ಇ ಶ್ರೀಧರನ್ 
ದೇಶ

ಮೋದಿ ಜತೆ ವೇದಿಕೆ ಹಂಚಿಕೊಳ್ಳಲು ಮೆಟ್ರೋ ಮ್ಯಾನ್ ಶ್ರೀಧರನ್ ಗೆ ಪ್ರಧಾನಿ ಕಚೇರಿಗೆ ಒಪ್ಪಿಗೆ

ಮೆಟ್ರೋ ಮ್ಯಾನ್ ಎಂದೇ ಖ್ಯಾತಿ ಪಡೆದ ಇ ಶ್ರೀಧರನ್ ಅವರಿಗೆ ಕೊಚ್ಚಿ ಮೋಟ್ರೋ ಉದ್ಘಾಟನಾ ಸಮಾರಂಭದ ವೇಳೆ ಪ್ರಧಾನಿ ನರೇಂದ್ರ...

ಕೊಚ್ಚಿ: ಮೆಟ್ರೋ ಮ್ಯಾನ್ ಎಂದೇ ಖ್ಯಾತಿ ಪಡೆದ ಇ ಶ್ರೀಧರನ್ ಅವರಿಗೆ ಕೊಚ್ಚಿ ಮೋಟ್ರೋ ಉದ್ಘಾಟನಾ ಸಮಾರಂಭದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ವೇದಿಕೆ ಹಂಚಿಕೊಳ್ಳಲು ಗುರುವಾರ ಪ್ರಧಾನಮಂತ್ರಿಗಳ ಕಾರ್ಯಾಲಯ ಒಪ್ಪಿಗೆ ನೀಡಿದೆ.
ಈ ಮುಂಚೆ ಭದ್ರತೆ ದೃಷ್ಟಿಯಿಂದ ಗಣ್ಯರ ಪಟ್ಟಿಯಿಂದ ಶ್ರೀಧರನ್ ಅವರ ಹೆಸರನ್ನು ಕೈಬಿಡಲಾಗಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿದ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ನಿನ್ನೆ ಪ್ರಧಾನಿ ಕಚೇರಿಗೆ ಪತ್ರ ಬರೆದು ಇ ಶ್ರೀಧರನ್ ಅವರಿಗೆ ವೇದಿಕೆ ಹಂಚಿಕೊಳ್ಳಲು ಅವಕಾಶ ನೀಡಬೇಕು ಎಂದು ಮನವಿ ಮಾಡಿದ್ದರು.
ಕೇರಳ ಸರ್ಕಾರದ ಮನವಿ ಮೇರೆಗೆ ಪ್ರಧಾನಿ ಕಚೇರಿ ಕೊಚ್ಚಿ ಮೆಟ್ರೋ ಉದ್ಘಾಟನಾ ಸಮಾರಂಭದಲ್ಲಿ ಇ ಶ್ರೀಧರನ್ ಹಾಗೂ ಪ್ರತಿಪಕ್ಷ ನಾಯಕರ ಉಪಸ್ಥಿತಿಗೆ ಒಪ್ಪಿಗೆ ನೀಡಿದೆ ಎಂದು ಇಂದು ಕೇರಳ ಸಿಎಂ ಟ್ವೀಟ್ ಮಾಡಿದ್ದಾರೆ.
ಇ.ಶ್ರೀಧರನ್ ಅವರು ಕೊಚ್ಚಿ ಮೆಟ್ರೋ ಯೋಜನೆಯ ಪ್ರಧಾನ ಸಲಹೆಗಾರರಾಗಿದ್ದು, ಮೆಟ್ರೋ ಉದ್ಘಾಟನಾ ಸಮಾರಂಭದ ಗಣ್ಯರ ಪಟ್ಟಿಯಲ್ಲಿ ಶ್ರೀಧರನ್ ಅವರ ಹೆಸರು ಕಣ್ಮರೆಯಾಗಿರುವುದಕ್ಕೆ ಸಾಕಷ್ಟು ಟೀಕೆಗಳು ವ್ಯಕ್ತವಾಗುತ್ತಿವೆ. 
ಈ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿದ್ದ ಶ್ರೀಧರನ್ ಅವರು, ವಿಚಾರವನ್ನು ವಿವಾದ ಮಾಡಬೇಡಿ. ಪ್ರಧಾನಿ ಮೋದಿಯವರ ಭದ್ರತೆಯ ಪ್ರಮುಖವಾದದ್ದು. ಭದ್ರತಾ ಸಂಸ್ಥೆಗಳ ಅಧಿಕಾರಿಗಳು ನೀಡುವ ಸಲಹೆ, ಸೂಚನೆಗಳನ್ನು ಕೇಳಬೇಕು. ಪಟ್ಟಿಯಲ್ಲಿ ನನ್ನ ಹೆಸರಿಲ್ಲದಿರುವುಕ್ಕೆ ನನಗಾವುದೇ ಬೇಸರವಿಲ್ಲ ಎಂದು ಹೇಳಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT