ನವದೆಹಲಿ: ದೆಹಲಿಯ ಚಾಂದಿನಿ ಚೌಕ್ ನ ಗುರುದ್ವಾರ ಸಿಸ್ ಗಂಜ್ ಸಮೀಪದ ಮೂರು ಅಂತಸ್ತಿನ ಕಟ್ಟಡದಲ್ಲಿ ಗುರುವಾರ ಅಗ್ನಿ ಅವಘಡ ಸಂಭವಿಸಿದೆ.
ಇಂದು ಮಧ್ಯಾಹ್ನ 1 ಗಂಟೆಯ ಸುಮಾರಿ ಅಗ್ನಿ ಅವಘಡ ಸಂಭವಿಸಿದೆ. ಸ್ಥಳಕ್ಕೆ ಅಗ್ನಿ ಶಾಮಕ ಸಿಬ್ಬಂದಿ ಆಗಮಿಸಿದ್ದು, ಬೆಂಕಿ ನಿಯಂತ್ರಿಸಲು ಯತ್ನಿಸುತ್ತಿದ್ದಾರೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
ಸ್ಥಳಕ್ಕೆ 15 ಅಗ್ನಿ ಶಾಮಕ ವಾಹನಗಳು ಧಾವಿಸಿದ್ದು, ಮೂರು ಅಂತಸ್ಥಿಗೆ ವಿಸ್ತರಿಸಿರುವ ಬೆಂಕಿ ನಂದಿಸುವ ಕಾರ್ಯ ಭರದಿಂದ ಸಾಗಿದೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಿ....