ಸುಪ್ರೀಂ ಕೋರ್ಟ್ 
ದೇಶ

ಗೋ ಹತ್ಯೆ ಸಂಬಂಧ ಅಧಿಸೂಚನೆ: ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೊಟೀಸ್!

ಮಾಂಸಕ್ಕಾಗಿ ಹಸುಗಳನ್ನು ಹತ್ಯೆ ಮಾಡಲು ಮಾರುಕಟ್ಟೆಯಲ್ಲಿ ಮಾರಾಟ ಮಾಡುವುದಾಗಲಿ ಮಾಡಬಾರದು ಎಂದು...

ನವದೆಹಲಿ: ಮಾಂಸಕ್ಕಾಗಿ ಹಸುಗಳನ್ನು ಹತ್ಯೆ ಮಾಡಲು ಮಾರುಕಟ್ಟೆಯಲ್ಲಿ ಮಾರಾಟ ಮಾಡುವುದಾಗಲಿ, ಖರೀದಿಸುವುದಾಗಲಿ ಮಾಡಬಾರದು ಎಂದು ಹೊರಡಿಸಿರುವ ಅಧಿಸೂಚನೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗೆ ಸಂಬಂಧಪಟ್ಟಂತೆ ವಿವರ ಕೋರಿ ಸುಪ್ರೀಂ ಕೋರ್ಟ್ ಇಂದು ನೊಟೀಸ್ ಕೇಂದ್ರ ಸರ್ಕಾರಕ್ಕೆ ನೊಟೀಸ್ ಜಾರಿ ಮಾಡಿದೆ. 
ಕೇಂದ್ರ ಸರ್ಕಾರ ಇನ್ನು ಎರಡು ವಾರಗಳೊಳಗೆ ತನ್ನ ಪ್ರತಿಕ್ರಿಯೆ ಸಲ್ಲಿಸುವಂತೆ ಆದೇಶ ನೀಡಿರುವ ಸುಪ್ರೀಂ ಕೋರ್ಟ್ ವಿಚಾರಣೆಯನ್ನು ಜುಲೈ 11ಕ್ಕೆ ಮುಂದೂಡಿದೆ.
ಹೈದರಾಬಾದ್ ಮೂಲದ ಸರ್ಕಾರೇತರ ಸಂಘಟನೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ನಲ್ಲಿ ಸಲ್ಲಿಸಿತ್ತು.
ಮಾಂಸಕ್ಕಾಗಿ ದನ ಕರುಗಳನ್ನು ಮಾರಾಟ ಮಾಡುವುದು ಮತ್ತು ಖರೀದಿಸುವುದಕ್ಕೆ ಇತ್ತೀಚೆಗೆ ಕೇಂದ್ರ ಸರ್ಕಾರ ಹೊರಡಿಸಿರುವ ಅಧಿಸೂಚನೆಯಿಂದ ಮುಕ್ತ ವ್ಯಾಪಾರ ಹಕ್ಕನ್ನು ಜನರಿಂದ ಕಸಿದುಕೊಂಡಂತಾಗುತ್ತದೆ ಎಂದು ಆರೋಪಿಸಿ ಸಂಘಟನೆಯ ಮುಖ್ಯಸ್ಥ ಮೊಹಮ್ಮದ್ ಅಬ್ದುಲ್ ಫಹೀಮ್ ಖುರೇಷಿ ಇದೇ ತಿಂಗಳ 7ರಂದು ಅರ್ಜಿ ಸಲ್ಲಿಸಿದ್ದರು.
 ಜನರು ತಮ್ಮ  ಖಾಸಗಿ ಬದುಕಿನ ರಕ್ಷಣೆ ಮತ್ತು ಸ್ವಾತಂತ್ರ್ಯಕ್ಕಾಗಿ ಯಾವುದೇ ವೃತ್ತಿ ಮಾಡಬಹುದು. ಅಲ್ಪಸಂಖ್ಯಾತರ ಧಾರ್ಮಿಕ ಅಭ್ಯಾಸ ಮತ್ತು ಹಿತಾಸಕ್ತಿಗಳನ್ನು ಕೇಂದ್ರ ಸರ್ಕಾರದ ನಿಯಮ ಉಲ್ಲಂಘಿಸುತ್ತದೆ ಎಂದು ಅವರು ಅರ್ಜಿಯಲ್ಲಿ ಆರೋಪಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

2nd Test: ವಿಂಡೀಸ್ ವಿರುದ್ಧ ಕುಲದೀಪ್ ಯಾದವ್ ಭರ್ಜರಿ ಬೌಲಿಂಗ್, ವಿಶ್ವ ದಾಖಲೆ

2nd Test, Day 3: ಮೊದಲ ಇನ್ನಿಂಗ್ಸ್ ನಲ್ಲಿ 248 ರನ್ ಗೆ ವಿಂಡೀಸ್ ಆಲೌಟ್, ಫಾಲೋಆನ್ ಹೇರಿದ ಭಾರತ

SCROLL FOR NEXT