ಆನಂದ್ ಸಿಂಗ್ ಕುಶ್ವಾ 
ದೇಶ

ರಾಷ್ಟ್ರಪತಿ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಗ್ವಾಲಿಯರ್ ಚಹಾ ಮಾರಾಟಗಾರ

ರಾಷ್ಟ್ರಪತಿ ಚುನಾವಣೆಗೆ ಚಹಾ ಮಾರಾಟಗಾರ ಗ್ವಾಲಿಯರ್ ಲಶ್ಕರ್ ನಿವಾಸಿ ಆನಂದ್ ಸಿಂಗ್ ಕುಶ್ವಾ ಎಂಬುವರು ನಾಮಪತ್ರ ಸಲ್ಲಿಸಿ ಇದೀಗ ಸುದ್ದಿಯಾಗಿದ್ದಾರೆ...

ಭೋಪಾಲ್: ರಾಷ್ಟ್ರಪತಿ ಚುನಾವಣೆಗೆ ಚಹಾ ಮಾರಾಟಗಾರ ಗ್ವಾಲಿಯರ್ ಲಶ್ಕರ್ ನಿವಾಸಿ ಆನಂದ್ ಸಿಂಗ್ ಕುಶ್ವಾ ಎಂಬುವರು ನಾಮಪತ್ರ ಸಲ್ಲಿಸಿ ಇದೀಗ ಸುದ್ದಿಯಾಗಿದ್ದಾರೆ. 
ಆನಂದ್ ಸಿಂಗ್ ಕುಶ್ವಾ ಅವರು ಚಹಾ ಮಾರಿದ ವ್ಯಕ್ತಿ ದೇಶದ ಪ್ರಧಾನಿಯಾಗಿರುವಾಗ ನಾನೇಕೆ ರಾಷ್ಟ್ರಪತಿ ಆಗಬಾರದು ಎಂದು ಹೇಳಿದ್ದಾರೆ. 
ಕುಶ್ವಾ ಅವರು ಹಲವು ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಸ್ಪರ್ಧಿಸಿದ್ದರು. ಅವರು ಈಗಾಗಲೇ ಉಪ ರಾಷ್ಟ್ರಪತಿ ಚುನಾವಣೆಗೆ ಸ್ಪರ್ಧಿಸಿದ್ದರು. ಕಳೆದ ಚುನಾವಣೆಯಲ್ಲಿ ನಾನು ಸಾಕಷ್ಟು ಬೆಂಬಲವನ್ನು ಪಡೆದುಕೊಂಡಿದ್ದೆ. ಈ ಬಾರಿ ನಾನು ಉತ್ತರಪ್ರದೇಶದ ಸಂಸದರು ಮತ್ತು ಶಾಸಕರ ಜತೆ ಸಂಪರ್ಕದಲ್ಲಿದ್ದೇನೆ ಎಂದು ಹೇಳಿದ್ದಾರೆ. 
ಆನಂದ್ ಸಿಂಗ್ ಕುಶ್ವಾ ದೆಹಲಿಗೆ ತೆರಳಿ ಸಂಸತ್ ನಲ್ಲಿ ಮುಖ್ಯ ಚುನಾವಣೆ ಅಧಿಕಾರಿಯನ್ನು ಭೇಟಿ ಮಾಡಿ ನಾಮಪತ್ರ ಸಲ್ಲಿಸಿದ್ದಾರೆ. ಈ ವೇಳೆ ತಮ್ಮ ಆಸ್ತಿ ವಿವರವನ್ನು ನೀಡಿದ್ದಾರೆ. ಅಂತ ಐದು ಸಾವಿರ ನಗದು, ಬೈಸಿಕಲ್, ಮನೆ, ಚಹಾ ಅಂಗಡಿ ಮತ್ತು ಪತ್ನಿಯ ಮಾಂಗಲ್ಯ ಸರವನ್ನು ಹೊಂದಿದ್ದಾಗಿ ಹೇಳಿದ್ದಾರೆ. ಇನ್ನು ಬ್ಯಾಂಕ್ ನಲ್ಲಿ 12 ಸಾವಿರ ನಗದು ಮತ್ತು ಇತರ ಬ್ಯಾಂಕ್ ಗಳಲ್ಲಿ 60 ಸಾವಿರ ಸಾಲವನ್ನು ತೋರಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT