ರಾಧಾ ಮೋಹನ್ ಸಿಂಗ್ 
ದೇಶ

ರೈತರ ಸಾವಿನ ಹೊರತಾಗಿಯೂ ಯೋಗ ನಿರತ ಕೇಂದ್ರ ಕೃಷಿ ಸಚಿವ: ವ್ಯಾಪಕ ಟೀಕೆ

ಮಧ್ಯಪ್ರದೇಶದಲ್ಲಿ ರೈತರು ಗೋಲಿಬಾರ್ ಗೆ ಗುರಿಯಾಗಿ ಸಾವನ್ನಪ್ಪಿದ್ದರೆ, ಪರಿಸ್ಥಿತಿಯ ಬಗ್ಗೆ ನಿಗಾ ವಹಿಸಬೇಕಾದ ಕೇಂದ್ರ ಕೃಷಿ ಸಚಿವ ರಾಧಾ ಮೋಹನ್ ಸಿಂಗ್ ಯೋಗ ನಿರತರಾಗಿದ್ದರು.

ಪಾಟ್ನಾ: ಮಧ್ಯಪ್ರದೇಶದಲ್ಲಿ ರೈತರು ಗೋಲಿಬಾರ್ ಗೆ ಗುರಿಯಾಗಿ ಸಾವನ್ನಪ್ಪಿದ್ದರೆ, ಪರಿಸ್ಥಿತಿಯ ಬಗ್ಗೆ ನಿಗಾ ವಹಿಸಬೇಕಾದ ಕೇಂದ್ರ ಕೃಷಿ ಸಚಿವ ರಾಧಾ ಮೋಹನ್ ಸಿಂಗ್ ಯೋಗ ನಿರತರಾಗಿದ್ದರು. ಕೇಂದ್ರ ಸಚಿವರ ಈ ನಡೆಗೆ ವ್ಯಾಪಕ ಟೀಕೆ ವ್ಯಕ್ತವಾಗಿದೆ. 
ಬಿಹಾರದಲ್ಲಿ ಆಯೋಜಿಸಲಾಗಿದ್ದ ಬಾಬಾ ರಾಮ್ ದೇವ್ ಅವರ ಯೋಗ ಕ್ಯಾಂಪ್ ಗೆ ತೆರಳಿದ್ದ ರಾಧಾ ಮೋಹನ್ ಸಿಂಗ್ ಅವರನ್ನು ಪ್ರಶ್ನಿಸಿದ ಪತ್ರಕರ್ತರಿಗೆ ಕೇಂದ್ರ ಸಚಿವರು ಹೆಚ್ಚು ತಲೆಕೆಡಿಸಿಕೊಳ್ಳಬೇಡಿ, ಯೋಗಾಭ್ಯಾಸ ಮಾಡಿ ಎಂಬ ಉಚಿತ ಸಲಹೆ ನೀಡಿದ್ದಾರೆ. ಕೃಷಿ ಸಚಿವರ ಈ ಹೇಳಿಕೆ, ನಡೆಗೆ ವ್ಯಾಪಕ ಟೀಕೆ ವ್ಯಕ್ತವಾಗಿದ್ದು, ಬಿಹಾರದ ಆಡಳಿತ ಪಕ್ಷಗಳಾದ ಜೆಡಿಯು, ಆರ್ ಜೆಡಿ ರಾಧಾ ಮೋಹನ್ ಸಿಂಗ್ ಅವರ ನಡೆಯನ್ನು ಖಂಡಿಸಿವೆ.
ರೈತರ ಬಗ್ಗೆ ಬಿಜೆಪಿಗೆ ಇರುವ ನಿಜವಾದ ಕಾಳಜಿಯನ್ನು ಕೃಷಿ ಸಚಿವ ರಾಧಾ ಮೋಹನ್ ಸಿಂಗ್ ಬಯಲು ಮಾಡಿದ್ದಾರೆ. ಮಧ್ಯಪ್ರದೇಶದಲ್ಲಿ ಪ್ರತಿಭಟನಾ ನಿರತ ರೈತರನ್ನು ಭೇಟಿ ಮಾಡಿ ಸಮಸ್ಯೆ ಬಗೆಹರಿಸುವುದರ ಬದಲು ಯೋಗಾಭ್ಯಾಸದಲ್ಲಿ ಆನಂದದಿಂದ ಕಾಲಕಳೆಯುತ್ತಿದ್ದಾರೆ ಎಂದು ಜೆಡಿಯು ವಕ್ತಾರ ನೀರಜ್ ಕುಮಾರ್ ಹೇಳಿದ್ದರೆ, ನಾವು ಎಂಥಹ ಕೃಷಿ ಸಚಿವರನ್ನು ಹೊಂದಿದ್ದೇವೆ ಎಂದು ಆರ್ ಜೆಡಿ ವಕ್ತಾರ ಪ್ರಗತಿ ಮೆಹ್ತಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

Udaipur: ನಿಜಕ್ಕೂ ಅಚ್ಚರಿ, 55ನೇ ವಯಸ್ಸಿನಲ್ಲಿ 17ನೇ ಮಗುವಿಗೆ ತಾಯಿಯಾದ ಮಹಿಳೆ!

SCROLL FOR NEXT