ಸಂಗ್ರಹ ಚಿತ್ರ 
ದೇಶ

ಜಾಧವ್ ಪ್ರಕರಣ ಸಂಬಂಧ ಭಾರತದ ಮನವಿಯನ್ನು ಐಸಿಜೆ ಎಂದಿಗೂ ತಿರಸ್ಕರಿಸಿಲ್ಲ: ಭಾರತ ಸ್ಪಷ್ಟನೆ

ಭಾರತೀಯ ನೌಕಾಪಡೆಯ ನಿವೃತ್ತ ಅಧಿಕಾರಿ ಕುಲಭೂಷಣ್ ಜಾಧವ್ ಪ್ರಕರಣ ಸಂಬಂಧ ಭಾರತದ ಮನವಿಗಳನ್ನು ಅಂತರಾಷ್ಟ್ರೀಯ ನ್ಯಾಯಾಲಯದ ಎಂದಿಗೂ ತಿರಸ್ಕರಿಸಿಲ್ಲ...

ಇಸ್ಲಾಮಾಬಾದ್: ಭಾರತೀಯ ನೌಕಾಪಡೆಯ ನಿವೃತ್ತ ಅಧಿಕಾರಿ ಕುಲಭೂಷಣ್ ಜಾಧವ್ ಪ್ರಕರಣ ಸಂಬಂಧ ಭಾರತದ ಮನವಿಗಳನ್ನು ಅಂತರಾಷ್ಟ್ರೀಯ ನ್ಯಾಯಾಲಯದ ಎಂದಿಗೂ ತಿರಸ್ಕರಿಸಿಲ್ಲ ಎಂದು ಭಾರತ ಶನಿವಾರ ಸ್ಪಷ್ಟಪಡಿಸಿದೆ. 
ನಿನ್ನೆಯಷ್ಟೇ ಪಾಕಿಸ್ತಾನ ಮಾಧ್ಯಮಗಳು ಕೆಲ ವರದಿಗಳನ್ನು ಪ್ರಕಟಿಸಿದ್ದವು. ಜಾಧವ್ ಅವರ ವಿರುದ್ಧದ ಪ್ರಕರಣದ ವಿಚಾರಣೆಯನ್ನು ಡಿಸೆಂಬರ್ ವರೆಗೆ ಮುಂದೂಡುವಂತೆ ಭಾರತ ಮಾಡಿದ್ದ ಮನವಿಯನ್ನು ಅಂತರಾಷ್ಟ್ರೀಯ ನ್ಯಾಯಾಲಯ ತಿರಸ್ಕರಿಸಿದ್ದು, ಭಾರತಕ್ಕೆ ಹಿನ್ನಡೆಯುಂಟಾಗಿದೆ ಎಂದು ಪಾಕಿಸ್ತಾನದ ಡಾನ್ ಪತ್ರಿಕೆ ವರದಿ ಮಾಡಿತ್ತು. 
ಪಾಕಿಸ್ತಾನದ ಹೇಳಿಕೆಯನ್ನು ಭಾರತ ಇದೀಗ ತಿರಸ್ಕರಿಸಿದೆ. ಈ ಕುರಿತಂತೆ ಸ್ಫಷ್ಟನೆ ನೀಡಿರುವ ವಿದೇಶಾಂಗ ಸಚಿವಾಲಯದ ವಕ್ತಾರ ಗೋಪಾಲ್ ಬಾಗ್ಲೆಯವರು, ಜಾಧವ್ ಪ್ರಕರಣ ಸಂಬಂಧ ಅಂತರಾಷ್ಟ್ರೀಯ ನ್ಯಾಯಾಲಯ ಮುಖ್ಯಸ್ಥರೀ ಭಾರತ ಹಾಗೂ ಪಾಕಿಸ್ತಾನ ಎರಡೂ ದೇಶಗಳ ಪ್ರತಿನಿಧಿಗಳನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಚರ್ಚೆ ಬಳಿಕ ಅರ್ಜಿ ಸಲ್ಲಿಸಲು ನಾಲ್ಕು ತಿಂಗಳ ಕಾಲಾವಕಾಶ ನೀಡಲಾಗಿತ್ತು. ಸೆಪ್ಟಂಬರ್ 13ರೊಳಗಾಗಿ ಹಾಗೂ ಪಾಕಿಸ್ತಾನಕ್ಕೆ ಡಿಸೆಂಬರ್ 13ರೊಳಗಾಗಿ ಅರ್ಜಿ ಸಲ್ಲಿಸಲು ಕಾಲಾವಕಾಶ ನೀಡಿತ್ತು. ವಾಸ್ತವಿಕ ಅಂಶ ಇದಾಗಿದ್ದು, ಪ್ರಸ್ತುತ ಜಾಧವ್ ಪ್ರಕರಣ ಸಂಬಂಧ ಬರುತ್ತಿರುವ ವರದಿಗಳು ಸತ್ಯಕ್ಕೆ ದೂರವಾಗಿದೆ ಎಂದು ಹೇಳಿದ್ದಾರೆ.
ನ್ಯಾಯಾಲಯದ ಮುಖ್ಯಸ್ಥರೊಂದಿಗೆ ಮಾತುಕತೆ ನಡೆಸುವ ವೇಳೆ ಭಾರತವೇ 4 ತಿಂಗಳು ಕಾಲಾವಕಾಶ ನೀಡುವಂತೆ ಮನವಿ ಮಾಡಿತ್ತು. ಉಭಯ ರಾಷ್ಟ್ರಗಳು ಅರ್ಜಿಗಳನ್ನು ಸಲ್ಲಿಸಿದ ಬಳಿಕವಷ್ಟೇ ನ್ಯಾಯಾಲಯ ಅಂತಿಮ ಆದೇಶ ಹೊರಡಿಸಲು ಸಾಧ್ಯ. ಜನವರಿ ತಿಂಗಳಿನಲ್ಲಿ ನ್ಯಾಯಾಲಯ ವಿಚಾರಣೆ ನಡೆಸುತ್ತದೆಯೋ, ಇಲ್ಲವೋ ಎಂಬುದು ನ್ಯಾಯಾಲಯಕ್ಕೆ ಬಿಟ್ಟಿದ್ದು. ಅರ್ಜಿ ಪರಿಶೀಲನೆ ನಡೆಸಿದ ಬಳಿಕ ನ್ಯಾಯಾಲಯವೇ ಈ ಕುರಿತಂತೆ ನಿರ್ಧಾರ ಕೈಗೊಳ್ಳುತ್ತದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT