ಸಾಲದ ದೊರೆ ವಿಜಯ್ ಮಲ್ಯ 
ದೇಶ

ಶತಕೋಟಿ ಪೌಂಡ್ ಕನಸು ಕಾಣುತ್ತಿರಿ: ವ್ಯಂಗ್ಯವಾಡಿದ ವಿಜಯ್ ಮಲ್ಯ

ಭಾರತೀಯ ಬ್ಯಾಂಕ್ ಗಳಇಗೆ ರೂ.9000 ಕೋಟಿ ಪಂಗನಾಮ ಹಾಕಿ ಇಂಗ್ಲೆಂಡಿನಲ್ಲಿರುವ ಸಾಲದ ದೊರೆ ವಿಜಯ್ ಮಲ್ಯ ಅವರು, ತಮ್ಮ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ. ಕೆಲವರು ಶತಕೋಟಿ ಪೌಂಡ್ ಗಳ ಕನಸು ಕಾಣುತ್ತಿದ್ದಾರೆಂದು ಮಂಗಳವಾರ...

ಲಂಡನ್: ಭಾರತೀಯ ಬ್ಯಾಂಕ್ ಗಳಇಗೆ ರೂ.9000 ಕೋಟಿ ಪಂಗನಾಮ ಹಾಕಿ ಇಂಗ್ಲೆಂಡಿನಲ್ಲಿರುವ ಸಾಲದ ದೊರೆ ವಿಜಯ್ ಮಲ್ಯ ಅವರು, ತಮ್ಮ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ. ಕೆಲವರು ಶತಕೋಟಿ ಪೌಂಡ್ ಗಳ ಕನಸು ಕಾಣುತ್ತಿದ್ದಾರೆಂದು ಮಂಗಳವಾರ ವ್ಯಂಗ್ಯವಾಡಿದ್ದಾರೆ.
ಲಂಡನ್ ನಲ್ಲಿ ವಾಸ್ತವ ಹೂಡಿರುವ ಉದ್ಯಮಿ ವಿಜಯ್ ಮಲ್ಯ ವಿರುದ್ಧ ಭಾರತ ಸರ್ಕಾರ ದಾಖಲಿಸಿರುವ ಗಡಿಪಾರು ಪ್ರಕರಣ ಸಂಬಂಧ ಮಲ್ಯ ನ್ಯಾಯಾಲಯದಿಂದ ನಿನ್ನೆಯಷ್ಟೇ ಜಾಮೀನು ಪಡೆದುಕೊಂಡಿದ್ದಾರೆ. ವೆಸ್ಟ್ ಮಿನಿಸ್ಟರ್ ಮ್ಯಾಜಿಸ್ಟ್ರೇಟ್ಸ್ ಕೋರ್ಟ್ ಮಲ್ಯಗೆ ಡಿ.4ರವರೆಗೆ ಜಾಮೀನು ನೀಡಿದ್ದು, ಕೋರ್ಟ್ ಮುಂದಿನ ವಿಚಾರಣೆಯನ್ನು ಜು.16ಕ್ಕೆ ಮುಂದೂಡಿದೆ. 
ನ್ಯಾಯಾಲಯದ ವಿಚಾರಣೆಗೆ ಹಾಜರಾದ ಬಳಿಕ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿರುವ ಮಲ್ಯ, ನೀವು ಕೋಟಿಗಟ್ಟಲೆ ಹಣದ ಬಗ್ಗೆ ಕನಸು ಕಾಣುತ್ತಲೇ ಇರಿ ಎಂದು ಮಾಧ್ಯಮಗಳ ಕುರಿತು ಅಣಕವಾಡಿದ್ದಾರೆ. 
ನನ್ನ ವಿರುದ್ಧ ಮಾಡಲಾಗಿರುವ ಎಲ್ಲಾ ಆರೋಪಗಳನ್ನು ನಾನು ನಿರಾಕರಿಸಿದ್ದೇನೆ. ನಾನು ನ್ಯಾಯಾಲಯದ ವಿಚಾರಣೆಯಿಂದ ಜಾರಿಕೊಳ್ಳುತ್ತಿಲ್ಲ. ನನ್ನ ಪ್ರಕರಣ ಸಾಬೀತು ಪಡಿಸಲು ನನ್ನ ಬಳಿ ಸಾಕಷ್ಟು ಸಾಕ್ಷ್ಯಾಧಾರಗಳಿವೆ. ಕೋಟಿಗಟ್ಟಲೆ ಹಣದ ಕುರಿತು ನೀವು ಕನಸು ಕಾಣುತ್ತಲೇ ಇರಿ. ಕಿರಿಕಿರಿಯಾಗುವ ಪ್ರಶ್ನೆಗಳನ್ನು ಕೇಳಬೇಡಿ ಎಂದು ಸಿಡಿಮಿಡಿಯಿಂದ ಉತ್ತರ ನೀಡಿದ್ದಾರೆ. 
ಇದೇ ವೇಳೆ ಓವಲ್ ನಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿ ಪಂದ್ಯದ ವೇಳೆ ಕ್ರಿಕೆಟ್ ಅಭಿಮಾನಿಗಳು ತಮ್ಮನ್ನು ಕಳ್ಳ...ಕಳ್ಳ...ಎಂದು ಕೂಗಿದ ಬಗ್ಗೆ ಖಾರವಾಗಿ ಪ್ರತಿಕ್ರಿಯೆ ನೀಡಿರುವ ಅವರು, ನಾನು ಭಾರತದ ತಂಡವನ್ನು ಬೆಂಬಲಿಸಲು ಮೈದಾನಕ್ಕೆ ಹೋಗಿದ್ದೆ. ಹಲವರು ನನಗೆ ಶುಭಾಶಯಗಳನ್ನು ಕೋರಿದರು. ಆದನ್ನು ಬಿಟ್ಟು, ಇಬ್ಬರು ಕುಡುಕರು ನನ್ನ ವಿರುದ್ಧ ಘೋಷಣೆ ಕೂಗಿದ್ದನ್ನೇ ದೊಡ್ಡದಾಗಿ ತೋರಿಸಲಾಗಿದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT