ವಿಧಾನಸಭೆ ಮುಂದೆ ಪ್ರತಿಭಟನೆ ನಡೆಸುತ್ತಿರುವ ಡಿಎಂಕೆ ಶಾಸಕರು 
ದೇಶ

ತಮಿಳುನಾಡು ವಿಧಾನಸಭೆಯಲ್ಲಿ ಹೈಡ್ರಾಮಾ: ಡಿಎಂಕೆ ಶಾಸಕರನ್ನು ಸದನದಿಂದ ಹೊರಹಾಕಿದ ಸ್ಪೀಕರ್

ಎಐಎಡಿಎಂಕೆ ಶಾಸಕರ ಕುದುರೆ ವ್ಯಾಪಾರಕ್ಕೆ ಸಂಬಂಧಿಸಿದಂತೆ ಬುಧವಾರ ತಮಿಳುನಾಡು ವಿಧಾನಸಭೆಯಲ್ಲಿ ಭಾರಿ ಹೈಡ್ರಾಮಾ ನಡೆದಿದ್ದು,....

ಚೆನ್ನೈ: ಎಐಎಡಿಎಂಕೆ ಶಾಸಕರ ಕುದುರೆ ವ್ಯಾಪಾರಕ್ಕೆ ಸಂಬಂಧಿಸಿದಂತೆ ಬುಧವಾರ ತಮಿಳುನಾಡು ವಿಧಾನಸಭೆಯಲ್ಲಿ ಭಾರಿ ಹೈಡ್ರಾಮಾ ನಡೆದಿದ್ದು, ಪ್ರತಿಪಕ್ಷ ನಾಯಕ ಎಂ.ಕೆ.ಸ್ಟಾಲಿನ್ ಸೇರಿದಂತೆ ಡಿಎಂಕೆಯ ಎಲ್ಲಾ ಶಾಸಕರನ್ನು ಸಾಮೂಹಿಕವಾಗಿ ಸ್ಪೀಕರ್ ಸದನದಿಂದ ಹೊರ ಹಾಕಿದ್ದಾರೆ.
ಕಳೆದ ಫೆಬ್ರವರಿ 18ರಂದು ನಡೆದ ವಿಶ್ವಾಸಮತಕ್ಕಾಗಿ ಆಡಳಿತ ಪಕ್ಷದ ಶಾಸಕರ ಮತಕ್ಕಾಗಿ ಲಂಚ ಪಡೆದ ಕುಟುಕು ಕುಟುಕು ಕಾರ್ಯಾಚರಣೆ ಕುರಿತಂತೆ ಸದನದಲ್ಲಿ ಚರ್ಚೆಯಾಗಬೇಕು ಎಂದು ಪ್ರತಿಪಕ್ಷದ ನಾಯಕ ಸ್ಟಾಲಿನ್ ಅವರು ಒತ್ತಾಯಿಸಿದರು. ಆದರೆ ಡಿಎಂಕೆ ಕೋರಿಕೆಯನ್ನು ತಿರಸ್ಕರಿಸಿದ ಸ್ಪೀಕರ್ ಪಿ ಧನಪಾಲ್ ಅವರು ಇದು ನ್ಯಾಯಾಂಗ ಸಂಬಂಧಿಸಿರುವುದರಿಂದ ಸದನದಲ್ಲಿ ಚರ್ಚೆಗೆ ಅವಕಾಶವಿಲ್ಲ ಎಂದರು. ಈ ವೇಳೆ ಸ್ಟಾಲಿನ್ ಮತ್ತು ಸ್ವೀಕರ್ ನಡುವೆ ತೀವ್ರ ವಾಗ್ವಾದ ನಡೆಯಿತು ಎನ್ನಲಾಗಿದೆ.
ಎಐಎಡಿಎಂಕೆ ಸಚಿವರು, ಶಾಸಕರು ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಎಂದು ಆರೋಪಿಸಿದ ಡಿಎಂಕೆ ಸದಸ್ಯರು, ಸದನದಲ್ಲಿ ಮೊದಲು ಸ್ಟ್ರಿಂಗ್ ಆಪರೇಶನ್ ಕುರಿತ ಚರ್ಚೆಯಾಗಲಿ ಎಂದು ಒತ್ತಾಯಿಸಿದರು.
ಸದನದಲ್ಲಿ ಕೋಲಾಹಲ ಉಂಟಾದಾಗ ಸಭಾಪತಿ ಡಿಎಂಕೆ ಸದಸ್ಯರನ್ನು ಒಂದು ದಿನದ ಮಟ್ಟಿಗೆ ಅಮಾನತುಗೊಳಿಸಿದರು. ಸಭಾಪತಿ ತೀರ್ಮಾನದಿಂದ ಅಸಮಾಧಾನಗೊಂಡ ಡಿಎಂಕೆ ಸದಸ್ಯರು ಸ್ಟಾಲಿನ್ ನೇತೃತ್ವದಲ್ಲಿ ಸದನದ ಮುಂದೆ ಪ್ರತಿಭಟನೆ ನಡೆಸಿದರು.
ಪ್ರತಿಭಟನೆ ನಡೆಸುತ್ತಿದ್ದ ಡಿಎಂಕೆ ಸದಸ್ಯರನ್ನು ಸ್ಪೀಕರ್ ಮಾರ್ಷೆಲ್ ಗಳ ಮೂಲಕ ಸದನದಿಂದ ಹೊರ ಹಾಕಿದ್ದು, ಈಗ ವಿಧಾನಸಭೆಯ ಮುಂದೆ ಪ್ರತಿಭಟನೆ ನಡೆಸುತ್ತಿದ್ದಾರೆ. ಅಲ್ಲದೆ ಸ್ಟ್ರಿಂಗ್ ಆಪರೇಶನ್ ಘಟನೆಯನ್ನು ಸಿಬಿಐಗೆ ಒಪ್ಪಿಸುವವರಿಗೆ ಹೋರಾಟ ನಿಲ್ಲದು ಎಂದು ಡಿಎಂಕೆ ಮುಖಂಡರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

SCROLL FOR NEXT