ಆತ್ಮಸ್ಥಾನಂದ ಮಹಾರಾಜರೊಂದಿಗೆ ಪ್ರಧಾನಿ ನರೇಂದ್ರ ಮೋದಿ (ಸಂಗ್ರಹ ಚಿತ್ರ)
ಕೋಲ್ಕತ್ತಾ: ಪ್ರಧಾನಿ ನರೇಂದ್ರ ಮೋದಿ ಅವರ ಬದುಕಿನ ಪಥ ಬದಲಿಸಿದ್ದ ಗುರು ರಾಮಕೃಷ್ಣಾಶ್ರಮದ ಆತ್ಮಸ್ಥಾನಂದ ಮಹಾರಾಜ್(97) ಜೂ.18 ರಂದು ವಿಧಿವಶರಾಗಿದ್ದಾರೆ.
ವಯೋ ಸಹಜ ಸಮಸ್ಯೆಯನ್ನು ಎದುರಿಸುತ್ತಿದ್ದ ಆತ್ಮಸ್ಥಾನಂದ ಮಹಾರಾಜ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ತಮ್ಮ ಗುರು ಎಂದು ಪರಿಗಣಿಸಿದ್ದರು. ಅನಾರೋಗ್ಯಕ್ಕೀಡಾಗಿದ್ದ ಸ್ವಾಮಿ ಆತ್ಮಸ್ಥಾನಂದ ಮಹಾರಾಜ್ ಅವರನ್ನು ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ಹಲವು ಬಾರಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದರು.
ಪ್ರಧಾನಿ ನರೇಂದ್ರ ಮೋದಿ ಅವರು ರಾಜಕೀಯ ಪ್ರವೇಶಿಸುವುದಕ್ಕೂ ಮುನ್ನ ರಾಮಕೃಷ್ಣಾಶ್ರಮದಲ್ಲಿ ಸನ್ಯಾಸಿಯಾಗಲು ಬಯಸಿದ್ದರು. ಆದರೆ ಬಾಲಕ ಮೋದಿ ಕೋರಿಕೆಯನ್ನು ಅಂದು ತಿರಸ್ಕರಿಸಿದ್ದ ಆತ್ಮಸ್ಥಾನಂದ ಸ್ವಾಮೀಜಿ, ಮೋದಿ ಸನ್ಯಾಸತ್ವ ತಡೆದು ದೇಶ ಸೇವೆ ಮಾಡುವಂತೆ ಸಲಹೆ ನೀಡಿದ್ದರು.
ಗುರುವಿನ ಅಗಲಿಕೆಯ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಆತ್ಮಸ್ಥಾನಂದ ಮಹಾರಾಜರು ಇಹಲೋಕ ತ್ಯಜಿಸಿರುವುದು ವೈಯಕ್ತಿಕವಾಗಿ ನನಗೆ ನಷ್ಟ ಉಂಟು ಮಾಡಿದೆ. ನನ್ನ ಜೀವನದ ಮುಖ್ಯವಾದ ಕಾಲಘಟ್ಟದಲ್ಲಿ ಅವರ ಸಾನ್ನಿಧ್ಯ ದೊರೆತಿತ್ತು. ಕೋಲ್ಕತ್ತಾಗೆ ಭೇಟಿ ನೀಡಿದಾಗಲೆಲ್ಲಾ ಅವರ ಆಶೀರ್ವಾದ ಪಡೆಯುತ್ತಿದ್ದೆ. ಅವರ ವ್ಯಕ್ತಿತ್ವವನ್ನು ಮುಂದಿನ ಪೀಳಿಗೆ ಸ್ಮರಿಸಲಿದೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos