ಮಂಡಸೌರ್ 
ದೇಶ

ಹಿಂಸಾಚಾರ ನಡೆಸಲು ರೈತರಿಗೆ ಕಾಂಗ್ರೆಸ್ ಪ್ರಚೋದನೆ: ಮಧ್ಯಪ್ರದೇಶ ಬಿಜೆಪಿ ಸಂಸದ

ಹಿಂಸಾಚಾರ ಪೀಡಿತ ಮಂಡಸೌರ್ ಸಾಮಾನ್ಯ ಸ್ಥಿತಿಗೆ ಮರಳುತ್ತಿದ್ದು, ಬಿಜೆಪಿ ಸಂಸದ ಸುಧೀರ್ ಗುಪ್ತಾ ಹಿಂಸಾಚಾರ ನಡೆಯಲು ಕಾಂಗ್ರೆಸ್ ಪಕ್ಷದ ಪ್ರಚೋದನೆಯೇ ಕಾರಣ ಎಂದು ಆರೋಪಿಸಿದ್ದಾರೆ.

ಮಂಡಸೌರ್: ಹಿಂಸಾಚಾರ ಪೀಡಿತ ಮಂಡಸೌರ್ ಸಾಮಾನ್ಯ ಸ್ಥಿತಿಗೆ ಮರಳುತ್ತಿದ್ದು, ಬಿಜೆಪಿ ಸಂಸದ ಸುಧೀರ್ ಗುಪ್ತಾ ಹಿಂಸಾಚಾರ ನಡೆಯಲು ಕಾಂಗ್ರೆಸ್ ಪಕ್ಷದ ಪ್ರಚೋದನೆಯೇ ಕಾರಣ ಎಂದು ಆರೋಪಿಸಿದ್ದಾರೆ. 
ರೈತರ ಪ್ರತಿಭಟನೆಗೆ ವಿಪಕ್ಷ ನೇತೃತ್ವ ವಹಿಸಿತ್ತು. ಕಾಂಗ್ರೆಸ್ ನ ಪ್ರಚೋದನೆಯಿಂದಲೇ ರೈತರು ಹಿಂಸಾಚಾರದ ಮಾರ್ಗ ಹಿಡಿದರು ಎಂದು ಮಂಡಸೌರ್ ನ ಬಿಜೆಪಿ ಸಂಸದ ಸುಧೀರ್ ಗುಪ್ತಾ ಹೇಳಿದ್ದಾರೆ. ಕೇರಳದಲ್ಲಿ ಇತ್ತೀಚೆಗಷ್ಟೆ ಯೂತ್ ಕಾಂಗ್ರೆಸ್ ನ ನಾಯಕರು ಕರುವಿನ ಕತ್ತು ಸೀಳಿ ಗೋಹತ್ಯೆ ಮಾಡಿರುವ ಪ್ರಕರಣದಿಂದ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಕಾಂಗ್ರೆಸ್ ಮಂಡಸೌರ್ ನಲ್ಲಿ ಹಿಂಸಾಚಾರಕ್ಕೆ ಪ್ರಚೋದನೆ ನೀಡಿದೆ ಎಂದು ಗುಪ್ತಾ ಕಾಂಗ್ರೆಸ್ ವಿರುದ್ಧ ಆರೋಪ ಮಾಡಿದ್ದಾರೆ. 
ಮಂಡಸೌರ್ ನಲ್ಲಿ ನಡೆದ ಪ್ರತಿಭಟನೆ ರೈತರ ಪ್ರತಿಭಟನೆಯಾಗಿರಲಿಲ್ಲ. ಕಾಂಗ್ರೆಸ್ ನ ಪ್ರತಿಭಟನೆಯಾಗಿತ್ತು. ಕಾಂಗ್ರೆಸ್ ಇದಕ್ಕೆ ಸರಿಯಾದ ಬೆಲೆ ತೆರಲಿದೆ ಎಂದು ಎಚ್ಚರಿಸಿದ್ದಾರೆ. ಭಾರತ ಪ್ರಜಾಪ್ರಭುತ್ವ ರಾಷ್ಟ್ರ ಪ್ರತಿಭಟನೆ ನಡೆಸಲು, ಬೇಡಿಕೆಗಳನ್ನು ಮುಂದಿಡಲು ರೈತರಿಗೆ ಹಕ್ಕಿದೆ, ಆದರೆ ರೈತರು ಪ್ರತಿಭಟನೆ ಹೆಸರಿನಲ್ಲಿ ಹಿಂಸಾಚಾರಕ್ಕಿಳಿಯುತ್ತಾರೆ ಎಂಬುದನ್ನು ಊಹಿಸಿಕೊಳ್ಳಲು ಸಾಧ್ಯವಿಲ್ಲ. ಇದು ನಡೆದಿರುವುದು ಕಾಂಗ್ರೆಸ್ ನ ಪ್ರಚೋದನೆಯಿಂದಲೇ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT