ಚೀನಾದಲ್ಲಿರುವ ಭಾರತೀಯ ರಾಯಭಾರಿ ವಿಜಯ್ ಗೋಖಲೆ 
ದೇಶ

ಶಾಂಘೈ ಸಹಕಾರ ಒಕ್ಕೂಟ ಸಾರ್ವಭೌಮತೆಯನ್ನು ನಿರ್ಲಕ್ಷಿಸಬಾರದು: ಭಾರತದ ರಾಯಭಾರಿ

ಶಾಂಘೈ ಸಹಕಾರ ಒಕ್ಕೂಟ ಸದಸ್ಯ ರಾಷ್ಟ್ರಗಳ ಸಾರ್ವಭೌಮತೆಯನ್ನು ನಿರ್ಲಕ್ಷಿಸಬಾರದು ಎಂದು ಚೀನಾದಲ್ಲಿರುವ ಭಾರತದ ರಾಯಭಾರಿ ವಿಜಯ್ ಗೋಖಲೆ ಹೇಳಿದ್ದಾರೆ.

ನವದೆಹಲಿ: ಶಾಂಘೈ ಸಹಕಾರ ಒಕ್ಕೂಟ ಸದಸ್ಯ ರಾಷ್ಟ್ರಗಳ ಸಾರ್ವಭೌಮತೆಯನ್ನು ನಿರ್ಲಕ್ಷಿಸಬಾರದು ಎಂದು ಚೀನಾದಲ್ಲಿರುವ ಭಾರತದ ರಾಯಭಾರಿ ವಿಜಯ್ ಗೋಖಲೆ ಹೇಳಿದ್ದಾರೆ. 
ವ್ಯಾಪಾರ ಮತ್ತು ಸಂಪರ್ಕ ವಲಯದಲ್ಲಿ ಸಹಕಾರವನ್ನು ವೃದ್ಧಿಸುವುದರ ಜೊತೆಗೆ ಚೀನಾ ಎಸ್ ಸಿಒ ಸದಸ್ಯ ರಾಷ್ಟ್ರಗಳ ಸಾರ್ವಭೌಮತೆಯನ್ನೂ ಗೌರವಿಸಬೇಕಾಗುತ್ತದೆ ಎಂದು ವಿಜಯ್ ಗೋಖಲೆ ತಿಳಿಸಿದ್ದಾರೆ. ಬೀಜಿಂಗ್ ನಲ್ಲಿ ಶಾಂಘೈ ಸಹಕಾರ ಒಕ್ಕೂಟ ಕೇಂದ್ರ ಕಚೇರಿಯಲ್ಲಿ ಭಾರತ ಹಾಗೂ ಪಾಕಿಸ್ತಾನ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿರುವ ಭಾರತೀಯ ರಾಯಭಾರಿ ವಿಜಯ್ ಗೋಖಲೆ, ಸ್ಪಷ್ಟವಾಗಿ ಪಾಕ್ ಆಕ್ರಮಿತ ಕಾಶ್ಮೀರದ ಮೇಲೆ ಹಾದುಹೋಗುವ ಸಿಪಿಇಸಿ ಯೋಜನೆ ಬಗ್ಗೆ ಉಲ್ಲೇಖಿಸಿದ್ದು, ಸದಸ್ಯ ರಾಷ್ಟ್ರಗಳ ಪ್ರಾದೇಶಿಕ ಸಮಗ್ರತೆ ಹಾಗೂ ಸಾರ್ವಭೌಮತೆಯನ್ನು ಚೀನಾ ಗೌರವಿಸಬೇಕು ಎಂದು ಹೇಳಿದ್ದಾರೆ. 
ಪಾಕಿಸ್ತಾನ-ಚೀನಾ ಎಕಾನಾಮಿಕ್ ಕಾರಿಡಾರ್ ನ್ನು ಭಾರತ ಹಾಗೂ ಪಾಕಿಸ್ತಾನದ ಬಲೂಚಿಸ್ಥಾನ ಪ್ರಾಂತ್ಯ ತೀವ್ರವಾಗಿ ವಿರೋಧಿಸುತ್ತಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT