ಸುವರ್ಣ ರಾಜ್ 
ದೇಶ

ನಾನು ರೈಲ್ವೆ ಸಚಿವರ ಭೇಟಿ ಮಾಡಬೇಕು: ರೈಲಿನ ನೆಲದ ಮೇಲೆ ಮಲಗಿ ಪ್ರಯಾಣಿಸಿದ ಪ್ಯಾರಾ ಅಥ್ಲೀಟ್

ವಿಕಲಚೇತನರ ಕೋಟಾದಡಿ ಲೋವರ್ ಬರ್ತ್ ನೀಡದ ಹಿನ್ನೆಲೆಯಲ್ಲಿ ರೈಲಿನ ನೆಲದ ಮೇಲೆಯೇ ಮಲಗಿ ಪ್ರಯಾಣಿಸಿದ ಅಂತಾರಾಷ್ಟ್ರೀಯ....

ನವದೆಹಲಿ: ವಿಕಲಚೇತನರ ಕೋಟಾದಡಿ ಲೋವರ್ ಬರ್ತ್ ನೀಡದ ಹಿನ್ನೆಲೆಯಲ್ಲಿ ರೈಲಿನ ನೆಲದ ಮೇಲೆಯೇ ಮಲಗಿ ಪ್ರಯಾಣಿಸಿದ ಅಂತಾರಾಷ್ಟ್ರೀಯ ಟೇಬಲ್ ಟೆನ್ನಿಸ್ ಟೂರ್ನಮೆಂಟ್ ಗಳಲ್ಲಿ ಹಲವು ಪ್ರಶಸ್ತಿಗಳನ್ನು ಗೆದ್ದ ಪ್ಯಾರಾ ಅಥ್ಲೀಟ್ ಸುವರ್ಣ ರಾಜ್ ಅವರು, ಈ ಸಂಬಂಧ ತಾವು ರೈಲ್ವೆ ಸಚಿವ ಸುರೇಶ್ ಪ್ರಭು ಅವರನ್ನು ಭೇಟಿ ಮಾಡಬೇಕು ಎಂದು ಸೋಮವಾರ ಹೇಳಿದ್ದಾರೆ.
ಸುವರ್ಣ ಅವರು ನಾಗ್ಪುರ- ನಿಜಾಮುದ್ದೀನ್ ಗರಿಬ್ ರಥ ಎಕ್ಸ್ ಪ್ರೆಸ್ ರೈಲಿನಲ್ಲಿ ಟಿಕೆಟ್ ಬುಕ್ ಮಾಡಿದ್ದರು. ಆದರೆ ಅವರಿಗೆ ಲೋವರ್ ಬರ್ತ್ ನೀಡುವ ಬದಲು ಮೇಲಿನ ಸೀಟ್ ನೀಡಿದ್ದರು. ರೈಲಿನಲ್ಲಿ ಸೀಟ್ ಬದಲಿಸಲು ಸಹ ಪ್ರಯಾಣಿಕರು ನಿರಾಕರಿಸಿದ ಹಿನ್ನೆಲೆಯಲ್ಲಿ ಪ್ಯಾರಾ ಅಥ್ಲೀಟ್ ರೈಲಿನ ನೆಲದ ಮೇಲೆಯೇ ಮಲಗಿ ಪ್ರಯಾಣಿಸಿದ್ದರು.
ಈ ಕುರಿತು ರೈಲ್ವೆ ಸಚಿವ ಸುರೇಶ್ ಪ್ರಭು ಅವರು ತನಿಖೆಗೆ ಆದೇಶಿಸಿದ್ದಾರೆ. ಆದರೆ ಈ ಕುರಿತು ಎಎನ್ಐಗೆ ಪ್ರತಿಕ್ರಿಯಿಸಿರುವ ಸುವರ್ಣ ರಾಜ್ ಅವರು, ನನಗೆ ಯಾವುದೇ ತನಿಖೆ ಬೇಕಾಗಿಲ್ಲ ಮತ್ತು ಇದು ಸಮಸ್ಯೆಗೆ ಪರಿಹಾರವೂ ಅಲ್ಲ. ನಾನು ಸಚಿವರನ್ನು ಭೇಟಿ ಮಾಡಬೇಕು ಮತ್ತು ವಿಕಲಚೇತನರು ಎದುರಿಸುತ್ತಿರುವ ಸಮಸ್ಯೆಗಳನ್ನು ಅವರ ಗಮನಕ್ಕೆ ತರಬೇಕು ಎಂದಿದ್ದಾರೆ. ಅಲ್ಲದೆ ನಮ್ಮ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಬೇಕು ಎಂದು ಒತ್ತಾಯಿಸಿದ್ದಾರೆ.
ಸೀಟ್ ಬದಲಾಯಿಸಿಕೊಡಿ ಎಂದು ನಾನು ಟಿಕೆಟ್ ಪರೀಕ್ಷಕರ ಬಳಿ ಕೇಳಿಕೊಂಡೆ. ಆದರೆ ಅವರು ಬೋಗಿಯಲ್ಲಿದ್ದ ಪ್ರಯಾಣಿಕರೊಂದಿಗೆ ಬದಲಾಯಿಸುವಂತೆ ಹೇಳಿದರು. ಆದರೆ ಯಾರೂ ನನಗೆ ಸೀಟ್ ಬಿಟ್ಟು ಕೊಡಲಿಲ್ಲ. ಹೀಗಾಗಿ ನಾನು ಮತ್ತು ನನ್ನ ಆರು ವರ್ಷದ ಮಗ ನೆಲದಲ್ಲೇ ಮಲಗಬೇಕಾಯಿತು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT