ಶಿವರಾಜ್ ಸಿಂಗ್ ಚೌಹ್ವಾಣ್ 
ದೇಶ

ಜೂ.14 ರಂದು ಮಂಡಸೌರ್ ಗೆ ಭೇಟಿ ನೀಡಲಿರುವ ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹ್ವಾಣ್

ರೈತರ ಪ್ರತಿಭಟನೆ, ಗೋಲಿಬಾರ್ ನಿಂದಾಗಿ ಗಲಭೆ ಉಂಟಾಗಿದ್ದ ಮಧ್ಯಪ್ರದೇಶದ ಮಂಡಸೌರ್ ಗೆ ಮಧ್ಯಪ್ರದೇಶದ ಸಿಎಂ ಶಿವರಾಜ್ ಸಿಂಗ್ ಚೌಹ್ವಾಣ್ ಜೂ.14 ರಂದು ಭೇಟಿ ನೀಡಲಿದ್ದಾರೆ.

ಭೋಪಾಲ್: ರೈತರ ಪ್ರತಿಭಟನೆ, ಗೋಲಿಬಾರ್ ನಿಂದಾಗಿ ಗಲಭೆ ಉಂಟಾಗಿದ್ದ ಮಧ್ಯಪ್ರದೇಶದ ಮಂಡಸೌರ್ ಗೆ ಮಧ್ಯಪ್ರದೇಶದ ಸಿಎಂ ಶಿವರಾಜ್ ಸಿಂಗ್ ಚೌಹ್ವಾಣ್ ಜೂ.14 ರಂದು ಭೇಟಿ ನೀಡಲಿದ್ದಾರೆ.  


ಸರ್ಕಾರಿ ಅಧಿಕಾರಿಗಳು ನೀಡಿರುವ ಮಾಹಿತಿಯ ಪ್ರಕಾರ ಮಂಡಸೌರ್ ಗೆ ಭೇಟಿ ನೀಡಲಿರುವ ಶಿವರಾಜ್ ಸಿಂಗ್ ರೈತ ಮುಖಂಡರನ್ನು ಭೇಟಿ ಮಾಡಿ ಚರ್ಚೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ. ಮಂಡಸೌರ್ ನಲ್ಲಿ ಉಂಟಾಗಿದ್ದ ಪ್ರಕ್ಷುಬ್ಧ ವಾತಾವರಣವನ್ನು ನಿಯಂತ್ರಣಕ್ಕೆ ತರಲು ಉಪವಾಸ ನಿರಶನ ಆರಂಭಿಸಿದ್ದ ಶಿವರಾಜ್ ಸಿಂಗ್ ಚೌಹ್ವಾಣ್ ಜೂ.11 ರಂದು ಉಪವಾಸವನ್ನು ಅಂತ್ಯಗೊಳಿಸಿದ್ದರು.

ರೈತರ ಸಾಲ ಮನ್ನ ಮಾಡಲು ಆಗ್ರಹಿಸಿ ಜೂ.1 ರಿಂದ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ವೇಳೆ ಮಂಡಸೌರ್ ನಲ್ಲಿ ಗೋಲಿಬಾರ್ ನಡೆದು ರೈತರು ಸಾವನ್ನಪ್ಪಿದ್ದರು. ಪರಿಣಾಮವಾಗಿ ರೈತರ ಪ್ರತಿಭಟನೆ ಗಲಭೆಗೆ ತಿರುಗಿತ್ತು. ಇದೀಗ ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಜೂ.14 ರಂದು ಮಂಡಸೌರ್ ಗೆ ತೆರಳಲಿರುವ ಸಿಎಂ ಚೌಹ್ವಾಣ್ ರೈತ ಮುಖಂಡರೊಂದಿಗೆ ಮಾತುಕತೆ ನಡೆಸಲಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

SCROLL FOR NEXT