ಗೇಟ್ ವೇ ಆಫ್ ಇಂಡಿಯಾ 
ದೇಶ

ಗೇಟ್ ವೇ ಆಫ್ ಇಂಡಿಯಾಗೆ ಭಾರತ್ ದ್ವಾರ್ ಎಂದು ಮರುನಾಮಕರಣ ಮಾಡಿ: ಬಿಜೆಪಿ ಶಾಸಕ

ಗೇಟ್ ವೇ ಆಫ್ ಇಂಡಿಯಾ ಹೆಸರು ಗುಲಾಮಗಿರಿಯ ಸಂಕೇತ ಎಂದು ಬಿಜೆಪಿ ಶಾಸಕ ರಾಜ್ ಪುರೋಹಿತ್ ಅಭಿಪ್ರಾಯಪಟ್ಟಿದ್ದು, ಗೇಟ್ ವೇ ಆಫ್ ಇಂಡಿಯಾಗೆ ಭಾರತ್ ದ್ವಾರ್ ಎಂದು ಮರುನಾಮಕರಣ ಮಾಡಬೇಕು...

ಮುಂಬೈ: ಗೇಟ್ ವೇ ಆಫ್ ಇಂಡಿಯಾ ಹೆಸರು ಗುಲಾಮಗಿರಿಯ ಸಂಕೇತ ಎಂದು ಬಿಜೆಪಿ ಶಾಸಕ ರಾಜ್ ಪುರೋಹಿತ್ ಅಭಿಪ್ರಾಯಪಟ್ಟಿದ್ದು, ಗೇಟ್ ವೇ ಆಫ್ ಇಂಡಿಯಾಗೆ ಭಾರತ್ ದ್ವಾರ್ ಎಂದು ಮರುನಾಮಕರಣ ಮಾಡಬೇಕು ಎಂದು ಆಗ್ರಹಿಸಿದ್ದಾರೆ. 
ಗೇಟ್ ವೇ ಆಫ್ ಇಂಡಿಯಾ ಸ್ಮಾರಕ ಬ್ರಿಟೀಷ್ ಆಡಳಿತದ ಅವಧಿಯ ಗುಲಾಮಗಿರಿಯ ಸಂಕೇತವಾಗಿದೆ. ಅದನ್ನು ಭಾರತ್ ದ್ವಾರ್ ಎಂದು ಪುನಃ ನಾಮಕರಣ ಮಾಡುವ ಮೂಲಕ ಸ್ವಾತಂತ್ರ್ಯ ಹೋರಾಟದ ಹುತಾತ್ಮರಿಗೆ ಗೌರವ ಸಲ್ಲಿಸಬೇಕೆಂದು ರಾಜ್ ಪುರೋಹಿತ್ ಅಭಿಪ್ರಾಯಪಟ್ಟಿದ್ದಾರೆ. 
ಈ ವಿಷಯವನ್ನು ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರೊಂದಿಗೆ ಚರ್ಚಿಸಿದ್ದು, ಅವರು ಬೇಡಿಕೆಯನ್ನು ಪರಿಶೀಲಿಸುವುದಾಗಿ ಭರವಸೆ ನೀಡಿದ್ದಾರೆ. ನಾವು ಬಾಂಬೆಯನ್ನು ಮುಂಬೈ ಎಂದು ಮರುನಾಮಕರಣ ಮಾಡಿದ್ದೇವೆ. ಮಲ್ಬಾರ್ ಹಿಲ್ ನ್ನು ವಾಲ್ಕೇಶ್ವರ್ ಹಾಗೂ ವಿಕ್ಟೋರಿಯಾ ಟರ್ಮಿನಸ್ ನ್ನು ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್ ಎಂದು ಮರುನಾಮಕರಣ ಮಾಡಿದ್ದೇವೆ ಹಾಗಾದರೆ ಗೇಟ್ ವೇ ಆಫ್ ಇಂಡಿಯಾವನ್ನು ಭಾರತ್ ದ್ವಾರ್ ಎಂದು ಏಕೆ ಮರುನಾಮಕರಣ ಮಾಡಬಾರದು ಎಂದು ಬಿಜೆಪಿ ಶಾಸಕ ರಾಜ್ ಪುರೋಹಿತ್ ಪ್ರಶ್ನಿಸಿದ್ದಾರೆ. 
1911 ರಲ್ಲಿ ಕಿಂಗ್ ಜಾರ್ಜ್ V ಹಾಗೂ ಕ್ವೀನ್ ಮೇರಿ ಮುಂಬೈ ಗೆ ಆಗಮಿಸಿದ್ದರ ಸ್ಮರಣಾರ್ಥ ಗೇಟ್ ವೇ ಆಫ್ ಇಂಡಿಯಾವನ್ನು 1924 ರಲ್ಲಿ  ನಿರ್ಮಿಸಲಾಗಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT