ಸುಪ್ರೀಂ ಕೋರ್ಟ್ 
ದೇಶ

ಗೋ ಹತ್ಯೆ ಸಂಬಂಧ ಅಧಿಸೂಚನೆ: ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೊಟೀಸ್!

ಮಾಂಸಕ್ಕಾಗಿ ಹಸುಗಳನ್ನು ಹತ್ಯೆ ಮಾಡಲು ಮಾರುಕಟ್ಟೆಯಲ್ಲಿ ಮಾರಾಟ ಮಾಡುವುದಾಗಲಿ ಮಾಡಬಾರದು ಎಂದು...

ನವದೆಹಲಿ: ಮಾಂಸಕ್ಕಾಗಿ ಹಸುಗಳನ್ನು ಹತ್ಯೆ ಮಾಡಲು ಮಾರುಕಟ್ಟೆಯಲ್ಲಿ ಮಾರಾಟ ಮಾಡುವುದಾಗಲಿ, ಖರೀದಿಸುವುದಾಗಲಿ ಮಾಡಬಾರದು ಎಂದು ಹೊರಡಿಸಿರುವ ಅಧಿಸೂಚನೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗೆ ಸಂಬಂಧಪಟ್ಟಂತೆ ವಿವರ ಕೋರಿ ಸುಪ್ರೀಂ ಕೋರ್ಟ್ ಇಂದು ನೊಟೀಸ್ ಕೇಂದ್ರ ಸರ್ಕಾರಕ್ಕೆ ನೊಟೀಸ್ ಜಾರಿ ಮಾಡಿದೆ. 
ಕೇಂದ್ರ ಸರ್ಕಾರ ಇನ್ನು ಎರಡು ವಾರಗಳೊಳಗೆ ತನ್ನ ಪ್ರತಿಕ್ರಿಯೆ ಸಲ್ಲಿಸುವಂತೆ ಆದೇಶ ನೀಡಿರುವ ಸುಪ್ರೀಂ ಕೋರ್ಟ್ ವಿಚಾರಣೆಯನ್ನು ಜುಲೈ 11ಕ್ಕೆ ಮುಂದೂಡಿದೆ.
ಹೈದರಾಬಾದ್ ಮೂಲದ ಸರ್ಕಾರೇತರ ಸಂಘಟನೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ನಲ್ಲಿ ಸಲ್ಲಿಸಿತ್ತು.
ಮಾಂಸಕ್ಕಾಗಿ ದನ ಕರುಗಳನ್ನು ಮಾರಾಟ ಮಾಡುವುದು ಮತ್ತು ಖರೀದಿಸುವುದಕ್ಕೆ ಇತ್ತೀಚೆಗೆ ಕೇಂದ್ರ ಸರ್ಕಾರ ಹೊರಡಿಸಿರುವ ಅಧಿಸೂಚನೆಯಿಂದ ಮುಕ್ತ ವ್ಯಾಪಾರ ಹಕ್ಕನ್ನು ಜನರಿಂದ ಕಸಿದುಕೊಂಡಂತಾಗುತ್ತದೆ ಎಂದು ಆರೋಪಿಸಿ ಸಂಘಟನೆಯ ಮುಖ್ಯಸ್ಥ ಮೊಹಮ್ಮದ್ ಅಬ್ದುಲ್ ಫಹೀಮ್ ಖುರೇಷಿ ಇದೇ ತಿಂಗಳ 7ರಂದು ಅರ್ಜಿ ಸಲ್ಲಿಸಿದ್ದರು.
 ಜನರು ತಮ್ಮ  ಖಾಸಗಿ ಬದುಕಿನ ರಕ್ಷಣೆ ಮತ್ತು ಸ್ವಾತಂತ್ರ್ಯಕ್ಕಾಗಿ ಯಾವುದೇ ವೃತ್ತಿ ಮಾಡಬಹುದು. ಅಲ್ಪಸಂಖ್ಯಾತರ ಧಾರ್ಮಿಕ ಅಭ್ಯಾಸ ಮತ್ತು ಹಿತಾಸಕ್ತಿಗಳನ್ನು ಕೇಂದ್ರ ಸರ್ಕಾರದ ನಿಯಮ ಉಲ್ಲಂಘಿಸುತ್ತದೆ ಎಂದು ಅವರು ಅರ್ಜಿಯಲ್ಲಿ ಆರೋಪಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT