ಶಿವರಾಜ್ ಸಿಂಗ್ ಚೌಹ್ವಾಣ್ 
ದೇಶ

ರೈತರಿಗಾಗಿ ಉತ್ತಮವಾದುದ್ದನ್ನೇ ಮಾಡಲು ಯತ್ನಿಸಿದ್ದೇನೆ, ಅವರ ಸಮಸ್ಯೆ ನಮ್ಮ ಸಮಸ್ಯೆ ಕೂಡ ಹೌದು: ಶಿವರಾಜ್ ಸಿಂಗ್

ಮಂಡಸೌರ್ ರೈತರ ಮೇಲಿನ ಗೋಲಿಬಾರ್ ಪ್ರಕರಣದ ನಂತರ ಮಧ್ಯಪ್ರದೇಶದಲ್ಲಿ ಭುಗಿಲೆದ್ದಿರುವ ಹಿಂಸಾಚಾರ ತಡೆಗೆ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹ್ವಾಣ್ ಕೈಗೊಂಡಿರುವ ಉಪವಾಸ ನಿರಶನ 2 ನೇ ದಿನಕ್ಕೆ...

ಭೋಪಾಲ್: ಮಂಡಸೌರ್ ರೈತರ ಮೇಲಿನ ಗೋಲಿಬಾರ್ ಪ್ರಕರಣದ ನಂತರ ಮಧ್ಯಪ್ರದೇಶದಲ್ಲಿ ಭುಗಿಲೆದ್ದಿರುವ ಹಿಂಸಾಚಾರ ತಡೆಗೆ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹ್ವಾಣ್ ಕೈಗೊಂಡಿರುವ ಉಪವಾಸ ನಿರಶನ 2 ನೇ ದಿನಕ್ಕೆ ಕಾಲಿಟ್ಟಿದ್ದು, ಎಂದಿಗೂ ರೈತರಿಗಾಗಿ ಉತ್ತಮವಾದುದ್ದನ್ನೇ ಮಾಡಲು ಯತ್ನಿಸಿದ್ದೇನೆ, ರೈತರ ಸಮಸ್ಯೆ ನಮ್ಮ ಸಮಸ್ಯೆಯೂ ಹೌದು ಎಂದು ಶಿವರಾಜ್ ಸಿಂಗ್ ಚೌಹ್ವಾಣ್ ಹೇಳಿದ್ದಾರೆ. 
ಗೋಲಿಬಾರ್ ಪ್ರಕರಣದ ನಂತರ ಮಧ್ಯಪ್ರದೇಶದಲ್ಲಿ ಭುಗಿಲೆದ್ದಿರುವ ಹಿಂಸಾಚಾರ ತಡೆಗೆ ಶಿವರಾಜ್ ಸಿಂಗ್ ಚೌಹ್ವಾಣ್ ಜೂ.10 ರಿಂದ ಉಪವಾಸ ನಿರಶನ ಪ್ರಾರಂಭಿಸಿದ್ದಾರೆ. ಉಪವಾಸ ನಿರಶನದ 2 ನೇ ದಿನ ಪತ್ರಕರ್ತರೊಂದಿಗೆ ಮಾತನಾಡಿರುವ ಶಿವರಾಜ್ ಸಿಂಗ್ ಚೌಹ್ವಾಣ್, ರೈತರಿಗಾಗಿ ಉತ್ತ್ತಮವಾದುದ್ದನ್ನೇ ಮಾಡಲು ಯತ್ನಿಸಿದ್ದೇನೆ, ರೈತರ ಸಮಸ್ಯೆ ನಮ್ಮ ಸಮಸ್ಯೆಯೂ ಹೌದು ಎಂದು ಹೇಳಿದ್ದು, ಕೃಷಿಯನ್ನು ಲಾಭದಾಯಕ ಕೆಲಸವನ್ನಾಗಿ ಮಾಡುವುದಕ್ಕೆ ಕ್ರಮ ಕೈಗೊಂಡಿರುವುದಾಗಿ ಹೇಳಿದ್ದಾರೆ. 
ಕೃಷಿಯ ಅಭಿವೃದ್ಧಿಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೈಗೊಂಡಿರುವ ಕ್ರಮಗಳ ಬಗ್ಗೆಯೂ ಮೆಚ್ಚುಗೆ ವ್ಯಕ್ತಪಡಿಸಿರುವ ಚೌಹ್ವಾಣ್, ಕಳೆದ ವರ್ಷ ಬೆಳೆ ನಷ್ಟವಾದಾಗ ಪರಿಹಾರ ನೀಡಲು ಕೇಂದ್ರ ಸರ್ಕಾರ ಮಧ್ಯಪ್ರದೇಶಕ್ಕೆ 4,800 ಕೋಟಿ ರೂಪಾಯಿ ಬಿಡುಗಡೆ ಮಾಡಿತ್ತು ಎಂದು ಹೇಳಿದ್ದಾರೆ. ಇದೇ ವೇಳೆ ಮಂಡಸೌರ್ ನಲ್ಲಿ ಗಲಭೆ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದ್ದು, 4 ಪೊಲೀಸ್ ಠಾಣೆಗಳ ಪೈಕಿ 3 ಪೊಲೀಸ್ ಠಾಣೆಗಳಲ್ಲಿ ಕರ್ಫ್ಯೂ ತೆರವುಗೊಳಿಸಲಾಗಿದೆ.   

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವು ಇಲ್ಲಿ ಹುಟ್ಟೋದು ಬೇಡ ನಿಮ್ಮ ಕ್ಷೇತ್ರದ ಶೇ. 75 ರಷ್ಟಾದರೂ ಇಲ್ಲಿ ಅಭಿವೃದ್ಧಿ ಮಾಡಿ: ಡಿಕೆಶಿಗೆ ಖರ್ಗೆ ಟಾಂಗ್; Video

ಸ್ವಾತಂತ್ರ್ಯ ಬಳಿಕ ಇದೇ ಮೊದಲು, ಮಕರ ಸಂಕ್ರಾಂತಿಗೆ ಮತ್ತೊಂದು ಹೊಸ 'ದಾಖಲೆ'ಗೆ ಸಜ್ಜಾದ ಪ್ರಧಾನಿ ಮೋದಿ!

ಡೆಂಟಲ್ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ ಕೇಸ್: ಕೆಲಸದಿಂದ 6 ಪ್ರಾಧ್ಯಾಪಕರ ವಜಾ

ಯಶ್ 'ಟಾಕ್ಸಿಕ್' ಟೀಸರ್ ವಿರುದ್ಧ ಮಹಿಳಾ ಆಯೋಗಕ್ಕೆ ಎಎಪಿ ದೂರು; 'ಆ' ದೃಶ್ಯಕ್ಕೆ ಆಕ್ಷೇಪ!

ಟ್ರಂಪ್ ಗೆ 'ಮರೆಯಲಾಗದ ಪಾಠ' ಕಲಿಸುತ್ತೇವೆ: ಖಡಕ್ ವಾರ್ನಿಂಗ್ ನೀಡಿದ ಇರಾನ್ ಸಂಸತ್ ಸ್ಪೀಕರ್!

SCROLL FOR NEXT