ಮೊಸಳೆ(ಸಂಗ್ರಹ ಚಿತ್ರ) 
ದೇಶ

ಭೀಕರ ದೃಶ್ಯ: ಪೋಷಕರೆದುರೆ ಮೊಸಳೆಗೆ ಆಹಾರವಾದ ಯುವತಿ

ಉತ್ತರಪ್ರದೇಶದ ಎತಾವಾ ಜಿಲ್ಲೆಯ ಚಾಕರ್ ನಗರದ ರಾಷ್ಟ್ರೀಯ ಚಂಬಲ್ ಅಭಯಾರಣ್ಯದಲ್ಲಿ ಯುವತಿಯೊಬ್ಬಳ ಮೇಲೆ ದಾಳಿ ಮಾಡಿದ ಮೊಸಳೆ ಆಕೆಯನ್ನು...

ಕಾನ್ಪುರ್: ಉತ್ತರಪ್ರದೇಶದ ಎತಾವಾ ಜಿಲ್ಲೆಯ ಚಾಕರ್ ನಗರದ ರಾಷ್ಟ್ರೀಯ ಚಂಬಲ್ ಅಭಯಾರಣ್ಯದಲ್ಲಿ ಯುವತಿಯೊಬ್ಬಳ ಮೇಲೆ ದಾಳಿ ಮಾಡಿದ ಮೊಸಳೆ ಆಕೆಯನ್ನು ನದಿಯೊಳಗೆ ಎಳೆದುಕೊಂಡು ಹೋಗಿದೆ. 
ಹಿಂದುಗಳ ಮಂಗಳಕರ ದಿನವಾದ ಏಕದಶಿಗಾಗಿ 20 ವರ್ಷದ ಯುವತಿ ಉಪವಾಸದಲ್ಲಿ ತೊಡಗಿದ್ದಳು. ಈ ಮಧ್ಯೆ ಸ್ನಾನ ಮಾಡಲೆಂದು ನದಿಯ ದಂಡೆ ಮೇಲೆ ಸ್ನಾನ ಮಾಡುತ್ತಿದ್ದಾಗ ಮೊಸಳೆಯೊಂದು ಆಕೆಯ ಮೇಲೆ ದಾಳಿ ಮಾಡಿದೆ. ಪೋಷಕರು ಕೂಗಿಕೊಳ್ಳುತ್ತಾ ಬರುವಷ್ಟರಲ್ಲಿ ಮೊಸಳೆ ಆಕೆಯನ್ನು ನದಿಯೊಳಗೆ ಎಳೆದ್ಯೊಯ್ದಿದೆ ಎಂದು ಅಭಯಾರಣ್ಯದ ಅಧಿಕಾರಿಗಳು ತಿಳಿಸಿದ್ದಾರೆ. 
ಪರಿಸರವಾದಿಗಳು ಹೇಳುವಂತೆ ಇದು ಮೊಸಳೆಗಳಿಗೆ ಮೊಟ್ಟೆ ಇಟ್ಟು ಮರಿ ಮಾಡುವ ಕಾಲವಾಗಿದೆ. ಅಂತೆ ನದಿಯ ದಂಡೆಯ ಮೇಲೆ ಮೊಸಳೆ ಮೊಟ್ಟೆ ಇಟ್ಟಿರುವ ಜಾಗದಲ್ಲಿ ಯುವತಿ ಸ್ನಾನ ಮಾಡುತ್ತಿದ್ದಳು ಎಂದು ಕಾಣುತ್ತದ್ದೆ. ಇದರಿಂದ ಆಕ್ರೋಶಗೊಂಡ ಹೆಣ್ಣು ಮೊಸಳೆ ತನ್ನ ಮೊಟ್ಟೆಯ ಗೂಡನ್ನು ಕಾಪಾಡಿಕೊಳ್ಳುವ ಸಲುವಾಗಿ ದಡಕ್ಕೆ ಬಂದು ಯುವತಿ ಮೇಲೆ ದಾಳಿ ಮಾಡಿದೆ ಎಂದು ಹೇಳಿದ್ದಾರೆ. 
ಅಭಯಾರಣ್ಯದ ಅಧಿಕಾರಿಗಳು ಪೊಲೀಸರು ಮತ್ತು ನುರಿತ ಈಜುಗಾರರ ಸಹಾಯದೊಂದಿಗೆ ಯುವತಿಯ ಮೃತದೇಹಕ್ಕಾಗಿ ಶೋಧ ನಡೆಸುತ್ತಿದ್ದಾರೆ ಎಂದು ವಿಭಾಗೀಯ ಅಭಯಾರಣ್ಯಾಧಿಕಾರಿ ಅನಿಲ್ ಪಟೇಲ್ ಹೇಳಿದ್ದಾರೆ. 
ರಾಷ್ಟ್ರೀಯ ಚಂಬಲ್ ಅಭಯಾರಣ್ಯದಲ್ಲಿ ನೂರಾರು ಮೊಸಳೆಗಳು ವಾಸವಾಗಿವೆ. ಕಳೆದ ಮೊಸಳೆ ಗಣತಿಯಲ್ಲಿ 500 ಮೊಸಳೆಗಳು ಇವೆ ಎಂದು ತಿಳಿದುಬಂದಿರುವುದಾಗಿ ಅಧಿಕಾರಿಗಳು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

SCROLL FOR NEXT