ಕೇಂದ್ರ ಕೃಷಿ ಸಚಿವ ರಾಧಾ ಮೋಹನ್ ಸಿಂಗ್ 
ದೇಶ

ಒರಿಸ್ಸಾದಲ್ಲಿ ಕೇಂದ್ರ ಕೃಷಿ ಸಚಿವರ ಮೇಲೆ ಮೊಟ್ಟೆ ದಾಳಿ

ಮಧ್ಯ ಪ್ರದೇಶದಲ್ಲಿ ಪೊಲೀಸರು ಗೋಲಿಬಾರ್ ನಡೆಸಿ ರೈತರನ್ನು ಹತ್ಯೆಗೈದದನ್ನು ವಿರೋಧಿಸಿ ಒರಿಸ್ಸಾದ ಯುವ ಕಾಂಗ್ರೆಸ್ ಕಾರ್ಯಕರ್ತರು ಶನಿವಾರ ಕೇಂದ್ರ ಕೃಷಿ ಸಚಿವ ರಾಧಾ ಮೋಹನ್ ಸಿಂಗ್ ಅವರ ಮೇಲೆ

ಭುವನೇಶ್ವರ: ಮಧ್ಯ ಪ್ರದೇಶದಲ್ಲಿ ಪೊಲೀಸರು ಗೋಲಿಬಾರ್ ನಡೆಸಿ ರೈತರನ್ನು ಹತ್ಯೆಗೈದದನ್ನು ವಿರೋಧಿಸಿ ಒರಿಸ್ಸಾದ ಯುವ ಕಾಂಗ್ರೆಸ್ ಕಾರ್ಯಕರ್ತರು ಶನಿವಾರ ಕೇಂದ್ರ ಕೃಷಿ ಸಚಿವ ರಾಧಾ ಮೋಹನ್ ಸಿಂಗ್ ಅವರ ಮೇಲೆ ಮೊಟ್ಟೆಗಳನ್ನು ಎಸೆದಿದ್ದಾರೆ.
ರಾಜ್ಯ ಅತಿಥಿ ಗೃಹದಿಂದ ಖುರ್ದ ಜಿಲ್ಲೆಯ ಜತನಿಗೆ ತೆರಳುತ್ತಿರುವಾಗ ಸಿಂಗ್ ಅವರ ಮೇಲೆ ಮೊಟ್ಟೆಗಳನ್ನು ಎಸೆಯಲಾಗಿದೆ. 'ಸಬ್ ಕ ಸಾಥ್, ಸಬ್ ಕ ವಿಕಾಸ್' ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕೇಂದ್ರ ಸಚಿವರು ಒರಿಸ್ಸಾ ಪ್ರವಾಸದಲ್ಲಿದ್ದಾರೆ. 
ಇದೆ ಸಮಯದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಕಪ್ಪು ಬಾವುಟಗಳನ್ನು ಹಿಡಿದು ಕೇಂದ್ರ ಸಚಿವರ ವಿರುದ್ಧ ಪ್ರತಿಭಟನೆ ನಡೆಸಿದರು. 
ಈ ಘಟನೆಯ ನಂತರ ಪೊಲೀಸ್ ಕಮಿಷನರ್ ಎಫ್ ಐ ಆರ್ ದಾಖಲಿಸಿ ಯುವ ಕಾಂಗ್ರೆಸ್ ಅಧ್ಯಕ್ಷ ಲೋಕನಾಥ್ ಮಹಾರಥಿ ಅವರನ್ನು ಸೇರಿದಂತೆ ಐವರನ್ನು ಬಂಧಿಸಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ಕಮಿಷನರ್ ವೈ ಬಿ ಖುರಾನಿಯ ಹೇಳಿದ್ದಾರೆ. 
ಕೇಂದ್ರ ಸರ್ಕಾರ ರೈತ ವಿರೋಧಿಯಾಗಿದೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಪ್ರದೀಪ್ ಮಾಜಿ ಆರೋಪಿಸಿದ್ದಾರೆ.
"ಅವರಿಗೆ ಒಂದಷ್ಟು ಸೂಕ್ಷತೆಯ ಅರಿವು ಮೂಡುವಂತೆ ಮಾಡಲು ಈ ಮೊಟ್ಟೆ ದಾಳಿಯನ್ನು ಮಾಡಲಾಯಿತು. ಇದರಿಂದಾದರೂ ಅವರಿಗೆ ಒರಿಸ್ಸಾದ ಮತ್ತು ರಾಷ್ಟ್ರದ ಇತರ ಭಾಗದ ರೈತರ ಸಮಸ್ಯೆಗಳನ್ನು ಕಾಣಲಿ ಎಂದು" ಕೂಡ ಮಾಜಿ ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ?

ಅಯೋಧ್ಯೆಯಲ್ಲಿ ಮತ್ತೊಂದು 'ನಿಗೂಢ' ಸ್ಫೋಟ: ಸಾವಿನ ಸಂಖ್ಯೆ 6ಕ್ಕೆ ಏರಿಕೆ, Video Viral

SCROLL FOR NEXT