ಗೋವುಗಳು 
ದೇಶ

ರಾಜಸ್ತಾನದ ಹೆದ್ದಾರಿಯಲ್ಲಿ ಜಾನುವಾರು ಸಾಗಿಸುತ್ತಿದ್ದ ವಾಹನದ ಮೇಲೆ ಗೋರಕ್ಷಕರ ದಾಳಿ

ಜೈಸ್ಲ್ಮೆರ್ ನಿಂದ ತಮ್ಮ ರಾಜ್ಯಕ್ಕೆ ಗೋವುಗಳನ್ನು ಸಾಗಿಸುತ್ತಿದ್ದ ತಮಿಳುನಾಡು ಅಧಿಕಾರಿಗಳ ವಾಹನದ ಮೇಲೆ ಗೋರಕ್ಷಕರು ದಾಳಿ ಮಾಡಿದ್ದು ರಾಜಸ್ತಾನದ ರಾಷ್ಟ್ರೀಯ...

ಜೈಸ್ಲ್ಮೇರ್: ಜೈಸ್ಲ್ಮೆರ್ ನಿಂದ ತಮ್ಮ ರಾಜ್ಯಕ್ಕೆ ಗೋವುಗಳನ್ನು ಸಾಗಿಸುತ್ತಿದ್ದ ತಮಿಳುನಾಡು ಅಧಿಕಾರಿಗಳ ವಾಹನದ ಮೇಲೆ ಗೋರಕ್ಷಕರು ದಾಳಿ ಮಾಡಿದ್ದು ರಾಜಸ್ತಾನದ ರಾಷ್ಟ್ರೀಯ ಹೆದ್ದಾರಿ 15ನ್ನು ಬಂದ್ ಮಾಡಿದ್ದಾರೆ. 
ರಾಜಸ್ತಾನದ ಬರ್ಮೇರ್ ಜಿಲ್ಲೆಯಲ್ಲಿ ಕಳೆದ ರಾತ್ರಿ ಗೋವುಗಳ ಕಳ್ಳಸಾಗಣೆ ಮಾಡುತ್ತಿದ್ದಾರೆ ಎಂದು ಶಂಕಿಸಿ 50ಕ್ಕೂ ಹೆಚ್ಚು ಗೋರಕ್ಷಕರು ದಾಳಿ ಮಾಡಿದ್ದು ವಾಹನದ ಮೇಲೆ ಕಲ್ಲು ತೂರಾಟ ನಡೆಸಿದ್ದರು. ಈ ಪ್ರಕರಣ ಸಂಬಂಧ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.
ಪ್ರಕರಣ ಸಂಬಂಧ ಶೀಘ್ರ ಕ್ರಮಕೈಗೊಳ್ಳದ್ದರಿಂದ ಪೊಲೀಸ್ ಇನ್ಸ್ ಪೆಕ್ಟರ್ ಸೇರಿದಂತೆ ಏಳು ಪೊಲೀಸರ ವಿರುದ್ಧ ಕ್ರಮಕೈಗೊಳ್ಳಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. 
ತಮಿಳುನಾಡಿನ ಪಶುಪಾಲನಾ ಇಲಾಖೆ ಅಧಿಕಾರಿಗಳು 50 ಜಾನುವಾರುಗಳನ್ನು ಖರೀದಿಸಿದ್ದರು. ಅವುಗಳನ್ನು ಐದು ಟ್ರಕ್ ಗಳ ಮೂಲಕ ಸಾಗಿಸುತ್ತಿದ್ದರು. ಜಾನುವಾರುಗಳ ಸಾಗಾಣೆಗೆ ಬೇಕಾದ ಎಲ್ಲಾ ಪ್ರಮಾಣಪತ್ರಗಳನ್ನು ಅಧಿಕಾರಿಗಳು ಪಡೆದಿದ್ದರು. ಆದರೆ ಕೆಲ ಗೋರಕ್ಷಕರು ವಾಹನಗಳ ಮೇಲೆ ದಾಳಿ ಮಾಡಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT