ದಿವಾಕರ್ ರೆಡ್ಡಿ 
ದೇಶ

ವಿಮಾನ ತಪ್ಪಿಸಿಕೊಂಡ ಟಿಡಿಪಿ ಶಾಸಕನಿಂದ ವಿಶಾಖಪಟ್ಟಣಂ ವಿಮಾನ ನಿಲ್ದಾಣದಲ್ಲಿ ಗಲಾಟೆ

ಆಂಧ್ರಪ್ರದೇಶ ಆಡಳಿತರೂಢ ತೆಲುಗು ದೇಶಂ ಪಕ್ಷದ ಸಂಸದ ಜೆಸಿ ದಿವಾಕರ್ ರೆಡ್ಡಿ ಅವರು ವಿಶಾಖಪಟ್ಟಣಂ ಅಂತರಾಷ್ಟ್ರೀಯ ವಿಮಾನ...

ವಿಶಾಖಪಟ್ಟಣಂ: ಆಂಧ್ರಪ್ರದೇಶ ಆಡಳಿತರೂಢ ತೆಲುಗು ದೇಶಂ ಪಕ್ಷದ ಸಂಸದ ಜೆಸಿ ದಿವಾಕರ್ ರೆಡ್ಡಿ ಅವರು ವಿಶಾಖಪಟ್ಟಣಂ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಡವಾಗಿ ಆಗಮಿಸಿದ್ದರಿಂದ ವಿಮಾನ ಪ್ರಯಾಣಕ್ಕೆ ಅವಕಾಶ ನೀಡದ ಸಿಬ್ಬಂದಿಗಳೊಂದಿಗೆ ತೀವ್ರ ವಾಗ್ವಾದ ನಡೆಸಿದ್ದಾರೆ.
ಇಂದು ದಿವಾಕರ್ ರೆಡ್ಡಿ ಅವರು ಇಂಡಿಗೋ ವಿಮಾನದಲ್ಲಿ ಹೈದರಬಾದ್ ಗೆ ಪ್ರಯಾಣಿಸಬೇಕಿತ್ತು. ಆದರೆ ವಿಮಾನ ನಿಲ್ದಾಣಕ್ಕೆ ತಡವಾಗಿ ಆಗಮಿಸಿದ್ದರಿಂದ ಬೋರ್ಡಿಂಗ್ ಪಾಸ್ ಕೌಂಟರ್ ಗಳನ್ನು ಬಂದ್ ಮಾಡಲಾಗಿತ್ತು. ಇದರಿಂದ ಆಕ್ರೋಶಗೊಂಡ ಸಂಸದರು ವಿಮಾನ ಸಿಬ್ಬಂದಿಯನ್ನು ತರಾಟೆಗೆದುಕೊಂಡು, ಬೋರ್ಡಿಂಗ್ ಪಾಸ್ ನೀಡುವಂತೆ ಒತ್ತಾಯಿಸಿದ್ದಾರೆ. ಆದರೆ ಇದಕ್ಕೆ ವಿಮಾನ ಸಿಬ್ಬಂದಿ ಒಪ್ಪದ ಹಿನ್ನೆಲೆಯಲ್ಲಿ ಇಬ್ಬರ ಮಧ್ಯ ಕೆಲಕಾಲ ಮಾತಿನ ಚಕಮಕಿ ನಡೆದಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ವಿಮಾನ ನಿಲ್ದಾಣದ ನಿರ್ದೇಶ ಜಿ ಪ್ರಕಾಶ್ ರೆಡ್ಡಿ ಅವರು, ತಡವಾಗಿ ಬಂದ ಪ್ರಯಾಣಿಕರು ಪಾಸ್ ನೀಡುವ ವಿಚಾರ ವಿಮಾನಯಾನ ಸಂಸ್ಥೆಗೆ ಸಂಬಂಧಿಸಿದ ವಿಚಾರ. ಇದರಲ್ಲಿ ನಾವು ಏನು ಮಾಡುವುದಕ್ಕೆ ಆಗುವುದಿಲ್ಲ ಎಂದಿದ್ದಾರೆ.
ಗಲಾಟೆಯಿಂದ ವಿಮಾನ ನಿಲ್ದಾಣದ ಆಸ್ತಿ-ಪಾಸ್ತಿ ಹಾನಿಯಾಗಿರುವುದನ್ನು ಪ್ರಕಾಶ್ ರೆಡ್ಡಿ ಅವರು ನಿರಾಕರಿಸಿದ್ದಾರೆ.
ವಿಮಾನ ತಪ್ಪಿಸಿಕೊಂಡ ಟಿಡಿಪಿ ಸಂಸದ ಇಂಡಿಗೋ ವಿಮಾನಕ್ಕೆ ಇಡೀ ಶಾಪ ಹಾಕಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT