ಸಾಂದರ್ಭಿಕ ಚಿತ್ರ 
ದೇಶ

ತ್ರಿವಳಿ ತಲಾಖ್ ನೀಡಿದ ವ್ಯಕ್ತಿಗೆ 2 ಲಕ್ಷ ರು. ದಂಡ ವಿಧಿಸಿದ ಉ.ಪ್ರದೇಶ ಪಂಚಾಯತಿ

ದೇಶದಲ್ಲಿ ತ್ರಿವಳಿ ತಲಾಖ್ ನಿಷೇಧದ ಬಗ್ಗೆ ತೀವ್ರ ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲೇ ಉತ್ತರ ಪ್ರದೇಶದ ಪಂಚಾಯಿತಿಯೊಂದು....

ಲಖನೌ: ದೇಶದಲ್ಲಿ ತ್ರಿವಳಿ ತಲಾಖ್ ನಿಷೇಧದ ಬಗ್ಗೆ ತೀವ್ರ ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲೇ ಉತ್ತರ ಪ್ರದೇಶದ ಪಂಚಾಯಿತಿಯೊಂದು ಮೂರು ಬಾರಿ ತಲಾಖ್ ಹೇಳುವ ಮೂಲಕ ಪತ್ನಿಗೆ ವಿಚ್ಛೇದನ ನೀಡಿದ ಮುಸ್ಲಿಂ ವ್ಯಕ್ತಿ ಎರಡು ಲಕ್ಷ ರುಪಾಯಿ ದಂಡ ವಿಧಿಸಿದೆ. ಅಲ್ಲದೆ ಪತ್ನಿಗೆ 60 ಸಾವಿರ ರುಪಾಯಿ ಪರಿಹಾರ ನೀಡುವಂತೆ ಸೂಚಿಸಿದೆ.
ಉತ್ತರ ಪ್ರದೇಶದ ಸಂಭಾಲದ ರೈಸತಿ ಪ್ರದೇಶದಲ್ಲಿರುವ ಮದರ್ಸಾ ಖಲೀಲ್-ಉಲ್-ಉಲೂಮ್ ನ ತುರ್ಕ ಸಮುದಾಯದ ಪಂಚಾಯತಿ ನಿನ್ನೆ ಈ ತಿರ್ಪು ನೀಡಿದ್ದು, ಈ ವೇಳೆ ಗ್ರಾಮದ 52 ಸದಸ್ಯರು ಹಾಜರಿದ್ದರು.
ಇದೇ ವೇಳೆ ವರನಿಗೆ ನೀಡಿದ್ದ ವರದಕ್ಷಿಣೆಯನ್ನು ವಧುವಿನ ಕುಟುಂಬಕ್ಕೆ ಮರಳಿಸಲು ಸಹಾಯ ಮಾಡುವುದಾಗಿ ಪಂಚಾಯತಿ ಹೇಳಿದೆ.
45 ವರ್ಷದ ವ್ಯಕ್ತಿಯೊಬ್ಬರು 10 ದಿನಗಳ ಹಿಂದಷ್ಟೇ 22 ವರ್ಷ ಯುವತಿಯೊಂದಿಗೆ ಮದುವೆಯಾಗಿದ್ದರು. ಆದರೆ ಇಬ್ಬರು ಮಧ್ಯೆ ಹೊಂದಾಣಿಕೆಯಿಲ್ಲದ ಕಾರಣ ಪತಿ ಪತ್ನಿಗೆ ಮೂರು ಬಾರಿ ತಲಾಖ್ ಹೇಳುವ ಮೂಲಕ ವಿಚ್ಛೇದನ ನೀಡಿದ್ದರು. 
ಯುವತಿ ಕುಟುಂಬ ಈ ವಿಚಾರವನ್ನು ತುರ್ಕ ಪಂಚಾಯತಿಗೆ ತೆಗೆದುಕೊಂಡು ಹೋಗಿತ್ತು. ವಿಚಾರಣೆ ನಡೆಸಿದ ಪಂಚಾಯತಿ ಪತಿಯ ವಿರುದ್ಧ ಕಠಿಣ ಕ್ರಮ ತೆಗೆದುಕೊಂಡಿದ್ದು, 2 ಲಕ್ಷ ರುಪಾಯಿ ದಂಡ ವಿಧಿಸಿದೆ. ಅಲ್ಲದೆ ಈ ಕೂಡಲೇ ದಂಡದ ಹಣವನ್ನು ನೀಡುವಂತೆ ಆದೇಶಿಸಲಾಗಿದೆ ಎಂದು ತುರ್ಕ ಸಮೂದಾಯದ ಪಂಚಾಯತಿಯ ಸಂಯೋಜಕ ಶಾಹಿದ್ ಹುಸೇನ್ ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT