ಸಂಗ್ರಹ ಚಿತ್ರ 
ದೇಶ

ಹಂದ್ವಾರದಲ್ಲಿ ಸೇನಾ ಕಾರ್ಯಾಚರಣೆ; ಇಬ್ಬರು ಹಿಜ್ಬುಲ್ ಉಗ್ರರ ಬಂಧನ!

ಭಯೋತ್ಪಾದನೆ ಪೀಡಿತ ದಕ್ಷಿಣ ಕಾಶ್ಮೀರದಲ್ಲಿ ಭಾರತೀಯ ಸೇನೆ ನಡೆಸಿದ ದಿಢೀರ್ ಕಾರ್ಯಾಚರಣೆಯಲ್ಲಿ ಹಿಜ್ಬುಲ್ ಅಗ್ರ ಸಂಘಟನೆಯ ಇಬ್ಬರು ಉಗ್ರರನ್ನು ಬಂಧಿಸಲಾಗಿದೆ.

ಶ್ರೀನಗರ: ಭಯೋತ್ಪಾದನೆ ಪೀಡಿತ ದಕ್ಷಿಣ ಕಾಶ್ಮೀರದಲ್ಲಿ ಭಾರತೀಯ ಸೇನೆ ನಡೆಸಿದ ದಿಢೀರ್ ಕಾರ್ಯಾಚರಣೆಯಲ್ಲಿ ಹಿಜ್ಬುಲ್ ಅಗ್ರ ಸಂಘಟನೆಯ ಇಬ್ಬರು ಉಗ್ರರನ್ನು ಬಂಧಿಸಲಾಗಿದೆ.

ದಕ್ಷಿಣ ಕಾಶ್ಮೀರದ ಹಂದ್ವಾರದಲ್ಲಿ ಉಗ್ರರು ಅಡಗಿರುವ ಕುರಿತು ಖಚಿತ ಮಾಹಿತಿ ಪಡೆದ ಸೇನಾ ಪಡೆಗಳು ದಿಢೀರ್ ದಾಳಿ ಮಾಡಿದ್ದು, ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರಗಾಮಿಗಳನ್ನು ಜೀವಂತ ಸೆರೆ ಹಿಡಿಯಲಾಗಿದೆ. ದಾಳಿ ವೇಳೆ  ಉಗ್ರರು ಅಡಗಿದ್ದ ಪ್ರದೇಶದಲ್ಲಿ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳು ಕಂಡುಬಂದಿದ್ದು, ಪೊಲೀಸರು ಅವುಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ಹೇಳಲಾಗುತ್ತಿದೆ. ಪ್ರಸ್ತುತ ಉಗ್ರರನ್ನು ಅಜ್ಞಾತ ಸ್ಥಳಕ್ಕೆ ಕರೆದೊಯ್ಯಲಾಗಿದ್ದು, ವ್ಯಾಪಕ  ತನಿಖೆ ನಡೆಸಲಾಗುತ್ತಿದೆ.

ಕಳೆದ ಶನಿವಾರವಷ್ಟೇ ಗಡಿಯಲ್ಲಿ ಒಳ ನುಸುಳುವಿಕೆಯನ್ನು ತಡೆದಿದ್ದ ಭಾರತೀಯ ಯೋಧರು ಓವ್ರ ಉಗ್ರಗಾಮಿಯನ್ನು ಹೊಡೆದುರುಳಿಸಿದ್ದರು. ಅಲ್ಲದೆ ಹಲವು ಉಗ್ರರು ಒಳ ನುಸುಳಿರುವ ಕುರುತ ಶಂಕೆ ವ್ಯಕ್ತವಾದ ಹಿನ್ನಲೆಯಲ್ಲಿ  ವ್ಯಾಪಕ ಶೋಧಕಾರ್ಯ ಕೂಡ ನಡೆಸಲಾಗಿತ್ತು. ಇದೀಗ ಹಿಜ್ಬುಲ್ ಸಂಘಟನೆಯ ಉಗ್ರರು ಸೆರೆ ಸಿಕ್ಕಿರುವುದು ಈ ಭಾಗದಲ್ಲಿ ಇನ್ನೂ ಹಿಜ್ಬುಲ್ ಉಗ್ರ ಸಂಘಟನೆಯ ಕರಿಛಾಯೆ ಇದೆ ಎದು ಹೇಳಲಾಗುತ್ತಿದ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

SCROLL FOR NEXT