ಸಾಂದರ್ಭಿಕ ಚಿತ್ರ 
ದೇಶ

ಬಿಹಾರ: ಶುಲ್ಕ ನೀಡದ್ದಕ್ಕೆ ಬಾಲಕಿಯರ ಯೂನಿಫಾರ್ಮ್ ಬಿಚ್ಚಿ ಕ್ಲಾಸಿಂದ ಹೊರದಬ್ಬಿದ ಶಿಕ್ಷಕಿ

ಯೂನಿಫಾರ್ಮ್ ಗೆ ಶುಲ್ಕ ಪಾವತಿಸಲಿಲ್ಲವೆಂದು ಸಹೋದರಿಯರಾದ ಇಬ್ಬರು ವಿದ್ಯಾರ್ಥಿನಿಯರನ್ನು...

ಬೆಗಸೂರು: ಯೂನಿಫಾರ್ಮ್ ಗೆ ಶುಲ್ಕ ಪಾವತಿಸಲಿಲ್ಲವೆಂದು ಸಹೋದರಿಯರಾದ ಇಬ್ಬರು ವಿದ್ಯಾರ್ಥಿನಿಯರನ್ನು ಖಾಸಗಿ ಶಾಲೆಯಿಂದ ಹೊರದೂಡಿದ ಘಟನೆ ಬಿಹಾರದ ಬೆಗುಸರೈ ಜಿಲ್ಲೆಯಲ್ಲಿ ನಡೆದಿದೆ.
ಒಂದು ಮತ್ತು 2ನೇ ತರಗತಿಯ ಬಾಲಕಿಯರ ತಂದೆ ನೀಡಿದ ದೂರಿನ ಮೇರೆಗೆ ಶಾಲೆಯ ಶಿಕ್ಷಕಿ ಮತ್ತು ಪ್ರಾಂಶುಪಾಲರನ್ನು ಬಂಧಿಸಲಾಗಿದೆ.
ಜಿಲ್ಲೆಯ ಕೊರಿಯಾ ಪಂಚಾಯತ್ ನ ಸಿಕ್ರೌಲಾ ಗ್ರಾಮದಲ್ಲಿ ಬಿ.ಆರ್.ಎಜುಕೇಶನ್ ಅಕಾಡೆಮಿ ಶಾಲೆಯಲ್ಲಿ ಎಲ್ಲಾ ಮಕ್ಕಳಿಗೂ ಯೂನಿಫಾರ್ಮ್ ವಿತರಿಸಲಾಗುತ್ತದೆ. ವಿದ್ಯಾರ್ಥಿಗಳು ಅದಕ್ಕೆ ಶುಲ್ಕ ಪಾವತಿಸಬೇಕು. ಆದರೆ ಈ ವಿದ್ಯಾರ್ಥಿನಿಯರು ಶುಲ್ಕ ನೀಡಲಿಲ್ಲವೆಂದು ಶಿಕ್ಷಕಿ ತರಗತಿಯಿಂದ ಹೊರಹಾಕಿದ್ದರು.
ಪೊಲೀಸರಿಗೆ ಸಲ್ಲಿಸಿದ ದೂರಿನಲ್ಲಿ  ಬಾಲಕಿಯರ ತಂದೆ ಚುಂಚುನ್ ಸಾ, ನಿನ್ನೆ ಮಕ್ಕಳನ್ನು ಕರೆದುಕೊಂಡು ಬರಲೆಂದು ಶಾಲೆಗೆ ಹೋದಾಗ ಶಿಕ್ಷಕಿಯನ್ನು ಭೇಟಿಯಾಗುವಂತೆ ಹೇಳಲಾಗಿತ್ತು.ಶಿಕ್ಷಕಿಯನ್ನು ಭೇಟಿ ಮಾಡಿದಾಗ ಯೂನಿಫಾರ್ಮ್ ಶುಲ್ಕ ಪಾವತಿಸುವಂತೆ ಹೇಳಿದರು. ಸ್ವಲ್ಪ ಸಮಯಾವಕಾಶ ನೀಡುವಂತೆ ಕೇಳಿದ್ದೆ. ಆದರೆ ಮರುದಿನ ಮಕ್ಕಳು ಶಾಲೆಗೆ ಹೋದಾಗ ಎಲ್ಲರೆದುರೇ ಯೂನಿಫಾರ್ಮ್ ಬಿಚ್ಚಿ ಶಾಲೆಯಿಂದ ಹೊರಹಾಕಿದರು. ಈ ಬಗ್ಗೆ ಶಾಲೆಯ ಪ್ರಾಂಶುಪಾಲರಿಗೆ ದೂರು ನೀಡಿದ್ದಕ್ಕೆ ಅವರು ಸ್ಪಂದಿಸಲಿಲ್ಲ. ಅದಕ್ಕಾಗಿ ಪೊಲೀಸರಿಗೆ ದೂರು ನೀಡಿದೆ ಎಂದು ಬಾಲಕಿಯರ ತಂದೆ ಹೇಳಿದ್ದಾರೆ.
ನಿನ್ನೆ ಪೊಲೀಸರು ಉಪ ವಿಭಾಗ ಪೊಲೀಸ್ ಅಧಿಕಾರಿ ರಾಜೇಶ್ ಕುಮಾರ್, ಪ್ರಾಂಶುಪಾಲರು ಹಾಗೂ ಶಿಕ್ಷಕಿಯನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.
ಈ ಘಟನೆ ಸಂವೇದನಾರಹಿತವಾಗಿದ್ದು ಅಪರಾಧಿಗಳು ಮತ್ತು ಶಾಲಾ ಆಡಳಿತ ಮಂಡಳಿ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದೆಂದು ರಾಜ್ಯ ಶಿಕ್ಷಣ ಸಚಿವ ಅಶೋಕ್ ಚೌಧರಿ ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT