ಕುಮಾರ್ ವಿಶ್ವಾಸ್ 
ದೇಶ

ವಸುಂಧರಾ ರಾಜೆ ಅವರನ್ನೇಕೆ ಟೀಕಿಸುವುದಿಲ್ಲ?: ಕುಮಾರ್ ವಿಶ್ವಾಸ್ ಗೆ ಆಪ್ ನಾಯಕನ ಪ್ರಶ್ನೆ

ಆಮ್ ಆದ್ಮಿ ಪಕ್ಷದಲ್ಲಿನ ಭಿನ್ನಾಭಿಪ್ರಾಯಗಳು ಮುಂದುವರೆದಿದ್ದು, ರಾಜಸ್ಥಾನದ ಉಸ್ತುವಾರಿಯಾಗಿರುವ ಕುಮಾರ್ ವಿಶ್ವಾಸ್ ವಿರುದ್ಧ ಆಮ್ ಆದ್ಮಿ ಪಕ್ಷದ ನಾಯಕ ದಿಲೀಪ್ ಪಾಂಡೆ ವಾಗ್ದಾಳಿ ನಡೆಸಿದ್ದಾರೆ.

ನವದೆಹಲಿ: ಆಮ್ ಆದ್ಮಿ ಪಕ್ಷದಲ್ಲಿನ ಭಿನ್ನಾಭಿಪ್ರಾಯಗಳು ಮುಂದುವರೆದಿದ್ದು, ರಾಜಸ್ಥಾನದ ಉಸ್ತುವಾರಿಯಾಗಿರುವ ಕುಮಾರ್ ವಿಶ್ವಾಸ್ ವಿರುದ್ಧ ಆಮ್ ಆದ್ಮಿ ಪಕ್ಷದ ನಾಯಕ ದಿಲೀಪ್ ಪಾಂಡೆ ವಾಗ್ದಾಳಿ ನಡೆಸಿದ್ದಾರೆ. 
ರಾಜಸ್ಥಾನದ ಉಸ್ತುವಾರಿಯಾಗಿರುವ ಕುಮಾರ್ ವಿಶ್ವಾಸ್ ಕಾಂಗ್ರೆಸ್ ಪಕ್ಷದ ಲೋಪಗಳ ಬಗ್ಗೆ ಮಾತ್ರ ಮಾತನಾಡುತ್ತಾರೆ ಆದರೆ ರಾಜಸ್ಥಾನದ ಸಿಎಂ ವಸುಂಧರಾ ರಾಜೆ ಅವರನ್ನು ಪ್ರಶ್ನಿಸುವುದಿಲ್ಲ ಏಕೆ ಎಂದು ಕೇಳಿದ್ದಾರೆ. ನೀವು ಕಾಂಗ್ರೆಸ್ ವಿರುದ್ಧ ಮಾತನಾಡುತ್ತೀರಿ, ಆದರೆ ವಸುಂಧರಾ ರಾಜೆ ವಿರುದ್ಧ ಮಾತ್ರ ಮಾತನಾಡುವುದಿಲ್ಲ ಏಕೆ ಎಂದು ಟ್ವಿಟರ್ ನಲ್ಲಿ ದಿಲೀಪ್ ಪಾಂಡೆ ಕೇಳಿದ್ದಾರೆ. 
ಸೇನಾ ಮುಖ್ಯಸ್ಥರ ವಿರುದ್ಧ ಕಾಂಗ್ರೆಸ್ ಮುಖಂಡ ಸಂದೀಪ್ ದೀಕ್ಷಿತ್ ಅವರ ಹೇಳಿಕೆಯನ್ನು ಖಂಡಿಸಿದ್ದ ಕುಮಾರ್ ವಿಶ್ವಾಸ್ ಕಾಂಗ್ರೆಸ್ ನಾಯಕನ ವಿರುದ್ಧ ಮಾತನಾಡಿದ್ದರು. ನಾನು ರಾಜಸ್ಥಾನದ ಬಿಜೆಪಿ ಸರ್ಕಾರವನ್ನು ಟೀಕಿಸುತ್ತೇನೆ ಆದರೆ ವಸುಂಧರಾ ರಾಜೆ ಅವರ ವೈಯಕ್ತಿಕ ಜೀವನದ ಬಗ್ಗೆ ಮಾತನಾಡುವುದಿಲ್ಲ ಎಂದು ಕುಮಾರ್ ವಿಶ್ವಾಸ್ ಸಂದರ್ಶನವೊಂದರಲ್ಲಿ ಹೇಳಿದ್ದರು. ಸಂದರ್ಶನ ಪ್ರಸಾರವಾದ ಬೆನ್ನಲ್ಲೇ ಪಾಂಡೆ ಟ್ವೀಟ್ ನಲ್ಲಿ ಕುಮಾರ್ ವಿಶ್ವಾಸ್ ಅವರನ್ನು ಪ್ರಶ್ನಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT