ಚೆನ್ನೈ: ತಮಿಳುನಾಡು ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ ಅವರ ನಿಧನದ ನಂತರ ಆಡಳಿತರೂಢ ಎಐಎಡಿಎಂಕೆ ಪಕ್ಷದಲ್ಲಿ ಮಾಜಿ ಮುಖ್ಯಮಂತ್ರಿ ಒ ಪನ್ನೀರ್ ಸೆಲ್ವಂ ಹಾಗೂ ಹಾಲಿ ಮುಖ್ಯಮಂತ್ರಿ ಇ ಪಳನಿಸ್ವಾಮಿ ಬಣದ ನಡುವೆ ಅಧಿಕಾರಕ್ಕಾಗಿ ಕಿತ್ತಾಟ ನಡೆಯುತ್ತಿರುವ ಸಂದರ್ಭದಲ್ಲೇ ಪಕ್ಷದ ಶಾಸಕರೊಬ್ಬರು ಮಾಜಿ ಪ್ರಧಾನ ಕಾರ್ಯದರ್ಶಿ ಜಯಲಲಿತಾ ಅವರನ್ನು ವಿಷ್ಣುವಿಗೆ ಹೊಲಿಸಿದ್ದಾರೆ.
ದಿ.ಜಯಲಲಿತಾ ಅವರು ವಿಷ್ಣುವಿನ 11ನೇ ಅವತಾರ ಎಂದು ಎಐಎಡಿಎಂಕೆ ಶಾಸಕ ಮರಿಯಪ್ಪನ್ ಕೆನ್ನೆಡಿ ಅವರು ಹೇಳಿದ್ದಾರೆ ಎಂದು ಟೈಮ್ಸ್ ನೌ ವರದಿ ಮಾಡಿದೆ.
ಇಂದು ತಮಿಳುನಾಡು ವಿಧಾನಸಭೆಯಲ್ಲಿ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಮರಿಯಪ್ಪನ್ ಅವರು, ಜಯಲಲಿತಾ ಅವರ ಸ್ಥಾನವನ್ನು ಜೈಲು ಪಾಲಾಗಿರುವ ಅವರ ಆಪ್ತೆ ವಿ.ಕೆ.ಶಶಿಕಲಾ ಅಲಂಕರಿಸಿದ್ದು, ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಶಶಿಕಲಾ ಸಂಬಂಧಿ ಟಿಟಿವಿ ದಿನಕರನ್ ಅವರಿಗೆ ದಾರಿ ತೋರಿಸುತ್ತಿದ್ದಾರೆ ಎಂದು ಹೇಳಿದ್ದಾರೆ.
ಮರಿಯಪ್ಪನ್ ಹೇಳಿಕೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ ಪ್ರತಿಪಕ್ಷ ಡಿಎಂಕೆ ನಾಯಕರು, ಎಐಎಡಿಎಂಕೆ ಶಾಸಕನ ಹೇಳಿಕೆಯನ್ನು ಕಡತಗಳಿಂದ ತೆಗೆದು ಹಾಕುವಂತೆ ಸ್ಪೀಕರ್ ಪಿ ಧನಪಾಲ್ ಅವರನ್ನು ಒತ್ತಾಯಿಸಿದರು.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos