ್ಷಣ ಸಬಲೀಕರಣ ನಿಯಂತ್ರಣ ಏಜೆನ್ಸಿ (ಹೀರಾ - HEERA) ರಚಿಸಲು ಮುಂದಾಗಿದೆ.
ಉನ್ನತ ಶಿಕ್ಷಣ ಸಬಲೀಕರಣ ನಿಯಂತ್ರಣ ಸಂಸ್ಥೆಯ ಉದ್ದೇಶ ನ್ಯಾಯವ್ಯಾಪ್ತಿಯಲ್ಲಿ ಅತಿಕ್ರಮಣಗಳನ್ನು ತೆಗೆದುಹಾಕುವುದು ಮತ್ತು ಅಸಂಬದ್ಧ ನಿಯಂತ್ರಕ ನಿಬಂಧನೆಗಳನ್ನು ತೆಗೆದುಹಾಕುವುದಾಗಿದೆ.
ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ನೀತಿ ಆಯೋಗದ ಜೊತೆ ಸೇರಿ ತಾಂತ್ರಿಕ ಮತ್ತು ತಾಂತ್ರಿಕೇತರ ಶಿಕ್ಷಣ ಸಂಸ್ಥೆಗಳನ್ನು ಒಂದೇ ಸೂರಿನಡಿ ತರಲು ಯೋಜನೆ ರೂಪಿಸುತ್ತಿದೆ.
ಪ್ರಧಾನ ಮಂತ್ರಿಗಳ ಅಧ್ಯಕ್ಷತೆಯಲ್ಲಿ ಶಿಕ್ಷಣಕ್ಕೆ ಸಂಬಂಧಿಸಿದ ಸಭೆ ಕಳೆದ ಮಾರ್ಚ್ ತಿಂಗಳಿನಲ್ಲಿ ನಡೆದಿತ್ತು. ಅದರಲ್ಲಿ ಈ ಮಹತ್ವದ ಬದಲಾವಣೆ ತರಲು ನಿರ್ಧರಿಸಲಾಯಿತು.
ಮೂಲಗಳಿಂದ ಸಿಕ್ಕಿರುವ ಮಾಹಿತಿ ಪ್ರಕಾರ, ಉದ್ದೇಶಿತ ನಿಯಂತ್ರಕಕ್ಕೆ ನೀಲನಕ್ಷೆ ತಯಾರಿಸಲಾಗಿದ್ದು ಶಾಸನವನ್ನು ಜಾರಿಗೆ ತರಲು ಮಾತುಕತೆ ನಡೆಯುತ್ತಿದೆ.
ಆದರೂ ಏಕಮಾತ್ರ ಉನ್ನತ ಶಿಕ್ಷಣ ಪ್ರಾಧಿಕಾರ ಹೊಸದೇನಲ್ಲ. ಸರ್ಕಾರ ರಚಿಸಿದ ಅನೇಕ ಸಮಿತಿಗಳ ಶಿಫಾರಸಿನ ಆಧಾರದ ಮೇಲೆ ನಿಂತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT