ಸಾಧ್ವಿ ಸರಸ್ವತಿ 
ದೇಶ

ಪ್ರತಿಷ್ಠೆಗಾಗಿ ಬೀಫ್ ತಿನ್ನುವವರನ್ನು ನೇಣಿಗೆ ಹಾಕಿ: ಸಾಧ್ವಿ ಸರಸ್ವತಿ

ಗೋಹತ್ಯೆ ನಿಷೇಧ ಮತ್ತು ಗೋಮಾಂಸ ಸೇವನೆ ಬಗ್ಗೆ ಪರ-ವಿರೋಧ ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲೇ, ಹಿಂದೂಪರ ಸಂಘಟನೆಯ....

ಪಣಜಿ: ಗೋಹತ್ಯೆ ನಿಷೇಧ ಮತ್ತು ಗೋಮಾಂಸ ಸೇವನೆ ಬಗ್ಗೆ ಪರ-ವಿರೋಧ ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲೇ, ಹಿಂದೂಪರ ಸಂಘಟನೆಯ ಸಾಧ್ವಿ ಸರಸ್ವತಿ ಅವರು ಪ್ರತಿಷ್ಠೆಗಾಗಿ ಭೀಫ್ ತಿನ್ನುವವರನ್ನು ನೇಣಿಗೆ ಹಾಕಬೇಕು ಎಂದು ಗುರುವಾರ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಪ್ರತಿಷ್ಠೆಗಾಗಿ ಸ್ವತಃ ತಮ್ಮ ತಾಯಿ(ಗೋಮಾತೆ)ಯ ಮಾಂಸವನ್ನು ತಿನ್ನುವವರನ್ನು ಕೇಂದ್ರ ಸರ್ಕಾರ ನೇಣಿಗೆ ಹಾಕಬೇಕು ಎಂದು ತಾವು ಒತ್ತಾಯಿಸುವುದಾಗಿ ಮಧ್ಯಪ್ರದೇಶದ ಸನಾತನ ಧರ್ಮ ಪ್ರಚಾರ ಸೇವಾ ಸಮಿತಿಯ ಅಧ್ಯಕ್ಷೆ ಸಾಧ್ವಿ ಸರಸ್ವತಿ ಅವರು ಹೇಳಿದ್ದಾರೆ.
ಗೋಮಾಂಸ ತಿನ್ನುವವರನ್ನು ಸಾರ್ವಜನಿಕವಾಗಿ ನೇಣಿಗೆ ಹಾಕಬೇಕು. ಹಾಗ ಮಾತ್ರ ಗೋಮಾತೆಯ ರಕ್ಷಣೆ ನಮ್ಮ ಕರ್ತವ್ಯ ಎಂಬುದು ಅವರಿಗೆ ಗೊತ್ತಾಗುತ್ತದೆ ಎಂದು ಸಾಧ್ವಿ ಹೇಳಿದ್ದಾರೆ.
ಸಾಧ್ವಿ ಸರಸ್ವತಿ ಅವರ ಈ ಹೇಳಿಕೆಗೆ ಕಾಂಗ್ರೆಸ್ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಇಂತಹ ಹೇಳಿಕೆಗಳು ಕೋಮು ಸಂಘರ್ಷಕ್ಕೆ ಕಾರಣವಾಗುತ್ತವೆ ಎಂದು ಹೇಳಿದೆ. ಅಲ್ಲದೆ ಈ ಸಂಬಂಧ ಸಾಧ್ವಿ ಸರಸ್ವತಿ ವಿರುದ್ಧ ಗೋವಾ ಸರ್ಕಾರ ಎಫ್ಐಆರ್ ದಾಖಲಿಸಬೇಕು ಎಂದು ಒತ್ತಾಯಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT