ಸಂಗ್ರಹ ಚಿತ್ರ 
ದೇಶ

ಮಂಡಸೌರ್ ಹಿಂಸಾಚಾರ ಪ್ರಕರಣ: ರೈತನ ಮೃತದೇಹಕ್ಕೆ ರಾಷ್ಟ್ರಧ್ವಜ ಹೊದಿಸಿದ ಕುಟುಂಬಸ್ಥರು

ಮಧ್ಯಪ್ರದೇಶ ಪೊಲೀಸರ ವಶದಲ್ಲಿದ್ದಾಗಲೇ ಮೃತಪಟ್ಟ ಹಿಂಸಾಚಾರ ಪೀಡಿತ ಮಂಡಸೌರ್ ಜಿಲ್ಲೆಯ ರೈತನನ್ನು ಹುತಾತ್ಮ ಎಂದು ಘೋಷಿಸಬೇಕು ಎಂದು ಪಟ್ಟು ಹಿಡಿದಿದ್ದ ಬಂಧುಗಳು, ಸರ್ಕಾರ ಮಣಿಯದೇ ಇದ್ದಾಗ ಮೃತ ರೈತನ ದೇಹಕ್ಕೆ ಅಂತಿಮ ಸಂಸ್ಕಾರದ ವೇಳೆ ರಾಷ್ಟ್ರಧ್ವಜ ಹೊದಿಸಿ ಅಪಮಾನ...

ಇಂದೋರ್: ಮಧ್ಯಪ್ರದೇಶ ಪೊಲೀಸರ ವಶದಲ್ಲಿದ್ದಾಗಲೇ ಮೃತಪಟ್ಟ ಹಿಂಸಾಚಾರ ಪೀಡಿತ ಮಂಡಸೌರ್ ಜಿಲ್ಲೆಯ ರೈತನನ್ನು ಹುತಾತ್ಮ ಎಂದು ಘೋಷಿಸಬೇಕು ಎಂದು ಪಟ್ಟು ಹಿಡಿದಿದ್ದ ಬಂಧುಗಳು, ಸರ್ಕಾರ ಮಣಿಯದೇ ಇದ್ದಾಗ ಮೃತ ರೈತನ ದೇಹಕ್ಕೆ ಅಂತಿಮ ಸಂಸ್ಕಾರದ ವೇಳೆ ರಾಷ್ಟ್ರಧ್ವಜ ಹೊದಿಸಿರುವ ಘಟನೆ ನಡೆದಿದೆ. 
ಮೃತ ರೈತನನ್ನು ಘನಶ್ಯಾಮ ಧಕಡ್ ಎಂದು ಹೇಳಲಾಗುತ್ತಿದೆ. ಸರ್ಕಾರಿ ಗೌರವಗಳೊಂದಿಗೆ ಗಣ್ಯರು, ಯೋಧರ ಅಂತ್ಯಕ್ರಿಯೆ ನಡೆಸುವಾಗ ಮಾತ್ರ ರಾಷ್ಟ್ರಧ್ವಜವನ್ನು ಕಳೇಬರದ ಮೇಲೆ ಹೊದಿಸಲಾಗುತ್ತದೆ. 
ರೈತನ ಮೃತದೇಹಕ್ಕೆ ರಾಷ್ಟ್ರಧ್ವಜ ಹೊದಿಸಿದ್ದೇ ಆದರೆ, ಅದು ರಾಷ್ಟ್ರಧ್ವಜ ಸಂಹಿತೆಯ ಉಲ್ಲಂಘನೆಯಾಗಲಿದೆ. ನಾನು ಸ್ಥಳಕ್ಕೆ ಹೋದಾಗ ರೈತನ ಮೃತ ದೇಹದ ಮೇಲೆ ಹೊದಿಕೆ ಮಾತ್ರ ಇತ್ತು. ಅಂತ್ಯಸಂಸ್ಕಾರದ ಅಂತಿಮ ಸಮಯದ ವೇಳೆ ನಾನು ಸ್ಥಳದಲ್ಲಿರಲಿಲ್ಲ. ರಾಷ್ಟ್ರಧ್ವಜಕ್ಕೆ ಅವಮಾನವಾಗುವುದಕ್ಕೆ ನಾವು ಬಿಡುವುದಿಲ್ಲ. ಪ್ರಕರಣ ಸಂಬಂಧ ತನಿಖೆ ನಡೆಸಲಾಗುತ್ತಿದೆ ಎಂದು ಮಂಡಸೌರ್ ಜಿಲ್ಲಾಧಿಕಾರಿ ಒಪಿ. ಶ್ರೀವಾತ್ಸವ ಅವರು ಹೇಳಿದ್ದಾರೆ. 
ಆದರೆ, ರೈತನಿಗೆ ರಾಷ್ಟ್ರಧ್ವಜ ಹೊದಿಸಿರುವ ಫೋಟೋಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಸಾಕಷ್ಟು ಟೀಕೆ, ವಿರೋಧಗಳು ವ್ಯಕ್ತವಾಗತೊಡಗಿವೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT