ಸಾಂದರ್ಭಿಕ ಚಿತ್ರ 
ದೇಶ

ಗೋ ಮಾಂಸ ಉತ್ಸವ: ಕೇರಳದಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಮೆಟ್ರೊ ಉದ್ಘಾಟನೆಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಆಗಮಿಸಿದ ಸಂದರ್ಭದಲ್ಲಿ ಗೋ ಮಾಂಸ ಉತ್ಸವ...

ಕೊಚ್ಚಿ: ಮೆಟ್ರೊ ಉದ್ಘಾಟನೆಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಆಗಮಿಸಿದ ಸಂದರ್ಭದಲ್ಲಿ ಗೋ ಮಾಂಸ ಉತ್ಸವ ನಡೆಸಿದ ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ಇಂದು ಬಂಧಿಸಿದ್ದಾರೆ.
ಕೇರಳ ರಾಜ್ಯದ ಮೊದಲ ಮೆಟ್ರೊ ರೈಲು ಮಾರ್ಗವನ್ನು ಉದ್ಘಾಟಿಸಲು ಪ್ರಧಾನ ಮಂತ್ರಿಯವರು ದಕ್ಷಿಣ ನೌಕಾ ಕಮಾಂಡರ್ ನ ವಿಮಾನ ಕಚೇರಿಗೆ ಆಗಮಿಸಿದ ಸಂದರ್ಭದಲ್ಲಿ ಗೋ ಮಾಂಸ ಉತ್ಸವವನ್ನು ಆಯೋಜಿಸಲಾಗಿತ್ತು.
ಕಾರ್ಯಕರ್ತರನ್ನು ಬಂಧಿಸುವ ಸಂದರ್ಭದಲ್ಲಿ ಅವರು ಗೋ ಮಾಂಸದ ಅಡುಗೆ ಮಾಡಿ ಬಡಿಸುತ್ತಿದ್ದರು.
ಗೋವುಗಳ ಮಾರಾಟ ಮತ್ತು ವಧೆಗೆ ಸಂಬಂಧಪಟ್ಟಂತೆ ಕೇಂದ್ರ ಸರ್ಕಾರ ಹೊಸ ಕಾನೂನು ಹೊರಡಿಸಿದ ನಂತರ ಕೇರಳದಲ್ಲಿ ಇಂತಹ ಹತ್ತಾರು ಪ್ರತಿಭಟನೆಗಳು ನಡೆದಿವೆ. ಕೇಂದ್ರದ ಕಾನೂನು ವಿರುದ್ಧ ರಾಜ್ಯ ವಿಧಾನಸಭೆಯಲ್ಲಿ ಕೂಡ ನಿರ್ಣಯ ಹೊರಡಿಸಲು ಈ ತಿಂಗಳ ಆರಂಭದಲ್ಲಿ ವಿಶೇಷ ಅಧಿವೇಶನ ಕರೆಯಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT