ಅಹ್ಮದಾಬಾದ್: ಚಾಂಪಿಯನ್ಸ್ ಟ್ರೋಫಿ 2017ರ ಅಂತಿಮ ಹಣಾಹಣಿಯಲ್ಲಿ ಭಾರತ ಮತ್ತು ಪಾಕಿಸ್ತಾನ ರಾಷ್ಟ್ರಗಳು ಮುಖಾಮುಖಿಯಾಗಿದ್ದು, ಈ ಪಂದ್ಯ ಉಭಯ ರಾಷ್ಟ್ರಗಳ ಹೆಮ್ಮೆಯ ವಿಚಾರವಾಗಿದೆ ಎಂದು ಯೋಗ ಗುರು ಬಾಬಾ ರಾಮ್ ದೇವ್ ಅವರು ಭಾನುವಾರ ಹೇಳಿದ್ದಾರೆ.
ಈ ಕುರಿತಂತೆ ಮಾತನಾಡಿರುವ ಅವರು, ಭಾರತ ಮತ್ತು ಪಾಕಿಸ್ತಾನ ನಡುವಿನ ಕ್ರಿಕೆಟ್ ಪಂದ್ಯವನ್ನು ಕೇವಲ ಕ್ರೀಡಾ ಮನೋಭಾವದಿಂದಷ್ಟೇ ಅಲ್ಲ, ದೇಶದ ಹೆಮ್ಮೆಯ ವಿಚಾರವೆಂಬಂತೆ ಕಾಣಲಾಗುತ್ತಿದೆ. ಪಂದ್ಯದಲ್ಲಿ ಭಾರತ ಗೆಲವು ಸಾಧಿಸಲಿದೆ ಎಂಬ ನಂಬಿಕೆ ನನಗಿದೆ ಎಂದು ಹೇಳಿದ್ದಾರೆ.
ಬಹು ನಿರೀಕ್ಷಿತ ಭಾರತ ಮತ್ತು ಪಾಕಿಸ್ತಾನ ನಡುವಿನ ಐಸಿಸಿ ಚಾಂಪಿಯನ್ಸ್ ಟ್ರೋಫಿ ಸರಣಿಯ ಫೈನಲ್ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಬರೊಬ್ಬರಿ 32 ವರ್ಷಗಳ ಬಳಿಕ ಏಕದಿನ ಮಾದರಿಯ ಕ್ರಿಕೆಟ್ ಸರಣಿ ಫೈನಲ್ ನಲ್ಲಿ ಉಭಯ ತಂಡಗಳು ಮುಖಾಮುಖಿಯಾಗುತ್ತಿವೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos