ಚೀನಾದಲ್ಲಿರುವ ಭಾರತೀಯ ರಾಯಭಾರಿ ವಿಜಯ್ ಗೋಖಲೆ 
ದೇಶ

ಶಾಂಘೈ ಸಹಕಾರ ಒಕ್ಕೂಟ ಸಾರ್ವಭೌಮತೆಯನ್ನು ನಿರ್ಲಕ್ಷಿಸಬಾರದು: ಭಾರತದ ರಾಯಭಾರಿ

ಶಾಂಘೈ ಸಹಕಾರ ಒಕ್ಕೂಟ ಸದಸ್ಯ ರಾಷ್ಟ್ರಗಳ ಸಾರ್ವಭೌಮತೆಯನ್ನು ನಿರ್ಲಕ್ಷಿಸಬಾರದು ಎಂದು ಚೀನಾದಲ್ಲಿರುವ ಭಾರತದ ರಾಯಭಾರಿ ವಿಜಯ್ ಗೋಖಲೆ ಹೇಳಿದ್ದಾರೆ.

ನವದೆಹಲಿ: ಶಾಂಘೈ ಸಹಕಾರ ಒಕ್ಕೂಟ ಸದಸ್ಯ ರಾಷ್ಟ್ರಗಳ ಸಾರ್ವಭೌಮತೆಯನ್ನು ನಿರ್ಲಕ್ಷಿಸಬಾರದು ಎಂದು ಚೀನಾದಲ್ಲಿರುವ ಭಾರತದ ರಾಯಭಾರಿ ವಿಜಯ್ ಗೋಖಲೆ ಹೇಳಿದ್ದಾರೆ. 
ವ್ಯಾಪಾರ ಮತ್ತು ಸಂಪರ್ಕ ವಲಯದಲ್ಲಿ ಸಹಕಾರವನ್ನು ವೃದ್ಧಿಸುವುದರ ಜೊತೆಗೆ ಚೀನಾ ಎಸ್ ಸಿಒ ಸದಸ್ಯ ರಾಷ್ಟ್ರಗಳ ಸಾರ್ವಭೌಮತೆಯನ್ನೂ ಗೌರವಿಸಬೇಕಾಗುತ್ತದೆ ಎಂದು ವಿಜಯ್ ಗೋಖಲೆ ತಿಳಿಸಿದ್ದಾರೆ. ಬೀಜಿಂಗ್ ನಲ್ಲಿ ಶಾಂಘೈ ಸಹಕಾರ ಒಕ್ಕೂಟ ಕೇಂದ್ರ ಕಚೇರಿಯಲ್ಲಿ ಭಾರತ ಹಾಗೂ ಪಾಕಿಸ್ತಾನ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿರುವ ಭಾರತೀಯ ರಾಯಭಾರಿ ವಿಜಯ್ ಗೋಖಲೆ, ಸ್ಪಷ್ಟವಾಗಿ ಪಾಕ್ ಆಕ್ರಮಿತ ಕಾಶ್ಮೀರದ ಮೇಲೆ ಹಾದುಹೋಗುವ ಸಿಪಿಇಸಿ ಯೋಜನೆ ಬಗ್ಗೆ ಉಲ್ಲೇಖಿಸಿದ್ದು, ಸದಸ್ಯ ರಾಷ್ಟ್ರಗಳ ಪ್ರಾದೇಶಿಕ ಸಮಗ್ರತೆ ಹಾಗೂ ಸಾರ್ವಭೌಮತೆಯನ್ನು ಚೀನಾ ಗೌರವಿಸಬೇಕು ಎಂದು ಹೇಳಿದ್ದಾರೆ. 
ಪಾಕಿಸ್ತಾನ-ಚೀನಾ ಎಕಾನಾಮಿಕ್ ಕಾರಿಡಾರ್ ನ್ನು ಭಾರತ ಹಾಗೂ ಪಾಕಿಸ್ತಾನದ ಬಲೂಚಿಸ್ಥಾನ ಪ್ರಾಂತ್ಯ ತೀವ್ರವಾಗಿ ವಿರೋಧಿಸುತ್ತಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT