ಕೇಂದ್ರ ಸಚಿವ ವೆಂಕಯ್ಯ ನಾಯ್ಡು 
ದೇಶ

ರಾಷ್ಟ್ರಪತಿ ಚುನಾವಣೆ: ಜನಾದೇಶ ನಮ್ಮೊಂದಿಗಿದೆ- ಕೇಂದ್ರ ಸಚಿವ ವೆಂಕಯ್ಯ ನಾಯ್ಡು

ಜನಾದೇಶ ಸರ್ಕಾರದ ಪರವಾಗಿದ್ದು, ರಾಷ್ಟ್ರಪತಿ ಚುನಾವಣೆ ಕೂಡ ಜನಾದೇಶದ ಮೂಲಕವೇ ನಡೆಯಲಿದೆ. ಇದನ್ನು ಅರಿತುಕೊಂಡು ಸರ್ಕಾರದೊಂದಿಗೆ ಎಲ್ಲರೂ ಸಹಕಾರ ನೀಡಬೇಕೆಂದು ಕೇಂದ್ರ ಸಚಿವ ವೆಂಕಯ್ಯ ನಾಯ್ಡು ಅವರು ಬುಧವಾರ ಹೇಳಿದ್ದಾರೆ...

ನವದೆಹಲಿ: ಜನಾದೇಶ ಸರ್ಕಾರದ ಪರವಾಗಿದ್ದು, ರಾಷ್ಟ್ರಪತಿ ಚುನಾವಣೆ ಕೂಡ ಜನಾದೇಶದ ಮೂಲಕವೇ ನಡೆಯಲಿದೆ. ಇದನ್ನು ಅರಿತುಕೊಂಡು ಸರ್ಕಾರದೊಂದಿಗೆ ಎಲ್ಲರೂ ಸಹಕಾರ ನೀಡಬೇಕೆಂದು ಕೇಂದ್ರ ಸಚಿವ ವೆಂಕಯ್ಯ ನಾಯ್ಡು ಅವರು ಬುಧವಾರ ಹೇಳಿದ್ದಾರೆ. 
ರಾಷ್ಟ್ರಪತಿ ಚುನಾವಣೆ ಕುರಿತಂತೆ ಕೆಲ ದಿನಗಳ ಹಿಂದಷ್ಟೇ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಹಿರಿಯ ಸಚಿವರಾದ ರಾಜನಾಥ ಸಿಂಗ್ ಹಾಗೂ ಅರುಣ್ ಜೇಟ್ಲಿಯವರೊಂದಿಗೆ ಸಭೆ ನಡೆಸಿ ಮಾತುಕತೆ ನಡೆಸಿದ್ದತು. ರಾಷ್ಟ್ರಪತಿ ಚುನಾವಣೆಗೂ ಮುನ್ನ ಬಿಜೆಪಿ 3 ಸದಸ್ಯರ ಚುನಾವಣಾ ಸಮಿತಿ ರಚಿಸಲು ತೀರ್ಮಾನಿಸಿದ್ದು, ಅಮಿತ್ ಶಾ ನೇತೃತ್ವದ ಈ ಸಮತಿಯಲ್ಲಿ ನಾಯ್ಡು, ರಾಜನಾಥ ಸಿಂಗ್ ಹಾಗೂ ಅರುಣ್ ಜೇಟ್ಲಿಯವರು ಇದ್ದಾರೆಂದು ಹೇಳಲಾಗುತ್ತಿದೆ. 
ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಿಸಿದಂತೆ ಎನ್'ಡಿಎ ವಿರೋಧ ಮಿತ್ರಪಕ್ಷಗಳ ಜತೆಗೆ ಸಮಿತಿಯ ಸದಸ್ಯರು ಸಮಾಲೋಚನೆ ನಡೆಸಲಿದ್ದು, ವಾರದೊಳಗೆ ಈ ಸಮಾಲೋಚನೆ ನಡೆಸಿದ ಬಳಿಕ ಬಿಜೆಪಿ ತನ್ನ ರಾಷ್ಟ್ರಪತಿ ಅಭ್ಯರ್ಥಿಯನ್ನು ಘೋಷಣೆ ಮಾಡಲಿದೆ. 
ಆಯ್ಕೆ ಪ್ರಕ್ರಿಯೆಗಳನ್ನು ಈಗಾಗಲೇ ನಾವು ಆರಂಭಿಸಿದ್ದೇವೆ. ಅಮಿತ್ ಶಾ ಹಾಗೂ ಜೇಟ್ಲಿಯವರೊಂದಿಗೆ ಮಾತುಕತೆ ನಡೆಸಲಾಗಿದೆ. ಪ್ರಸ್ತುತ ರಾಜನಾಥ ಸಿಂಗ್ ಅವರು ಮಿಜೋರಾಂನಲ್ಲಿದ್ದು, ಅವರೊಂದಿಗೂ ಸಮಾಲೋಚನೆ ನಡೆಸಿದ್ದೇವೆ. ಶೀಘ್ರದಲ್ಲಿಯೇ ಎಲ್ಲಾ ನಾಯಕರೊಂದಿಗೂ ಮಾತುಕತೆ ನಡೆಸಿ, ಇತರೆ ರಾಜಕೀಯ ಪಕ್ಷಗಳೊಂದಿಗೂ ಮಾತುಕತೆ ನಡೆಸುತ್ತೇವೆ. ಎಲ್ಲಾ ಸಹಕಾರ, ಬೆಂಬಲವನ್ನು ಪಡೆಯುತ್ತೇವೆಂದು ನಾಯ್ಡು ಅವರು ತಿಳಿಸಿದ್ದಾರೆ. 
ನಾವು ಆಡಳಿತಾರೂಢ ಪಕ್ಷವಾಗಿದ್ದು, ನಮಗೆ ನಮ್ಮದೇ ಆದ ಜವಾಬ್ದಾರಿಗಳಿರುತ್ತವೆ. ಹೀಗಾಗಿ ಒಮ್ಮತದ ಮೂಲಕ ಆಯ್ಕೆ ಮಾಡಲು ಎಲ್ಲಾ ರೀತಿಯ ಪ್ರಯತ್ನಗಳ್ನ ಮಾಡುತ್ತಿದ್ದೇವೆ. ಎಲ್ಲರ ಸಹಕಾರಕ್ಕಾಗಿ ಯತ್ನ ನಡೆಸುತ್ತಿದ್ದೇವೆಂದು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Eiffel Tower ಇನ್ನು ನೆನಪು ಮಾತ್ರ?: ಪ್ರಸಿದ್ಧ ಸ್ಮಾರಕ ಕೆಡವುತ್ತಿರುವ ಬಗ್ಗೆ ಟ್ಯಾಪಿಯೋಕಾ ಟೈಮ್ಸ್ ಹೇಳಿದ್ದೇನು?

SCROLL FOR NEXT