ಉರಿ ಭಯೋತ್ಪಾದಕ ದಾಳಿ 
ದೇಶ

ಉರಿ ದಾಳಿ: ಪಾಕಿಸ್ತಾನಕ್ಕೆ ಎನ್ಐಎ ಪತ್ರ, ಉಗ್ರನ ಡಿಎನ್ಎ ಬಗ್ಗೆ ಉಲ್ಲೇಖ

ಉರಿ ದಾಳಿಗೆ ಸಂಬಂಧಿಸಿದಂತೆ ಪಾಕಿಸ್ತಾನಕ್ಕೆ ಭಾರತದ ತನಿಖಾ ಸಂಸ್ಥೆ ಎನ್ಐಎ ಅಧಿಕೃತ ಪತ್ರ ಕಳಿಸಿದ್ದು ತನಿಖೆಗೆ ಸಹಕರಿಸುವಂತೆ ಕೋರಿದೆ.

ನವದೆಹಲಿ: ಉರಿ ದಾಳಿಗೆ ಸಂಬಂಧಿಸಿದಂತೆ ಪಾಕಿಸ್ತಾನಕ್ಕೆ ಭಾರತದ ತನಿಖಾ ಸಂಸ್ಥೆ  ಎನ್ಐಎ ಅಧಿಕೃತ ಪತ್ರ ಕಳಿಸಿದ್ದು ತನಿಖೆಗೆ ಸಹಕರಿಸುವಂತೆ ಕೋರಿದೆ. 
ಇಂಡಿಯಾ ಟುಡೆ ವರದಿ ಪ್ರಕಾರ, ದಾಳಿಯ ನಂತರ ವಶಕ್ಕೆ ಪಡೆದಿರುವುದರ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ಪಾಕಿಸ್ತಾನಕ್ಕೆ ಎನ್ಐಎ ಮನವಿ ಮಾಡಿದೆ. 2016  ರ ಸೆಪ್ಟೆಂಬರ್ ನಲ್ಲಿ  ಉರಿ ಸೆಕ್ಟರ್ ನಲ್ಲಿ ನಡೆದಿದ್ದ ಭಯೋತ್ಪಾದಕ ದಾಳಿಯ ಹಿಂದೆ ಲಷ್ಕರ್-ಎ-ತಯ್ಬಾ ಉಗ್ರ ಸಂಘಟನೆಯ ಅಬು ಅನಾಸ್ ಎಂಬ ಉಗ್ರನ ಕೈವಾಡವಿದೆ ಎಂದು ಶಂಕಿಸಲಾಗಿದ್ದು, ಆತನ ಡಿಎನ್ಎ, ಬಟ್ಟೆ, ಶೂ, ಔಷಧಗಳ ಬಗ್ಗೆ ಉಲ್ಲೇಖಿಸಲಾಗಿದೆ ಎಂದು ತಿಳಿದುಬಂದಿದೆ. 
ದಾಳಿಯಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ಉಳಿದ 3 ಉಗ್ರರ ಗುರುತು ಇನ್ನೂ ಸ್ಪಷ್ಟವಾಗಿ ತಿಳಿದುಬಂದಿಲ್ಲ. 2016 ರ ಸೆಪ್ಟೆಂಬರ್ ನಲ್ಲಿ ಕಾಶ್ಮೀರದ ಉರಿ ಸೆಕ್ಟರ್ ನಲ್ಲಿ  ಭಾರತೀಯ ಸೇನಾ ನೆಲೆಯ ಮೇಲೆ ದಾಳಿ ನಡೆಸಿದ್ದ ಉಗ್ರರು 18 ಯೋಧರನ್ನು ಹತ್ಯೆ ಮಾಡಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT