ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ 
ದೇಶ

ರೈತರ ಕುರಿತ ಚೌಹಾಣ್ ಉಪವಾಸವೊಂದು 'ನಾಟಕ': ಕಾಂಗ್ರೆಸ್

ರಾಜ್ಯದಲ್ಲಿ ರೈತರ ಪ್ರತಿಭಟವೆ ವೇಳೆ ಉಂಟಾಗಿದ್ದ ಹಿಂಸಾಚಾರ ಹಿನ್ನಲೆಯಲ್ಲಿ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಕೈಗೊಂಡಿದ್ದ ಶಾಂತಿಯುತ ಉಪವಾಸವೊಂದು...

ಭೋಪಾಲ್: ರಾಜ್ಯದಲ್ಲಿ ರೈತರ ಪ್ರತಿಭಟವೆ ವೇಳೆ ಉಂಟಾಗಿದ್ದ ಹಿಂಸಾಚಾರ ಹಿನ್ನಲೆಯಲ್ಲಿ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಕೈಗೊಂಡಿದ್ದ ಶಾಂತಿಯುತ ಉಪವಾಸವೊಂದು ನಾಟಕವಾಗಿತ್ತು ಎಂದು ಕಾಂಗ್ರೆಸ್ ಸೋಮವಾರ ಹೇಳಿದೆ. 
ಈ ಕುರಿತಂತೆ ಮಾತನಾಡಿರುವ ಕಾಂಗ್ರೆಸ್ ನಾಯಕ ಪಿ.ಎಲ್. ಪುಣ್ಯ ಅವರು, ಮಂಡಸೌರ್ ಹಿಂಸಾಚಾರದಿಂದ ಅತ್ಯಂತ ನೋವು ಹಾಗೂ ಬೇಸರವನ್ನು ತಂದಿದೆ. ರಾಜ್ಯದಲ್ಲಿ ಇಷ್ಟೆಲ್ಲಾ ಆದರೂ ಮಧ್ಯಪ್ರದೇಶ ಮುಖ್ಯಮಂತ್ರಿಗಳು ಉಪವಾಸ ಮಾಡುವ ಮೂಲಕ ದೊಡ್ಡ ನಾಟಕವಾಡಿದ್ದಾರೆ. ಮುಖ್ಯಮಂತ್ರಿಗಳು ಉಪವಾಸ ಮಾಡಿದ್ದರೂ ಈಗಲೂ ರಾಜ್ಯದಲ್ಲಿ ರೈತರು ಅದೇ ರೀತಿಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆಂದು ಹೇಳಿದ್ದಾರೆ. 
ರೈತರ ಮೇಲಿನ ಗೋಲಿಬಾರ್ ಹಿನ್ನಲೆಯಲ್ಲಿ ರಾಜ್ಯದಲ್ಲಿ ಭುಗಿಲೆದ್ದಿದ್ದ ಹಿಂಸೆಯಿಂದ ನೊಂದಿರುವುದಾಗಿ ಹೇಳಿದ್ದ ಚೌಹಾಣ್ ಅವರು, ಶನಿವಾರ ಬೆಳಿಗ್ಗೆ 11 ಗಂಟೆಗೆ ಭೋಪಾಲ್ ನ ದಸರಾ ಮೈದಾನದಲ್ಲಿ ಉಪವಾಸ ಆರಂಭಿಸಿದ್ದರು. ಭಾನುವಾಹ ಮಧ್ಯಾಹ್ನ 3.30ರ ಸುಮಾರಿಗೆ ಮಾಜಿ ಮುಖ್ಯಮಂತ್ರಿ ಕೈಲಾಶ ಜೋಶಿ ಅವರು ಚೌಹಾಣ್ ಗೆ ಎಳನೀರು ಕುಡಿಸುವ ಮೂಲಕ ಉಪವಾಸಕ್ಕೆ ಮಂಗಳ ಹಾಡಿದ್ದರು.  

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

ಡೆವಿಲ್‌' ಸಿನಿಮಾದ 'ಇದ್ರೆ ನೆಮ್ಮದಿಯಾಗಿ ಇರಬೇಕು' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT