ಸಾಂದರ್ಭಿಕ ಚಿತ್ರ 
ದೇಶ

ದೆವ್ವ ಬಿಡಿಸುವುದಾಗಿ ಹೇಳಿ ಯುವತಿಗೆ ಬಲವಂತವಾಗಿ ಎಮ್ಮೆ ಸಗಣಿ ತಿನ್ನಿಸಿದ ಮಾಂತ್ರಿಕ!

ದೆವ್ವ ಬಿಡಿಸುವುದಾಗಿ ಹೇಳಿದ ಮಾಂತ್ರಿಕನೊಬ್ಬ 17 ವರ್ಷದ ಯುವತಿಗೆ ಬಲವಂತವಾಗಿ ಎಮ್ಮೆ ಸಗಣಿ ತಿನ್ನಿಸಿರುವ ಘಟನೆ ಲಾತೂರ್...

ಲಾತೂರ್: ದೆವ್ವ ಬಿಡಿಸುವುದಾಗಿ ಹೇಳಿದ ಮಾಂತ್ರಿಕನೊಬ್ಬ 17 ವರ್ಷದ ಯುವತಿಗೆ ಬಲವಂತವಾಗಿ ಎಮ್ಮೆ ಸಗಣಿ ತಿನ್ನಿಸಿರುವ ಘಟನೆ ಲಾತೂರ್ ನಲ್ಲಿ ನಡೆದಿದೆ.
ಕಳೆದ ವಾರ ಮಹಾರಾಷ್ಟ್ರದ ದಂಗರವಾಡಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಗ್ರಾಮಸ್ಥರು ಪ್ರಕರಣ ದಾಖಲಿಸಿದ ನಂತರ ತಡವಾಗಿ ಪ್ರಕರಣ ಬೆಳಕಿಗೆ ಬಂದಿದೆ.
ಮನೆಯಲ್ಲಿದ್ದ ಗಂಡಸರ ಜೊತೆ ಯುವತಿ ಪ್ರತಿನಿತ್ಯ ಅನಾವಶ್ಯಕವಾಗಿ ಜಗಳವಾಡುತ್ತಿದ್ದಳು. ಇದು ದೆವ್ವದ ಪ್ರಭಾವ ಎಂದು ನಂಬಿದ ಕುಟುಂಬಸ್ಥರು ಯುವತಿಯನ್ನು ಬಲವಂತವಾಗಿ ಮಾಂತ್ರಿಕನ ಬಳಿ ಕರೆದೊಯ್ದಿದ್ದಾರೆ.
ಆದರೆ ಯುವತಿ ಆತನಿಂದ ಚಿಕಿತ್ಸೆ ಪಡೆಯಲು ನಿರಾಕರಿಸಿದಾಗ ಕೋಪಗೊಂಡ ಮಾಂತ್ರಿಕ ಆಕೆಯ ಕೈಕಾಲು ಕಟ್ಟುವಂತೆ ಸಂಬಂಧಿಕರಿಗೆ ಹೇಳಿದ್ದಾನೆ. ಅದರಂತೆ ಆಕೆಯ ಕುಟುಂಬಸ್ಥರು ಯುವತಿ ಕೈಕಾಲು ಕಟ್ಟಿ ನೆಲದ ಮೇಲೆ ಮಲಗಿಸಿದ್ದಾರೆ.
ನಂತರ ಮಾಂತ್ರಿಕ ಆಕೆಯ ಬಾಯಿಗೆ ಬಲವಂತವಾಗಿ ಎಮ್ಮೆ ಸಗಣಿ ಹಾಕಿ ನುಂಗುವಂತೆ ಮಾಡಿದ್ದಾನೆ. ಈ ಘಟನೆಯನ್ನು ಅಲ್ಲಿಯೇ ಇದ್ದ ವ್ಯಕ್ತಿಯೊಬ್ಬ ವಿಡಿಯೋ ಮಾಡಿ ಸಾಮಾಜಿಕ ಮಾಧ್ಯಮದಲ್ಲಿ ಹರಿಯ ಬಿಟ್ಟಿದ್ದಾನೆ. ಈ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ಹಲವಾರು ಮಂದಿ ಇದನ್ನು ಖಂಡಿಸಿದ್ದಾರೆ. 
ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಚಾಕೂರು ಪೊಲೀಸರು ಯುವತಿಯ ಐವರು ಸಂಬಂಧಿಕರನ್ನು ಬಂಧಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT