ಸಂಗ್ರಹ ಚಿತ್ರ 
ದೇಶ

ತಪ್ಪು ಮಾಡಿಲ್ಲ, ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ: ಟಿಡಿಪಿ ಸಂಸದ ದಿವಾಕರ್ ರೆಡ್ಡಿ!

ತಾವು ಯಾವುದೇ ತಪ್ಪು ಮಾಡಿಲ್ಲ ಹೀಗಾಗಿ ಕ್ಷಮೆ ಕೇಳುವ ಪ್ರಮೇಯವೇ ಇಲ್ಲ ಎಂದು ವಿಮಾನಯಾನ ಸಂಸ್ಥೆಗಳಿಂದ ನಿಷೇಧಕ್ಕೆ ಒಳಗಾಗಿರುವ ಟಿಡಿಪಿ ಸಂಸದ ಜೆಸಿ ದಿವಾಕರ್ ರೆಡ್ಡಿ ಹೇಳಿದ್ದಾರೆ.

ವಿಶಾಖಪಟ್ಟಣ: ತಾವು ಯಾವುದೇ ತಪ್ಪು ಮಾಡಿಲ್ಲ ಹೀಗಾಗಿ ಕ್ಷಮೆ ಕೇಳುವ ಪ್ರಮೇಯವೇ ಇಲ್ಲ ಎಂದು ವಿಮಾನಯಾನ ಸಂಸ್ಥೆಗಳಿಂದ ನಿಷೇಧಕ್ಕೆ ಒಳಗಾಗಿರುವ ಟಿಡಿಪಿ ಸಂಸದ ಜೆಸಿ ದಿವಾಕರ್ ರೆಡ್ಡಿ ಹೇಳಿದ್ದಾರೆ.

ವಿಶಾಖಪಟ್ಟಣಂನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ದಿವಾಕರ್ ರೆಡ್ಡಿ ಅವರು, ನಾನು ಯಾರನ್ನೂ ನಿಂದಿಸಿಲ್ಲ, ಯಾರ ಮೇಲೂ ಹಲ್ಲೆ ಮಾಡಿಲ್ಲ. ಹೀಗಿರುವಾಗ ಕ್ಷಮೆ ಏಕೆ ಕೇಳಬೇಕು ಎಂದು ಹೇಳಿದ್ದಾರೆ. ಅಂತೆಯೇ ತಮ್ಮ  ವಿರುದ್ಧದ ಎಲ್ಲ ಆರೋಪಗಳನ್ನು ದಿವಾತರ್ ರೆಡ್ಡಿ ನಿರಾಕರಿಸಿದ್ದಾರೆ.

ವಿಜಯವಾಡದಿಂದ ಹೈದರಾಬಾದ್‌ಗೆ ಇಂಡಿಗೋ ಏರ್‌ಲೈನ್ಸ್‌ ಗುರುವಾರ ಬೆಳಗ್ಗೆ ಹೊರಡಬೇಕಿತ್ತು. ಸಾಮಾನ್ಯವಾಗಿ ವಿವಿಐಪಿಗಳು ವಿಮಾನ ಪ್ರಯಾಣ ಮಾಡುವಾಗ ಅವರ ಆಪ್ತ ಸಹಾಯಕರು ಬಂದು ಬೋರ್ಡಿಂಗ್‌ ಪಾಸ್‌  ಪಡೆದುಕೊಳ್ಳುತ್ತಾರೆ. ಗಣ್ಯರು ಬರುತ್ತಿದ್ದಾರೆ ಎಂಬ ಮಾಹಿತಿಯನ್ನು ವಿಮಾನ ಸಿಬ್ಬಂದಿಗೂ ತಿಳಿಸುತ್ತಾರೆ. ಆದರೆ ದಿವಾಕರ ರೆಡ್ಡಿ ಅವರಿಂದ ಅಂತಹ ಯಾವುದೇ ಪ್ರಕ್ರಿಯೆ ನಡೆದಿರಲಿಲ್ಲ. ದೇಶೀಯ ವಿಮಾನದಲ್ಲಿ ಪ್ರಯಾಣಿಸುವವರು  ವಿಮಾನ ಹೊರಡುವುದಕ್ಕಿಂತ 45 ನಿಮಿಷ ಮುಂಚಿತವಾಗಿ ಬಂದಿರಬೇಕು. ಆದರೆ ಜೆ.ಸಿ. ದಿವಾಕರ ರೆಡ್ಡಿ ಅವರು ವಿಮಾನ ಇನ್ನೇನು ಟೇಕಾಫ್‌ ಆಗಲು 28 ನಿಮಿಷಗಳು ಇವೆ ಎನ್ನುವಾಗ ವಿಮಾನ ನಿಲ್ದಾಣ ಪ್ರವೇಶಿಸಿದರು.  ಬೋರ್ಡಿಂಗ್‌ ಪಾಸ್‌ ಕೊಡಲು ಸಿಬ್ಬಂದಿ ನಿರಾಕರಿಸಿದಾಗ ವಾಚಾಮಗೋಚರವಾಗಿ ನಿಂದಿಸಿ, ದಾಂಧಲೆಗೆ ಇಳಿದರು.

ಇದೇ ವಿಚಾರವಾಗಿ ಬಹುತೇಕ ಎಲ್ಲ ವಿಮಾನಯಾನ ಸಂಸ್ಥೆಗಳು ದಿವಾಕರ್ ರೆಡ್ಡಿ ಅವರ ವಿಮಾನಯಾನ ಪ್ರಯಾಣಕ್ಕೆ ನಿಷೇಧ ಹೇರಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

ಡಿ ಕೆ ಶಿವಕುಮಾರ್ ಹಿಂದೂ ಜನರ ಭಾವನೆಗಳಿಗೆ ನೋವುಂಟುಮಾಡಿದ್ದು ಕ್ಷಮೆಯಾಚಿಸಬೇಕು: ಶೋಭಾ ಕರಂದ್ಲಾಜೆ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

SCROLL FOR NEXT